"ಭಕ್ತ ಭಕ್ತನ ಮನೆಗೆ ಬಂದರೆ, ಭೃತ್ಯಾಚಾರವ ಮಾಡಬೇಕು: ಕರ್ತನಾಗಿ ಕಾಲ ತೊಳೆಯಿಸಿಕೊಂಡರೆ, ಹಿಂದೆ ಮಾಡಿದ ಭಕ್ತಿಗೆ ಹಾನಿ! ಲಕ್ಷಗಾವುದ ದಾರಿಯ ಹೋಗಿ ಭಕ್ತನು ಭಕ್ತನ ಕಾಂಬುದು ಸದಾಚಾರ; ಅಲ್ಲಿ ಕೂಡಿ ದಾಸೋಹವ ಮಾಡಿದರೆ ಕೂಡಿಕೊಂಬನು ನಮ್ಮ ಕೂಡಲಸಂಗಮದೇವನು.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು#ಬಸವಾದಿ ಶರಣ ಶರಣೆಯರು#ವಚನಗಳು#//🌳ವಚನ ಸಾಹಿತ್ಯ 🌳//#ಶರಣ ಸಾಹಿತ್ಯ