Malgudi Express
546 views
#📜ಪ್ರಚಲಿತ ವಿದ್ಯಮಾನ📜 ಕಟ್ಟಡ ಕಾರ್ಮಿಕರು ಮೃತಪಟ್ಟಿದ್ದು ನಿಜಕ್ಕೂ ದುರದೃಷ್ಟಕರ: ಸಂತೋಷ್ ಲಾಡ್ ಹುಬ್ಬಳ್ಳಿ: ಹುಬ್ಬಳ್ಳಿಯ ಗಬ್ಬೂರು ಬಳಿ ನಿರ್ಮಾಣವಾಗುತ್ತಿರುವ ಕೆಎಲ್‌ಇ ಸಂಸ್ಥೆಯ ವೈದ್ಯಕೀಯ ಕಾಲೇಜು ಕಟ್ಟಡದಿಂದ ಆಯತಪ್ಪಿ ಬಿದ್ದು ಇಬ್ಬರು ಕಟ್ಟಡ ಕಾರ್ಮಿಕರು ಮೃತಪಟ್ಟಿದ್ದು ನಿಜಕ್ಕೂ ದುರದೃಷ್ಟಕರ. ವಿಷಯ ತಿಳಿದ ತಕ್ಷಣ ಕಿಮ್ಸ್‌ಗೆ ಭೇಟಿ ನೀಡಿ ಕುಟುಂಬ ಮೃತರ ಸದಸ್ಯರಿಗೆ ಸಾಂತ್ವನ ಹೇಳಿದೆ. ಅಲ್ಲದೇ ಅವರ ಕುಟುಂಬದ ನೆರವಿಗೆ ವೈಯಕ್ತಿಕವಾಗಿ ಧನಸಹಾಯ ಮಾಡಿದ್ದೇನೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಕಟ್ಟಡ ನಿರ್ಮಾಣ ಕಾರ್ಮಿಕರು ಮೃತಪಟ್ಟರೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೆರವು ಒದಗಿಸಲಾಗುತ್ತದೆ. ಈ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದಿದ್ದಾರೆ. ಮೃತರನ್ನು ಕುಂದಗೋಳ ತಾಲೂಕಿನ ಹೊತ್ತಿಗೇರಿ ನಿವಾಸಿ ಮಲ್ಲೇಶ್‌ ಹಾಗೂ ಅಣ್ಣಿಗೇರಿಯ ಅಕ್ಬರ್‌ ಸಂಗಟಿ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದುರ್ಘಟನೆ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. #truly #unfortunate #construction #workers #died #SantoshLad #Hubballi #malgudiexpress #malgudinews #news #TopNews