"ಜನನವಿಲ್ಲದ ಜನಿತನು ನೀನು ನೋಡಯ್ಯಾ, ಜನಿಯಿಸಿ ಸಂಸಾರವನರಿಯದ ನಿರ್ವಿಕಾರಿ ನೀನು ನೋಡಯ್ಯಾ, ಭವಬಂಧನಗಳಿಲ್ಲದ ನಿತ್ಯನಿಜತತ್ವವು ನೀನು ನೋಡಯ್ಯಾ, ನಿನ್ನ ಚರಣಸೇವೆಯ ಮಾಡಿ, ಎನ್ನ ಭವ ಹರಿಯಲೆಂದಿಪ್ಪೆನಲ್ಲದೆ, ನಿಮ್ಮ ಘನವೆಂತೆಂದು ಅರಿಯೆ ನೋಡಯ್ಯಾ. ಕೂಡಲಸಂಗಮದೇವಾ, ನೀನು ಕೊಂಡಾಡಲಾನು ಪ್ರಾಪ್ತನೆ ಹೇಳಾ ಪ್ರಭುವೆ.. ✍ ಗುರು ಬಸವಣ್ಣನವರ ವಚನ ಸ.ವ.ಸಂ: ೧ವ.ಸಂ: ೧೧೯೫..
#ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು