ಶ್ರೀ ಗುರು ಬಸವ ಲಿಂಗಾಯನಮಃ.. "ಅಯ್ಯಾ, ಸಜ್ಜನ ಸದ್ಭಾವಿಗಳ ಸಂಗದಿಂದ ಮಹಾನುಭಾವಿಗಳ ಕಾಣಬಹುದು, ಮಹಾನುಭಾವಿಗಳ ಸಂಗದಿಂದ ಶ್ರೀಗುರುವ ಕಾಣಬಹುದು, ಶ್ರೀಗುರುವಿನ ಸಂಗದಿಂದ ಲಿಂಗವ ಕಾಣಬಹುದು, ಲಿಂಗಸಂಗದಿಂದ ಜಂಗಮವ ಕಾಣಬಹುದು. ಜಂಗಮಸಂಗದಿಂದ ಪ್ರಸಾದವ ಕಾಣಬಹುದು, ಪ್ರಸಾದದಿಂದ ಆಚಾರವ ಕಾಣಬಹುದಯ್ಯಾ. ಆಚಾರದಿಂದ ತನ್ನ ಕಾಣಬಹುದಯ್ಯಾ ಇದು ಕಾರಣ ಕೂಡಲಚೆನ್ನಸಂಗಮದೇವಾ, ನಿಮ್ಮ ಸಜ್ಜನ ಸದ್ಭಾವಿಗಳ ಸಂಗವನೆ ಕರುಣಿಸಯ್ಯಾ ನಿಮ್ಮ ಧರ್ಮ.. ✍️ ಚಿನ್ಮಯ ಜ್ಞಾನಿ ಚೆನ್ನಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏
#//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು