Follow
ಕಾಯಕವೇ ಕೈಲಾಸ..
@76865063
5,068
Posts
3,206
Followers
ಕಾಯಕವೇ ಕೈಲಾಸ..
530 views
5 hours ago
ಶ್ರೀ ಗುರು ಬಸವ ಲಿಂಗಾಯ ನಮಃ.. "ಹುಚ್ಚ ಮನದೊಳು ಸಿಕ್ಕಿ ಕಿಚ್ಚಾಗಿ ಬೆಂದಿರಲ್ಲಾ, ಆ ಹುಚ್ಚಮನವನಳಿದು ನಿಶ್ಚಿಂತ ನಿರಾಕುಳ ನಿರ್ಭರಿತನಾಗಬಲ್ಲಡೆ ಆತನೆ ನಿರ್ಮಲಜ್ಞಾನಿ ನೋಡಾ ಝೇಂಕಾರ ನಿಜಲಿಂಗ ಪ್ರಭುವೆ.. ✍🏻 ಜಕ್ಕಣಯ್ಯನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿ ಗಳು 🙏🏻 #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು #ಬಸವಣ್ಣನವರ ವಚನಗಳು
ಕಾಯಕವೇ ಕೈಲಾಸ..
481 views
5 hours ago
ಬಸವ ಬೆಳಗಿನ ಶರಣು ಶರಣಾರ್ಥಿಗಳು!🙏🏻 "ಹಸಿದಡೆ ಉಣಬಹುದೆ ನಸುಗುನ್ನಿ ತುರುಚಿಯನು??? ಅವಸರಕಿಲ್ಲದ ದೊರೆಗೆ ಅರ್ಥವಿದ್ದಲ್ಲಿ ಫಲವೇನು??? ಸಾಣೆಯ ಮೇಲೆ ಶ್ರೀಗಂಧವ ತೇವರಲ್ಲದೆ ಇಟ್ಟಿಗೆಯ ಮೇಲೆ ತೇಯಬಹುದೆ??? ರಂಭೆಯ ನುಡಿ ಸಿಂಬಿಗೆ ಶೃಂಗಾರವೆ??? ಜ್ಞಾನಿಯ ಕೂಡೆ ಜ್ಞಾನಿ ಮಾತನಾಡುವನಲ್ಲದೆ ಅಜ್ಞಾನಿಯ ಕೂಡೆ ಜ್ಞಾನಿ ಮಾತನಾಡುವನೆ??? ಸರೋವರ ದೊಳಗೊಂದು ಕೋಗಿಲೆ ಸ್ವರಗೆಯ್ಯುತ್ತಿದ್ದಡೆ ಕೊಂಬಿನ ಮೇಲೊಂದು ಕಾಗೆ ಕರ್ರೆನ್ನದೆ??? ಅಂತೆ ಇದ್ದತ್ತು. ಬರದಲ್ಲಿ ಬರಡ ಕರೆದೆಹೆನೆಂದು, ಕಂದಲ ಕೊಂಡು ಹೋದರೆ, ಕಂದಲೊಡೆದು ಕೈ ಮುರಿದಂತಾಯಿತ್ತು ಗುಹೇಶ್ವರಾ.. ✍ ಅಲ್ಲಮಪ್ರಭು ವಚನ.. ಸ.ವ.ಸಂ:೨ ವ.ಸಂ:೩೧೫ #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಣ್ಣನವರ ವಚನಗಳು
ಕಾಯಕವೇ ಕೈಲಾಸ..
509 views
5 hours ago
"ಭಕ್ತ ಭಕ್ತನ ಮನೆಗೆ ಬಂದಡೆ, ಭೃತ್ಯಾಚಾರವ ಮಾಡಬೇಕು. ಕರ್ತನಾಗಿ ಕಾಲ ತೊಳೆಸಿಕೊಂಡಡೆ ಹಿಂದೆ ಮಾಡಿದ ಭಕ್ತಿಗೆ ಹಾನಿ. ಲಕ್ಕಗಾವುದ ದಾರಿಯ ಹೋಗಿ ಭಕ್ತನು ಭಕ್ತನ ಕಾಂಬುದು ಸದಾಚಾರ. ಅಲ್ಲಿ ಕೂಡಿ ದಾಸೋಹವ ಮಾಡಿದಡೆ ಕೂಡಿಕೊಂಬನು ನಮ್ಮ ಕೂಡಲಸಂಗಯ್ಯ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏🏻 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ
ಕಾಯಕವೇ ಕೈಲಾಸ..
525 views
5 hours ago
"ಹಾಡಿದಡೆನ್ನೊಡೆಯನ ಹಾಡುವೆ.. ಬೇಡಿದಡೆನ್ನೊಡೆಯನ ಬೇಡುವೆ.. ಒಡೆಯಂಗೊಡಲ ತೋರಿ ಎನ್ನ ಬಡತನವ ಬಿನ್ನೈಸುವೆ.. ಒಡೆಯ ಮಹಾದಾನಿ ಕೂಡಲಸಂಗಮದೇವಂಗೆ ಸೆರಗೊಡ್ಡಿ ಬೇಡುವೆ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ
ಕಾಯಕವೇ ಕೈಲಾಸ..
414 views
5 hours ago
"ಭಕ್ತಿ ಸುಭಾಷೆಯ ನುಡಿಯ ನುಡಿವೆ, ನುಡಿದಂತೆ ನಡೆವೆ, ನಡೆಯೊಳಗೆ ನುಡಿಯ ಪೂರೈಸುವೆ. ಮೇಲೆ ತೂಗುವ ತ್ರಾಸು ಕಟ್ಟಳೆ ನಿಮ್ಮ ಕೈಯಲ್ಲಿ. ಒಂದು ಜವೆ ಕೊರತೆಯಾದಡೆ ಎನ್ನನದ್ದಿ ನೀನೆದ್ದು ಹೋಗು, ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏🏻 #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ವಚನಗಳು #ಬಸವಣ್ಣನವರ ವಚನಗಳು
ಕಾಯಕವೇ ಕೈಲಾಸ..
578 views
5 hours ago
ಬಸವಣ್ಣನವರ ಇಷ್ಟಲಿಂಗವನ್ನು 12 ವರ್ಷಗಳ ಕಾಲ ಸಂಶೋಧನೆ ಮಾಡಿ ಸಾಕ್ಷಾತ್ಕಾರಗೊಂಡ ನಂತರ , ತಮ್ಮ ಅನುಭವವನ್ನು ವಚನದಲ್ಲಿ ಹಂಚಿಕೊಂಡಿದ್ದಾರೆ.. "ಎನ್ನ ಗತಿಮತಿ ನೀನೆ ಕಂಡಯ್ಯಾ.. "ಎನ್ನ ಗುರು ಪರಮಗುರು ನೀನೆ ಕಂಡಯ್ಯಾ.. "ಎನ್ನ ಅಂತರಂಗದ ಜ್ಯೋತಿ ನೀನೆ ಕಂಡಯ್ಯಾ.. "ಕೂಡಲಸಂಗಮದೇವಾ" ನೀನೆ ಎನಗೆ ಗುರು.. ನಾನೆ ನಿಮ್ಮ ಶಿಷ್ಯನೆಂಬುದ ನಿಮ್ಮ ಶರಣ ಸಿದ್ದರಾಮಯ್ಯ ದೇವರು ಬಲ್ಲರು.. ✍️ ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳//
ಕಾಯಕವೇ ಕೈಲಾಸ..
556 views
5 hours ago
"ಬ್ರಹ್ಮಪದವಿಯನೊಲ್ಲೆ, ವಿಷ್ಣುಪದವಿಯನೊಲ್ಲೆ, ರುದ್ರಪದವಿಯನೊಲ್ಲೆ. ನಾನು ಮತ್ತಾವ ಪದವಿಯನೊಲ್ಲೆನಯ್ಯಾ. ಕೂಡಲಸಂಗಮದೇವಾ, ನಿಮ್ಮ ಸದ್ಭಕ್ತರ ಪಾದವನರಿದಿಪ್ಪ ಮಹಾಪದವಿಯನೇ ಕರುಣಿಸಯ್ಯಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏🏻 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳//
ಕಾಯಕವೇ ಕೈಲಾಸ..
514 views
5 hours ago
*:ಅಲ್ಲಮ ಪ್ರಭುದೇವರ ಗುರು ಬಸವಣ್ಣನವರು (ಗುರುವಿನ ಗುರು):* (ಅರ್ಥಾಥ ಬಸವಣ್ಣನವರಿಗೆ ಗುರುವಿಲ್ಲಾ, ಸೃಷ್ಟಿ ಕರ್ತ ಲಿಂಗದೇವರೆ ಅವರಿಗೆ ಗುರುವಾಗಿದ್ದರು, ಬಸವಣ್ಣನವರು ತಮ್ಮ ಒಂದು ವಚನದಲ್ಲಿ ಸ್ಪಷ್ಟಪಡಿಸಿದ್ದಾರೆ ಅಲ್ಲಮ ಪ್ರಭುಗಳು ಹಾಗೂ ಬಸವಣ್ಣನವರ ವಚನಗಳು ಸ್ಪಷ್ಟನೆ ನೀಡಿದೆ 👇🏼*) ಅಲ್ಲಮ ಪ್ರಭುದೇವರ *ವಚನ 1* ಗುರುವಿನ ಪ್ರಾಣ ಲಿಂಗದಲ್ಲಿ ಲೀಯವಾದ ಬಳಿಕ ಆ ಲಿಂಗವೆನ್ನ ಕರಸ್ಥಲಕ್ಕೆ ಬಂದಿತ್ತು ನೋಡಾ. ಇದ್ದಾನೆ ನೋಡಾ ಎನ್ನ ಗುರು ಅನಿಮಿಷನು ಎನ್ನ ಕರಸ್ಥಲದಲ್ಲಿ. ಇದ್ದಾನೆ ನೋಡಾ *ಎನ್ನ ಗುರು ಅನಿಮಿಷನು* ಎನ್ನ ಜ್ಞಾನದೊಳಗೆ. ಇದ್ದಾನೆ ನೋಡಾ *ಎನ್ನ ಗುರುವಿನ ಗುರು ಪರಮಗುರು ಬಸವಣ್ಣ* ಎನ್ನ ಕಂಗಳ ಮುಂದೆ ! *ಗುಹೇಶ್ವರ ಸಾಕ್ಷಿಯಾಗಿ, ಎನ್ನ ಮೇಲೆ ದ್ರೋಹವಿಲ್ಲ ಕಾಣಾ ಚನ್ನಬಸವಣ್ಣಾ* ! ಗುರು ಬಸವಣ್ಣನವರ *ವಚನ 2* "ಎನ್ನ ಗುರು ಪರಮಗುರು ನೀವೆ ಕಂಡಯ್ಯ, ಎನ್ನ ಗತಿಮತಿ ನೀವೆ ಕಂಡಯ್ಯ, *ಎನ್ನ ಅರಿವಿನ ಜ್ಯೋತಿ ನೀವೆ ಕಂಡಯ್ಯ*, ಎನ್ನಂತರಂಗ ಬಹಿರಂಗದ ಮಹವು ನೀವೆ ಕಂಡಯ್ಯ. ಕೂಡಲಸಂಗಮದೇವ ನೀವೆನಗೆ ಗುರು, ನಾ ನಿಮಗೆ ಶಿಷ್ಯನೆಂಬುದನು ನಿಮ್ಮ ಶರಣ ಸಿದ್ಧರಾಮಯ್ಯ ದೇವರೆ ಬಲ್ಲರು.. #ಬಸವಣ್ಣನವರ ವಚನ.. #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ವಚನಗಳು #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು
See other profiles for amazing content