#✌️ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಬಳಗ✌️ ಪ್ರಧಾನಿಗಳಾದ ಶ್ರೀ @narendramodi ಅವರ ನೇತೃತ್ವದ NDA ಸರ್ಕಾರ ಕಬ್ಬು ಬೆಳೆಗಾರರಿಗೆ ಸಿಹಿ ಕೊಟ್ಟಿದೆ.
ಕಬ್ಬು ಬೆಳೆಯುವ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಮಿತಿಯು 2026-27ನೇ ಹಂಗಾಮಿನಲ್ಲಿ ಕಬ್ಬಿಗೆ ಶೇ.10.25 ಮೂಲ ರಿಕವರಿ ದರದ ಮೇಲೆ ಪ್ರತಿ ಕ್ವಿಂಟಲ್ಗೆ 365 ರೂ. ನ್ಯಾಯಯೋಚಿತ ಮತ್ತು ಲಾಭದಾಯಕ ಬೆಲೆಯನ್ನು (FRP) ಅನುಮೋದಿಸಿದೆ.
ಕೇಂದ್ರ ಸರ್ಕಾರ ಎಫ್.ಆರ್.ಪಿ. ದರವನ್ನು 10 ರೂ. ಹೆಚ್ಚಿಸಿರುವುದರಿಂದ ದೇಶದ ಸುಮಾರು 5 ಕೋಟಿ ಕಬ್ಬು ಬೆಳೆಯುವ ರೈತರ ಕುಟುಂಬಗಳಿಗೆ ಸುಮಾರು 1 ಲಕ್ಷ ಕೋಟಿ ರೂಪಾಯಿಗೂ ಅಧಿಕ ಲಾಭ ಸಿಗಲಿದೆ. ಜೊತೆಗೆ ಸಕ್ಕರೆ ಕಾರ್ಖಾನೆಗಳಲ್ಲಿ ಕೆಲಸ ಮಾಡುವ 5 ಲಕ್ಷಕ್ಕೂ ಹೆಚ್ಚು ಕಾರ್ಮಿಕರ ಕುಟುಂಬಗಳಿಗೆ ನೆರವಾಗಲಿದೆ.
ಕರ್ನಾಟಕದಲ್ಲೂ ಸುಮಾರು 10 ಲಕ್ಷ ರೈತರು ಈ ಎಫ್ಆರ್ಪಿ ದರದ ಲಾಭವನ್ನು ಪಡೆಯಲಿದ್ದಾರೆ. ರಾಜ್ಯದ ಬೆಳಗಾವಿ, ಬಾಗಲಕೋಟೆ, ಮಂಡ್ಯ, ಮೈಸೂರು, ವಿಜಯಪುರ ಮತ್ತು ಬಳ್ಳಾರಿ, ದಾವಣಗೆರೆ, ಬೀದರ್ ಹೀಗೆ ವಿವಿಧ ಜಿಲ್ಲೆಗಳು ಕಬ್ಬು ಬೆಳೆಯುವಲ್ಲಿ ಮುಂಚೂಣಿಯಲ್ಲಿದ್ದು, ದೇಶದ ಒಟ್ಟು ಸಕ್ಕರೆ ಉತ್ಪಾದನೆಯ ಶೇ.16 ರಷ್ಟು ಕರ್ನಾಟಕದ ಪಾಲಿದೆ. ಹೀಗಾಗಿ ಈ ಎಫ್ಆರ್ಪಿ ಹೆಚ್ಚಳವು ರಾಜ್ಯದ ಕಬ್ಬು ಬೆಳೆಗಾರರಿಗೆ ವರದಾನವಾಗಲಿದೆ.
#sugarcane
#FRP
#ಕಬ್ಬು "