ಶ್ರೀ ಗುರು ಬಸವ ಲಿಂಗಾಯ ನಮಃ.. "ಸಾಧಕದೆಸೆಯಲ್ಲಿ ಕುಲವನರಸಬಹುದಲ್ಲದೆ, ಸಿದ್ಧದೆಸೆಯಲ್ಲಿ ಅರಸಲಹುದೆ??? ಹಲವು ಜಾತಿಯ ಕಟ್ಟಿಗೆಯ ಸುಟ್ಟಲ್ಲಿ ಅಗ್ನಿಯೊಂದಲ್ಲದೆ ಅಲ್ಲಿ ಕಟ್ಟಿಗೆಗಳ ಕುರುಹು ಕಾಂಬುದೆ??? ಶಿವಜ್ಞಾನ ಸಿದ್ಧರಾದ ಶಿವ ಭಕ್ತರಲ್ಲಿ ಪೂರ್ವಜಾತಿಯನರಸುವ ಅರೆಮರುಳರನೇನೆಂಬೆ ಕೂಡಲಚೆನ್ನಸಂಗಮದೇವಾ.. ✍🏻 ಚಿನ್ಮಯ ಜ್ಞಾನಿ ಚೆನ್ನಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻
#ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು