"ಮುತ್ತು ನೀರಲ್ಲಿ ಹುಟ್ಟಿ ಮತ್ತೆ ನೀರಪ್ಪುದೆ, ಗುರುಕಾರುಣ್ಯವ ಹಡೆದ ಭಕ್ತನು ಹಿಂದಣ ಪೂರ್ವಾಶ್ರಯವ ಬೆರಸಿದಡೆ, ಗುರುದ್ರೋಹ ಲಿಂಗದ್ರೋಹ ಜಂಗಮದ್ರೋಹ ಆಚಾರದ್ರೋಹ ಪ್ರಸಾದದ್ರೋಹ. ಇಂತೀ ಪಂಚಮಹಾಪಾತಕಂಗಳು ಭಕ್ತಂಗಲ್ಲದೆ ಭವಿಗೆಲ್ಲಿಯದೊ ಗುರುವಿದು, ಲಿಂಗವಿದು, ಜಂಗಮವಿದು ಆಚಾರವಿದು, ಪ್ರಸಾದವಿದೆಂದರಿಯದಿದ್ದಡೆ ಕುಂಬಿಪಾತಕ ನಾಯಕನರಕ ಕೂಡಲಸಂಗಮದೇವಾ.. ✍🏻 ವಿಶ್ವ ಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻
#ಬಸವಣ್ಣನವರ ವಚನಗಳು #ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳//