Malgudi Express
582 views
#📜ಪ್ರಚಲಿತ ವಿದ್ಯಮಾನ📜 ವಸ್ತು ಪ್ರದರ್ಶನ ಸಣ್ಣ ಉದ್ಯಮಿಗಳು ಆದಾಯ ಹೆಚ್ಚಿಸಿಕೊಳ್ಳಲು ಉತ್ತಮ ವೇದಿಕೆ: ಸಂತೋಷ್ ಲಾಡ್ ಗುಡಿ ಕೈಗಾರಿಕೆ ಮತ್ತು ಕರಕುಶಲ ವಸ್ತುಗಳ ಪ್ರದರ್ಶನ ವಸ್ತು ಮಳಿಗೆ ವೀಕ್ಷಿಸಿ, ವಸ್ತುಗಳನ್ನು ಖರೀದಿಸಿ, ಪ್ರೋತ್ಸಾಹಿಸಿದ ಸಚಿವ ಧಾರವಾಡ: ಜಿಲ್ಲಾ ಪಂಚಾಯತಯ ಗ್ರಾಮೀಣ ಮತ್ತು ಸಣ್ಣ ಉದ್ಯಮ ವಿಭಾಗದಿಂದ 2025-26 ನೇ ಸಾಲಿನ ವಸ್ತುಪ್ರದರ್ಶನ ಯೋಜನೆಯಡಿ ಫೆಬ್ರವರಿ 24 ರಿಂದ 28, 2026 ರವರೆಗೆ ಆಯೋಜಿಸಿರುವ ಜಿಲ್ಲಾ ಮಟ್ಟದ ಕುಶಲಕರ್ಮಿಗಳ ಹಾಗೂ ಗುಡಿ ಕೈಗಾರಿಕೆಗಳ ಉತ್ಪನ್ನಗಳ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳವನ್ನು ಧಾರವಾಡದ ಕರ್ನಾಟಕ ಕಾಲೇಜ (ಕೆಸಿಡಿ) ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಉದ್ಘಾಟಿಸಿದರು. ಪ್ರದರ್ಶನದಲ್ಲಿ ಭಾಗವಹಿಸಿದ್ದ ಗುಡಿ ಕೈಗಾರಿಕಾರರು ಹಾಗೂ ಸ್ವ ಸಹಾಯ ಸಂಘಗಳ ಸದಸ್ಯರೊಂದಿಗೆ ಮಾತನಾಡಿ, ವಸ್ತುಗಳನ್ನು ಹೇಗೆ ತಯಾರಿಸುತ್ತೀರಿ, ಕಚ್ಚಾ ಸಾಮಗ್ರಿ ಎಲ್ಲಿಂದ ತರುತ್ತೀರಿ, ದಿನನಿತ್ಯದ ಉತ್ಪಾದನೆ ಎಷ್ಟು, ವ್ಯಾಪಾರದ ಸ್ಥಿತಿ ಹೇಗಿದೆ ಎಂಬ ಬಗ್ಗೆ ವಿವರವಾಗಿ ವಿಚಾರಿಸಿ, ಮಾಹಿತಿ ಪಡೆದರು. ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಒಟ್ಟು 32 ಮಳಿಗೆಗಳು ಸ್ಥಾಪಿಸಲ್ಪಟ್ಟಿದ್ದು, ಕೈಗಾರಿಕಾ ವಸ್ತುಗಳು, ಗೃಹೋಪಯೋಗಿ ಸಾಮಗ್ರಿಗಳು, ಆಹಾರ ಪದಾರ್ಥಗಳು, ಹಸ್ತಕಲಾ ವಸ್ತುಗಳು ಸೇರಿದಂತೆ ವಿವಿಧ ಉತ್ಪನ್ನಗಳನ್ನು ಪ್ರದರ್ಶನಕ್ಕೆ ಮತ್ತು ಮಾರಾಟಕ್ಕೆ ಇರಿಸಲಾಗಿತ್ತು. ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಹಲವರಾ ಸಾರ್ವಜನಿಕರು ಸ್ಥಳದಲ್ಲೇ ವಸ್ತುಗಳನ್ನು ಖರೀದಿಸಿದರು. ಸಂತೋಷ್ ಲಾಡ್ ತಮಗೆ ಇಷ್ಟವಾದ ಕೆಲವು ವಸ್ತುಗಳನ್ನು ಸ್ವತಃ ಖರೀದಿಸಿ, ಸ್ಥಳೀಯ ಕಲಾವಿದರು ಹಾಗೂ ಉದ್ಯಮಿಗಳನ್ನು ಪ್ರೋತ್ಸಾಹಿಸಿದರು. ಈ ವಸ್ತು ಪ್ರದರ್ಶನ ಸಣ್ಣ ಉದ್ಯಮಿಗಳಿಗೆ ತಮ್ಮ ಉತ್ಪನ್ನಗಳನ್ನು ಪರಿಚಯಿಸಲು ಹಾಗೂ ಆದಾಯವನ್ನು ಹೆಚ್ಚಿಸಿಕೊಳ್ಳಲು ಉತ್ತಮ ವೇದಿಕೆಯಾಗಿದೆ ಎಂದು ಅಭಿಪ್ರಾಯಪಟ್ಟರು. ಮೇಳದಲ್ಲಿ ಜಿಲ್ಲಾ ಪಂಚಾಯತ ಎನ್‍ಆರ್‍ಎಲ್‍ಎಮ್ ಮತ್ತು ಸಂಜೀವಿನಿ ಒಕ್ಕೂಟ ಯೋಜನೆಯಡಿ ಅನೇಕ ಸ್ತ್ರೀಸ್ವಸಹಾಯ ಸಂಘಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ, ಸಾರ್ವಜನಿಕರು ಭಾಗವಹಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್. ಆರ್. ಪಾಟೀಲ, ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಪ್ರೊಬೇಷನರಿ ಐಎಎಸ್ ಅಧಿಕಾರಿ ರೀತಿಕಾ ವರ್ಮಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಯೋಜನಾ ನಿರ್ದೇಶಕ ಬಿ.ಎಸ್. ರಾಠೋಡ್ ಸೇರಿದಂತೆ ಇತರರು ಹಾಜರಿದ್ದರು. #Exhibition #good #platform #smallentrepreneurs #increase #income #SantoshLad #malgudiexpress #malgudinews #news #TopNews