ಶ್ರೀ ಗುರು ಬಸವ ಲಿಂಗಾಯ ನಮಃ.. "ಬಡವನೆಡವಿ ಧನಕಂಡಂತೆ, ಭವಪಡುವನ ಕರದೊಳು ಮೃಡಮೂರ್ತಿಲಿಂಗವ ಕಂಡೆನಲ್ಲ | ಬಿಡದೆ ಅರಸುವ ಬಳ್ಳಿ ಕಾಲತೊಡರಿ ಬಂದಂತೆ ಭವಭವಾಂತರದಲರಸಿದರೂ ಕಾಣದ ಕಾಲಸಂಹರದೊಡೆಯನ ಕಂಡೆನಲ್ಲ ಎನ್ನ ಕರದೊಳು ! ವೇದಾತೀತ ನಿರಂಜನನೆಂಬ ಲಿಂಗವ ಕಂಡೆನಲ್ಲ ಎನ್ನ ಕರದೊಳು ! ಹರಿಯಜರ ಮಧ್ಯದಲ್ಲಿ ಉರಿವುತಿಹ ಪರಂಜ್ಯೋತಿಲಿಂಗನ ಕಂಡೆನಲ್ಲ ಎನ್ನ ಕರದೊಳು ! ಕಂಡು ಕಂಡು ಬಿಡಲಾರದ ಸುವಸ್ತುವ ಕಂಡೆನಲ್ಲ ಎನ್ನ ಕರದೊಳು. ಆಹಾ ಎನ್ನ ಪುಣ್ಯವೆ ! ಆಹಾ ಎನ್ನ ಭಾಗ್ಯವೆ ! ಆಹಾ ಎನ್ನ ಪ್ರಾಣದ ನಲ್ಲನೆಂಬ ಪರಮಾತ್ಮಲಿಂಗವನಪ್ಪಿ ಅಗಲದಂತೆ ಮಾಡು ಕಂಡ್ಯಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.. ✍🏻 ಹೇಮಗಲ್ಲ ಹಂಪನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻
#ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು