"ನೀನು' `ನಾನು' ಎಂಬ ಉಭಯಸಂಗವಳಿದು ತಾನು ತಾನಾದ ತ್ರಿಕೂಟವೆಂಬ ಮಹಾಗಿರಿಯ ತುಟ್ಟತುದಿಯ ಮೆಟ್ಟಿ ನೋಡಲು, ಬಟ್ಟಬಯಲು ಕಾಣಬಹುದು ನೋಡಾ ! ಆ ಬಯಲ ಬೆರಸುವಡೆ ತ್ರಿಕೂಟಗಿರಿಯೊಳಗೊಂದು ಕದಳಿಯುಂಟು ನೋಡಾ ! ಆ ಕದಳಿಯ ತಿಳಿದು ಅಲ್ಲಿ ಒಳಹೊಕ್ಕು ನೋಡಲು ತೊಳಗಿ ಬೆಳಗುವ ಜ್ಯೋತಿಯುಂಟು ಕೇಳಾ ! ನಡೆ ಅಲ್ಲಿಗೆ ತಾಯೆ,
ಗುಹೇಶ್ವರ ಲಿಂಗದಲ್ಲಿ ಪರಮ ಪದವಿ ನಿನಗೆ ಸಯವಪ್ಪುದು ನೋಡಾ.. ✍️ ವ್ಯೋಮಕಾಯ ಮಹಾಜ್ಞಾನಿ ಅನುಭವ ಮಂಟಪದ ಪ್ರಥಮ ಶೂನ್ಯ ಪೀಠಾಧಿಪತಿ ಅಲ್ಲಮಪ್ರಭುದೇವರ ವಚನ.. ಶರಣು ಶರಣಾರ್ಥಿಗಳು 🙏
#//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು