ಎನ್ನ ಕುಲಸೂತಕವ ಕಳೆದಾತ ಬಸವಣ್ಣ. ಎನ್ನ ಛಲಸೂತಕವ ಕಳೆದಾತ ಬಸವಣ್ಣ. ಎನ್ನ ತನುಸೂತಕವ ಕಳೆದಾತ ಬಸವಣ್ಣ. ಎನ್ನ ಮನಸೂತಕವ ಕಳೆದಾತ ಬಸವಣ್ಣ. ಎನ್ನ ನೆನಹುಸೂತಕವ ಕಳೆದಾತ ಬಸವಣ್ಣ. ಎನ್ನ ಭಾವಸೂತಕವ ಕಳೆದಾತ ಬಸವಣ್ಣ. ಎನ್ನ ಅರುಹುಮರಹಿನ ಸಂದುಸಂಶಯವಬಿಡಿಸಿದಾತ ಬಸವಣ್ಣ. ಎನ್ನ ತನ್ನೊಳಗೆ ಇಂಬಿಟ್ಟುಕೊಂಡಾತ ಬಸವಣ್ಣ. ತನ್ನ ಎನ್ನೊಳಗೆ ಇಂಬಿಟ್ಟುಕೊಂಡಾತ ಬಸವಣ್ಣ. ನಿಜದ ನಿರ್ವಯಲ ಬಾಗಿಲ ನಿಜವ ತೋರಿದಾತ ಬಸವಣ್ಣ. ಬಸವಣ್ಣಪ್ರಿಯ ಚೆನ್ನಸಂಗಯ್ಯನ ಹೃದಯಕಮಲದಲ್ಲಿ ನಿಜನಿವಾಸಿಯಾಗಿರಿಸಿದ ಎನ್ನ ತಂದೆ ಸಂಗನಬಸವಣ್ಣನು.. ✍️ ಚಿನ್ಮಯ ಜ್ಞಾನಿ ಚೆನ್ನಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏
#ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ