"ದೇವ ದೇವ ಮಹಾಪ್ರಸಾದ! ನಿಮ್ಮಡಿಗಳೆಂದಂತೆಯಲ್ಲದೆ ಎನಗೆ ಬೇರೆ ಸ್ವತಂತ್ರವುಂಟೆ??? ದರ್ಪಣದೊಳಗಣ ಪ್ರತಿಬಿಂಬವ ನೋಡುವ ಮುಖಕ್ಕೆ
ಭಿನ್ನಭಾವವುಂಟೆ??? ಚರಿಸಿ ಬಪ್ಪ ಅನಂತ ಸುಳುಹಿನೊಳಗೆ ನೀನೊಬ್ಬನೆ, ನಿನ್ನೊಳಗೆ ಅನಂತ ಸುಳುಹು ಅಡಗಿದವು. ನಿಮಗೆ ಮಾಡಿದ ಸಯದಾನವ ನಿಮಗೆ ನೀಡುವೆನು, ಅವಧರಿಸಬೇಕಯ್ಯಾ, ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏
#ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು