Gadag: ಬಟ್ಟೆ ತೊಳೆಯಲು ಹೋಗಿ ಕೃಷಿಹೊಂಡದಲ್ಲಿ ಬಿದ್ದು ಲಕ್ಷ್ಮವ್ವ, ಮುತ್ತವ್ವ ಸಾವು
ಗದಗ ಜಿಲ್ಲೆಯ ತಿಮ್ಮಾಪೂರ ಗ್ರಾಮದಲ್ಲಿ, ಬಟ್ಟೆ ತೊಳೆಯಲು ಕೃಷಿಹೊಂಡಕ್ಕೆ ತೆರಳಿದ್ದ ಇಬ್ಬರು ಬಾಲಕಿಯರು ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ. ಲಕ್ಷ್ಮವ್ವ (15) ಮತ್ತು ಮುತ್ತವ್ವ (8) ಮೃತಪಟ್ಟಿದ್ದು, ಈ ಹೃದಯವಿದ್ರಾವಕ ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.