ಕಾಯಕವೇ ಕೈಲಾಸ..
554 views
"ಅಜ್ಞಾನದಿಂದ ಹುಟ್ಟಿತ್ತು ಅಹಂ ಮಮತೆ, ಅಜ್ಞಾನದಿಂದ ಹುಟ್ಟಿತ್ತು ಮನಸ್ಸಂಚಲ, ಅಜ್ಞಾನದಿಂದ ಹುಟ್ಟಿತ್ತು ಇಂದ್ರಿಯೋದ್ರೇಕ, ಅಜ್ಞಾನದಿಂದ ಹುಟ್ಟಿತ್ತು ದೇಹಮೋಹ, ಅಜ್ಞಾನದಿಂದ ಹುಟ್ಟಿತ್ತು ಅತಿಕಾಂಕ್ಷೆ, ಅಜ್ಞಾನದಿಂದ ಹುಟ್ಟಿತ್ತು ತ್ರಿವಿಧಮಲ, ಅಜ್ಞಾನದಿಂದ ಹುಟ್ಟಿತ್ತು ಸಂಸಾರ, ಅಜ್ಞಾನದಿಂದ ಹುಟ್ಟಿತ್ತು ರಾಗದ್ವೇಷ, ಅಜ್ಞಾನದಿಂದ ಹುಟ್ಟಿತ್ತು ಸರ್ವಪ್ರಪಂಚು, ಅಜ್ಞಾನದಿಂದ ಹುಟ್ಟಿತ್ತು ಸರ್ವದುಃಖ, ಕೂಡಲಸಂಗಮದೇವಾ, ಈ ಅಜ್ಞಾನಭ್ರಮೆಯ ಕೆಡಿಸಿದಲ್ಲದೆ ನಿಮ್ಮನೊಡಗೂಡಬಾರದಯ್ಯಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ