Follow
ಕಾಯಕವೇ ಕೈಲಾಸ..
@76865063
5,358
Posts
3,351
Followers
ಕಾಯಕವೇ ಕೈಲಾಸ..
504 views
6 hours ago
ಅಮೆರಿಕದ ಕಾನ್ಸಾಸ್ ರಾಜ್ಯದ ಗವರ್ನರ್ ಅವರು ಏಪ್ರಿಲ್ 20, 2026 ರನ್ನು ಅಧಿಕೃತವಾಗಿ 'ಬಸವ ದಿನ' ಎಂದು ಘೋಷಿಸಿದ್ದು, ಇದು ಬಸವ ತತ್ವದ ಜಾಗತಿಕ ಪ್ರಸಾರಕ್ಕೆ ಸಂದ ಜಯವಾಗಿದೆ. 🌍✨ ಈ ಐತಿಹಾಸಿಕ ಸಾಧನೆಗೆ ಶ್ರಮಿಸಿದ "ಕಾನ್ಸಾಸ್" ಸಿಟಿಯ ಬಸವ ಬಳಗದ ಸದಸ್ಯರಿಗೆ ಬಸವ ಭಕ್ತರ ವತಿಯಿಂದ ಹೃದಯಪೂರ್ವಕ ಅಭಿನಂದನೆಗಳು. 💐🙏 #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
ಕಾಯಕವೇ ಕೈಲಾಸ..
9.4K views
18 hours ago
"ಗುರುಸಾಹಿತ್ಯ ಚೆನ್ನಬಸವಂಗಾಯಿತ್ತು ; "ಲಿಂಗಸಾಹಿತ್ಯ ಬಸವಂಗಾಯಿತ್ತು ; "ಜಂಗಮಸಾಹಿತ್ಯ ಅಲ್ಲಮದೇವಂಗಾಯಿತ್ತು ; "ಪ್ರಸಾದಸಾಹಿತ್ಯ ಬಿಬ್ಬಿಬಾಚರಸಂಗಾಯಿತ್ತು ; "ಪಾದೋದಕಸಾಹಿತ್ಯ ಹೊಡೆಹುಲ್ಲ ಬಂಕಯ್ಯಂಗಾಯಿತ್ತು ; "ಭಸ್ಮಸಾಹಿತ್ಯ ಅಕ್ಕನಾಗಮ್ಮಂಗಾಯಿತ್ತು ; "ರುದ್ರಾಕ್ಷಿಸಾಹಿತ್ಯ ಸರ್ವಪ್ರಮಥರಿಗಾಯಿತ್ತು. "ಮಂತ್ರಸಾಹಿತ್ಯದವರ ಕಂಡಡೆ, ಕಪಿಲಸಿದ್ಧಮಲ್ಲಿಕಾರ್ಜುನಯ್ಯನಿವರೆ ಎಂದು ಎನ್ನ ಮನ ನಂಬಿತ್ತು ನೋಡಾ, ಮಡಿವಾಳ ಮಾಚಯ್ಯ.. ✍ ಸಿದ್ದರಾಮೇಶ್ವರರ ವಚನ.. ಸ.ವ.ಸಂ:೪ ವ.ಸಂ:೧೯೪೧ #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳//
ಕಾಯಕವೇ ಕೈಲಾಸ..
352 views
18 hours ago
ಶ್ರೀ ಗುರು ಬಸವ ಲಿಂಗಾಯನಮಃ.. "ಗಂಗೆಯೆ ಘನ ಮುಟ್ಟಿದ ಪ್ರಾಣಿಗಳೆಲ್ಲಾ ದೇವತೆಗಳೆಂದಡೆ! ಗಂಗೆಯ ಸಂಚಾರ ಸಾವಿರಾರು ಗಾವುದ ಅದರಲ್ಲಿಯ ಪ್ರಾಣಿಗಳು ಅನಂತಾನಂತ ಇಷ್ಟು ಜೀವಿಗಳೆಲ್ಲಾ ದೇವರಾದಡೆ ಸ್ವರ್ಗದಲ್ಲಿ ನಿಯಮಿತ ದೇವತೆಗಳೆಂಬುದು ಅಪ್ರಸಿದ್ಧ ನೋಡಾ ಕಪಿಲಸಿದ್ಧಮಲ್ಲಿಕಾರ್ಜುನಾ.. ✍️ ಬಸವ ಯೋಗಿ ಸಿದ್ದರಾಮೇಶ್ವರರ ವಚನ.. ಶರಣು ಶರಣಾರ್ಥಿಗಳು 🙏🏻 #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
ಕಾಯಕವೇ ಕೈಲಾಸ..
544 views
18 hours ago
ಶ್ರೀ ಗುರು ಬಸವ ಲಿಂಗಾಯನಮಃ.. "ಅನ್ನದಾನಿ, ವಸ್ತ್ರದಾನಿ, ಹಿರಣ್ಯದಾನಿಗಳ ಮನೆಯ ಬಾಗಿಲ ಕಾದಿಪ್ಪರಯ್ಯಾ ಬಹುವಿಧದ ವೇಷಧಾರಿಗಳು. ``ವಯೋವೃದ್ಧಾಸ್ತಪೋವೃದ್ಧಾ ವೇದವೃದ್ಧಾ ಬಹುಶ್ರುತಾಃ ಸರ್ವೇ ತೇ ದಾನಿವೃದ್ಧಸ್ಯ ದ್ವಾರೇ ತಿಷ್ಠಂತಿ ಕಿಂಕರಾಃ _ಎಂದುದಾಗಿ ದೈನ್ಯವ ಬಿಟ್ಟಿಪ್ಪ ನಿರಾಭಾರಿಯ ತೋರಿ ಬದುಕಿಸಾ ಕೂಡಲಚೆನ್ನಸಂಗಮದೇವಾ.. ✍️ ಚಿನ್ಮಯ ಜ್ಞಾನಿ ಚೆನ್ನಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳//
ಕಾಯಕವೇ ಕೈಲಾಸ..
487 views
18 hours ago
285. ಎನಗೆನ್ನ ಬಸವಣ್ಣನ ತೊತ್ತು ನಮ್ಮ ತಾಯಿಯಾಗಬೇಕು; ಎನಗೆನ್ನ ಬಸವಣ್ಣನ ತೊಂಡ ನಮ್ಮ ತಂದೆಯಾಗಬೇಕು. ಎನಗೆನ್ನ ಬಸವಣ್ಣನ ತೊತ್ತು ತೊಂಡರು ನಮ್ಮ ತಾಯಿ ತಂದೆಗಳಾದರು; ನಿಮ್ಮ ತಂದೆ ತಾಯಿಗಳಾರು ಹೇಳಾ, ಕಪಿಲಸಿದ್ಧಮಲ್ಲಿನಾಥಯ್ಯಾ. ✍️ ಸಿದ್ಧರಾಮೇಶ್ವರರ ವಚನ.. ಶರಣು ಶರಣಾರ್ಥಿಗಳು 🙏 #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
ಕಾಯಕವೇ ಕೈಲಾಸ..
558 views
18 hours ago
"ಅಂಗದಿಚ್ಚೆಗೆ ಮದ್ಯ ಮಾಂಸವ ತಿಂಬರು.. "ಕಂಗಳಿಚ್ಚೆಗೆ ಪರವದುವ ನೆನೆವರು.. "ಲಿಂಗಲಾಂಚನ ದಾರಿಯಾದಲ್ಲಿ ಫಲವೇನು..??? "ಲಿಂಗ ಫಥವ ತಪ್ಪಿ ನಡೆವರು.. "ಜಂಗಮ ಮುಖದಿಂದ ನಿಂದೆ ಬಂದರೆ ಮಾರಿಂಗೆ ಹೋಹುದು ತಪ್ಪದು ಕೂಡಲಸಂಗಮದೇವ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳//
ಕಾಯಕವೇ ಕೈಲಾಸ..
596 views
18 hours ago
"ನಡೆಯಲರಿಯದೆ, ನುಡಿಯಲರಿಯದೆ ಲಿಂಗವ ಪೂಜಿಸಿ ಫಲವೇನು??? ಅವರ ಸುಖವೆನ್ನ ಸುಖ. ಅವರ ದುಃಖವೆನ್ನ ದುಃಖ! ಕೂಡಲಸಂಗನ ಶರಣರ ಮನನೊಂದರೆ ಆನು ಬೆಂದೆನಯ್ಯಾ! ✍️ ವಿಶ್ವಗುರು ಬಸವಣ್ಣ ನವರ ವಚನ.. ಶರಣು ಶರಣಾರ್ಥಿಗಳು 🙏 #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು