ಶ್ರೀ ಗುರು ಬಸವ ಲಿಂಗಾಯ ನಮಃ.. "ಎನಗೆ ಹರಿಯಿತ್ತು ತಮವೆಂಬ ಸಂಸಾರದ ಬಂಧನ. ಅಡಗಿಯೂ ಉಡುಗಿಯೂ ಕಂಡೆಹೆನೆಂದೆಂಬ ಸಂಶಯ. ಸಂಕಲ್ಪ ಸಂದೇಹ ಭ್ರಾಂತು ಭ್ರಮೆಯ ಭಾವಕ್ಕೆ ಬಯಲಾಯಿತ್ತು. ನಿತ್ಯನಿರಂಜನ ಪರಂಜ್ಯೋತಿ ಪ್ರಕಾಶವೆನಗೆ ತಲೆದೋರಿತ್ತು. ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನ ದೇವಯ್ಯಾ, ಕಾಣಬಂದಿತ್ತು ಕಾಣಾ, ಪ್ರಭುದೇವರ ಕಾರುಣ್ಯ ಪ್ರಸಾದದಿಂದ ಬಸವಣ್ಣ.. ✍🏻 ಶರಣ ಮರುಳಶಂಕರದೇವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿ ಗಳು 🙏🏻
#ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು