ಶ್ರೀ ಗುರು ಬಸವ ಲಿಂಗಾಯ ನಮಃ.. "ಕೇಳಿರೆ ಕೇಳಿರೆ ಶಿವವಚನ, ಗುರುವಚನ. ಪುರಾತರ ವಚನಾನುಭವ ಕೇಳಿ ಬದುಕಿರಯ್ಯಾ. ಕೇಳಿದ ಸದ್ಭಕ್ತರೆಲ್ಲರು ಕೃತಾರ್ಥರಪ್ಪರು. ತನು ಕರಗಿ, ಮನ ಕೊರಗಿ, ಭಾವ ಬೆಚ್ಚದೊ! ಅಹಂಕಾರವಳಿದು, ಶರಣರ ಅನುಭಾವವ ಕೇಳಿದಡೆ, ಅದೇ ಮುಕ್ತಿ ನೋಡಿರೆ, ಇಂತಲ್ಲದೆ ಮನೋವ್ಯಾಕುಲನಾಗಿ, ತನುಮುಟ್ಟಿ ಕೇಳಿದಡೆ, ಉಪದೇಶವೆಂತು ಸಲುವುದಯ್ಯಾ??? ಎಂತಳವಡುವುದಯ್ಯಾ??? ಮಹಾಲಿಂಗ ಕಲ್ಲೇಶ್ವರಾ, ಗುರುವಚನ ಪರಾಙ್ಮುಖಂಗೆ ಎಂದೆಂದೂ ಭವ ಹಿಂಗದು ನೋಡಾ.. ✍🏻 ಹಾವಿನಹಾಳ ಕಲ್ಲಯ್ಯನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏
#//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು