Vijay Karnataka
290 views
14 hours ago
Mamata Banerjee- `ನನ್ನ ಹೊಟ್ಟೆಗೊದ್ದರು, ಮತ ಎಣಿಕೆ ಕೇಂದ್ರದಿಂದ ಹೊರ ಹಾಕಿದರು' ಎಂದ ದೀದಿ! ರಾಜೀನಾಮೆ ಕೊಡೊಲ್ಲ ಎಂದು ಪಟ್ಟು
ಚುನಾವಣೆಯಲ್ಲಿ ಪರಾಭವಗೊಂಡಿರುವ ಮಮತಾ ಬ್ಯಾನರ್ಜಿ ಇದೀಗ ತಾನು ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಮಾತ್ರವಲ್ಲದೆ ಭಬಾನಿಪುರ ಮತ ಎಣಿಕೆ ಕೇಂದ್ರಕ್ಕೆತೆರಳಿದ್ದ ತಮ್ಮ ಮೇಲೆ ಹಲ್ಲೆ ನಡೆಸಿ ಹೊರಹಾಕಲಾಗಿದೆ. ಮತದಾನ ಕೇಂದ್ರದಲ್ಲಿ ಅಕ್ರಮ ನಡೆದಿದ್ದು ಸಿಆರ್‌ಪಿಎಫ್ ಸಿಬ್ಬಂದಿ ಗೂಂಡಾಗಿರಿ ಮಾಡಿದ್ದಾರೆ, ಬಿಜೆಪಿ ಅಭ್ಯರ್ಥಿ ಸಹ ತಮ್ಮ ಬೆಂಬಲಿಗರೊಂದಿಗೆ ಮತ ಎಣಿಕೆ ಕೇಂದ್ರಕ್ಕೆ ನುಗ್ಗಿದ್ದಾರೆ ಎಂದು ಎಂದು ಗಂಭೀರ ಆರೋಪ ಮಾಡಿದ್ದಾರೆ. ಒಟ್ಟಾರೆ ತಮ್ಮ ಪಕ್ಷಕ್ಕೆ ಬರಬೇಕಿದ್ದ 100 ಸ್ಥಾನಗಳನ್ನು ಬಲವಂತವಾಗಿ ಕಸಿದುಕೊಳ್ಳಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾನು ಭಬಾನಿಪುರ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿದಾಗ ಸಿಆರ್ ಪಿಎಫ್ ಗೂಂಡಾಗಳು ತನ್ನ ಹೊಟ್ಟೆ ಮತ್ತು ಬೆನ್ನಿಗೆ ಒದ್ದು ಹೊರತಳ್ಳಿದ್ದಾರೆ ಎಂದು ಗಂಭೀರ ಆಱೋಪ ಮಾಡಿದ್ದಾರೆ ಮಮತಾ ಬ್ಯಾನರ್ಜಿ. ಅವರು ಹೇಳಿದ್ದೇನು? #Mamata Banerjee Allegations