ಕಾಯಕವೇ ಕೈಲಾಸ..
609 views
8 hours ago
ಶ್ರೀ ಗುರು ಬಸವ ಲಿಂಗಾಯ ನಮಃ.. "ಸರ್ಪನ ಗಮನದಂತೆ ಗಮನವುಳ್ಳರೆ ಭಕ್ತನೆಂಬೆ. ನವಿಲಿನ ಕಣ್ಣಿನಂತೆ ಕಣ್ಣುಳ್ಳರೆ ಭಕ್ತನೆಂಬೆ. ಬೆಕ್ಕಿನ ಹೃದಯದಂತೆ ಹೃದಯವುಳ್ಳರೆ ಭಕ್ತನೆಂಬೆ. ಕಾಕನ ಪಿಕನ ಸ್ನೇಹವ ಹಿಂದಿಟ್ಟು, ಸೂರ್ಯಂಗೆ ಕಮಲದ ರೂಪವ ಮುಂದಿಟ್ಟು ಮಾಟವರಿದು ಮಾಡುವಾತನಲ್ಲದೆ ಭಕ್ತನಲ್ಲ ಕಾಣಾ ಗುರುನಿರಂಜನ ಚನ್ನಬಸವಲಿಂಗಾ.. ✍🏻 ದೇಶಿಕೇಂದ್ರ ಸಂಗನಬಸವಯ್ಯನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ