ಕಾಯಕವೇ ಕೈಲಾಸ..
532 views
16 days ago
"ಸೋಮವಾರ ಮಂಗಳವಾರ ಶಿವರಾತ್ರಿಯೆಂದು ಮಾಡುವ ಭಕ್ತರ ಲಿಂಗಭಕ್ತಂಗೆ ನಾನೆಂತು ಸರಿಯೆಂಬೆನಯ್ಯಾ? ದಿನ ಶ್ರೇಷ್ಠವೋ ಲಿಂಗ ಶ್ರೇಷ್ಠವೋ? ದಿನ ಶ್ರೇಷ್ಠವೆಂದು ಮಾಡುವ ಪಂಚಮಹಾಪಾತಕರ ಮುಖವ ನೋಡಲಾಗದು. ಸೋಮೇ ಭೌಮೇ ವ್ಯತೀಪಾತೇ ಸಂಕ್ರಾಂತಿ ಶಿವರಾತ್ರಯೋಃ ಏಕಭಕ್ತೋಪವಾಸೇನ ನರಕೇ ಕಾಲಮಕ್ಷಯಂ ಇದು ಕಾರಣ ಕೂಡಲಚೆನ್ನಸಂಗಯ್ಯಾ ಇಂಥವರ ಮುಖವ ನೋಡಲಾಗದು.. ✍️ ಚೆನ್ನಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು