2023-25 ಉತ್ತೀರ್ಣರಿಗೆ ಗುಡ್ ನ್ಯೂಸ್: ಯುವನಿಧಿ ಯೋಜನೆ ಅರ್ಜಿ ಸಲ್ಲಿಕೆ ಶುರು
ಬೆಂಗಳೂರು: 2023, 2024 ಹಾಗೂ 2025ನೇ ಸಾಲಿನಲ್ಲಿ ಪದವಿ, ಡಿಪ್ಲೋಮಾ ಮತ್ತು ಸ್ನಾತಕೋತ್ತರ ಪದವಿ ಉತ್ತೀರ್ಣರಾದ ನಿರುದ್ಯೋಗಿ ಯುವಕರಿಗಾಗಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಪದವಿ ಪಡೆದಿದ್ದು 6 ತಿಂಗಳಾದರೂ ಸರ್ಕಾರಿ, ಖಾಸಗಿ ಅಥವಾ ಸ್ವಯಂ ಉದ್ಯೋಗ ಹೊಂದಿಲ್ಲದವರು ಹಾಗೂ ಉನ್ನತ ವಿದ್ಯಾಭ್ಯಾಸ ಮುಂದುವರೆಸದೇ ಇರುವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಆಸಕ್ತರು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅಥವಾ ಸೇವಾ ಸಿಂಧು ಪೋರ್ಟಲ್ http://sevasindhugs.karnataka.gov.in� ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಬಹುದು.