"ಪರಸ್ತ್ರೀ ಪರಾರ್ಥ ಪರಾನ್ನಕ್ಕೆ ಸುಳಿವ ಅಣ್ಣಗಳು ನೀವು ಕೇಳಿರೆ. ಪರಸ್ತ್ರೀಗೆ ಚಕ್ಷುದಗ್ಧವಾಗಿರಬೇಕು ಕೇಳಿರಣ್ಣಾ . ಪರಾರ್ಥಕ್ಕೆ ಹಸ್ತದಗ್ಧವಾಗಿರಬೇಕು ಕೇಳಿರಣ್ಣಾ . ಪರಾನ್ನಕ್ಕೆ ಜಿಹ್ವೆದಗ್ಧವಾಗಿರಬೇಕು ಕೇಳಿರಣ್ಣಾ . ನಿಂದೆಸ್ತುತಿಗೆ ಕಿವುಡನಾಗಿರಬೇಕು ಕೇಳಿರಣ್ಣಾ . ಬಯಲಬ್ರಹ್ಮವ ನುಡಿವ ತರ್ಕಿಗಳ ಕಂಡಡೆಮಾಗಿಯ ಕೋಗಿಲೆಯಂತೆ ಮೂಗನಾಗಿರಬೇಕು ಶರಣನು ಕೇಳಿರಣ್ಣಾ , ಇವರಿಂಗೆ ಭವನಾಸ್ತಿ ನೋಡಾ ಅಪ್ರಮಾಣ ಕೂಡಲಸಂಗಮದೇವಾ.. ✍🏻 ಬಾಲಸಂಗಯ್ಯನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿ ಗಳು 🙏🏻
#ಬಸವಣ್ಣನವರ ವಚನಗಳು #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ