Follow
𝗗𝗶𝗚𝗶𝗧𝗮𝗟 𝗠𝗘𝗗𝗜𝗔 🌍 ಸುದ್ದಿ ಪ್ರಪಂಚ
@digitalmediasuddhiprapancha
1,558
Posts
14,088
Followers
𝗗𝗶𝗚𝗶𝗧𝗮𝗟 𝗠𝗘𝗗𝗜𝗔 🌍 ಸುದ್ದಿ ಪ್ರಪಂಚ
915 views
2 days ago
ಶ್ರೀ ವಡನಬೈಲು ಮುಕ್ತಿ ನಾಗ ಸ್ವಾಮಿ ಮಹಾ ಮಂಗಳಾರತಿ ✨ Shree Vadanbailu Mukthi Naga Swami Maha Mangalarati ✨ #shree #vadanbailu #mukthi #naga #swami #maha #mangalarati #digitalmedia #suddhiprapancha #Kannada #youtubeshorts #viralshorts #shortsfeed #shorts #reels #vairal #video #bangalore #karnataka #india #Viralvideo #2026 #ಶ್ರೀ #ವಾದನಬೈಲು #ಮುಕ್ತಿ #ನಾಗ #ಸ್ವಾಮಿ #ಮಹಾ #ಮಂಗಳಾರತಿ #ಡಿಜಿಟಲ್‌ಮೀಡಿಯಾ #ಸುದ್ಧಿಪ್ರಪಂಚ #ಕನ್ನಡ #ಯೂಟ್ಯೂಬ್‌ಶಾರ್ಟ್ಸ್ #ಶಾರ್ಟ್‌ಫೀಡ್ #ವೈರಲ್‌ಶಾರ್ಟ್ಸ್ #ಶಾರ್ಟ್ಸ್ #ರೀಲ್ಸ್ #ವೈರಲ್ #ವೀಡಿಯೋ #ಬೆಂಗಳೂರು #ಕರ್ನಾಟಕ #ಭಾರತ #ವೈರಲ್ವೀಡಿಯೋ #2026 ABOUT US 🙏 @DIGITAL MEDIA SUDDHI PRAPANCHA KANNADA ENTRTANMENT & NEWS ✨🌎🇮🇳📡📺🎬🎥🎙️⚽🥅☺️✨ KINDLY FOLLOW & LIKE US ON SOCIAL MEDIA PLATFORMS Subscribe our channel for the latest news updates : https://youtube.com/@digital.media.suddhi.prapancha #2026 Disclaime ~ digitalmedia suddhiprapancha is committed to remaining unbiased and focused on serving the public. As a news channel, our primary goal is to deliver news that informs and engages our audience. The content presented on digitalmedia suddhiprapancha is intended for entertainment and educational purposes only. Occasionally, we may incorporate content from other creators solely for educational and informational use under fair use policy guidelines. Our intentions are transparent and are never meant to harm anyone's beliefs or values ☺️🙏 ಹಕ್ಕು ನಿರಾಕರಣೆ ~ ಡಿಜಿಟಲ್ ಮೀಡಿಯಾ ಸುದ್ಧಿಪ್ರಪಂಚವು ಪಕ್ಷಪಾತವಿಲ್ಲದೆ ಉಳಿಯಲು ಮತ್ತು ಸಾರ್ವಜನಿಕರಿಗೆ ಸೇವೆ ಸಲ್ಲಿಸುವತ್ತ ಗಮನಹರಿಸುತ್ತದೆ. ಸುದ್ದಿ ವಾಹಿನಿಯಾಗಿ, ನಮ್ಮ ಪ್ರಾಥಮಿಕ ಗುರಿ ಪ್ರೇಕ್ಷಕರಿಗೆ ಮಾಹಿತಿ ನೀಡುವ ಮತ್ತು ತೊಡಗಿಸಿಕೊಳ್ಳುವ ಸುದ್ದಿಗಳನ್ನು ತಲುಪಿಸುವುದು. ಡಿಜಿಟಲ್ ಮೀಡಿಯಾ ಸುದ್ಧಿಪ್ರಪಂಚದಲ್ಲಿ ಪ್ರಸ್ತುತಪಡಿಸಲಾದ ವಿಷಯವು ಮನರಂಜನೆ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ ಉದ್ದೇಶಿಸಲಾಗಿದೆ. ಸಾಂದರ್ಭಿಕವಾಗಿ, ನ್ಯಾಯಯುತ ಬಳಕೆಯ ನೀತಿ ಮಾರ್ಗಸೂಚಿಗಳ ಅಡಿಯಲ್ಲಿ ಶೈಕ್ಷಣಿಕ ಮತ್ತು ಮಾಹಿತಿ ಬಳಕೆಗಾಗಿ ಮಾತ್ರ ನಾವು ಇತರ ಸೃಷ್ಟಿಕರ್ತರಿಂದ ವಿಷಯವನ್ನು ಸೇರಿಸಿಕೊಳ್ಳಬಹುದು. ನಮ್ಮ ಉದ್ದೇಶಗಳು ಪಾರದರ್ಶಕವಾಗಿರುತ್ತವೆ ಮತ್ತು ಯಾರ ನಂಬಿಕೆಗಳು ಅಥವಾ ಮೌಲ್ಯಗಳಿಗೆ ಎಂದಿಗೂ ಹಾನಿ ಮಾಡುವ ಉದ್ದೇಶವನ್ನು ಹೊಂದಿಲ್ಲ ☺️🙏 🔔 Subscribe Our YouTube Channel : @ Digital Media Suddhiprapancha Kannada #2026
𝗗𝗶𝗚𝗶𝗧𝗮𝗟 𝗠𝗘𝗗𝗜𝗔 🌍 ಸುದ್ದಿ ಪ್ರಪಂಚ
543 views
4 days ago
*ʻರಿಯಲ್ ಸ್ಟಾರ್ʼ ಉಪೇಂದ್ರ ಅಭಿನಯದ ಕನ್ನಡ - ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ಬಿಗ್‌ ಬಜೆಟ್‌ ‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ 'ಕಾಟೇರ' ನಟಿ ಆರಾಧನಾ ರಾಮ್ ಜೋಡಿ!* ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ, ಕನ್ನಡ - ತೆಲುಗಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ‘ನೆಕ್ಟ್ಸ್‌ ಲೆವೆಲ್’ (Next Level) ಅಧಿಕೃತವಾಗಿ ಆರಂಭವಾಗಿದೆ. ಬೆಂಗಳೂರಿನ ಶ್ರೀ ಧರ್ಮಗಿರಿ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಇತ್ತೀಚೆಗೆ ಈ ಚಿತ್ರದ ಅದ್ಧೂರಿ ಮುಹೂರ್ತ ಸಮಾರಂಭ ನೆರವೇರಿತು. ಉಪೇಂದ್ರ ಅವರ ಪುತ್ರ ಆಯುಷ್ ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡುವ ಮೂಲಕ ಚಿತ್ರಕ್ಕೆ ಶುಭಕೋರಿದರು. ಈ ಮುಹೂರ್ತ ಸಮಾರಂಭದಲ್ಲಿ ಪ್ರಿಯಾಂಕಾ ಉಪೇಂದ್ರ ಮತ್ತು ಹಿರಿಯ ನಟಿ ಮಾಲಾಶ್ರೀ ಸೇರಿದಂತೆ ಹಲವು ಗಣ್ಯರು ಹಾಜರಿದ್ದು ಚಿತ್ರತಂಡಕ್ಕೆ ಶುಭ ಹಾರೈಸಿದರು. ಉಪ್ಪಿಗೆ ಜೋಡಿಯಾದ 'ಕಾಟೇರ' ನಟಿ ಆರಾಧನಾ ರಾಮ್! ಉಪೇಂದ್ರ ಅವರಿಗೆ ಈ ಚಿತ್ರದಲ್ಲಿ ಹಿರಿಯ ನಟಿ ಮಾಲಾಶ್ರೀ ಅವರ ಪುತ್ರಿ ಆರಾಧನಾ ರಾಮ್ ಜೋಡಿಯಾಗಿದ್ದಾರೆ. ಬ್ಲಾಕ್‌ಬಸ್ಟರ್ 'ಕಾಟೇರ' ಚಿತ್ರದ ಮೂಲಕ ಗಾಂಧಿನಗರಕ್ಕೆ ಪಾದಾರ್ಪಣೆ ಮಾಡಿದ್ದ ಆರಾಧನಾ ಅವರಿಗೆ ಇದು ಎರಡನೇ ಸಿನಿಮಾವಾಗಿದೆ. ವಿಶೇಷವೆಂದರೆ, 'ಕಾಟೇರ' ಚಿತ್ರದಲ್ಲಿ ಪಕ್ಕಾ ಹಳ್ಳಿ ಹುಡುಗಿಯ ಪಾತ್ರದಲ್ಲಿ ಮಿಂಚಿದ್ದ ಆರಾಧನಾ, ಈ ಚಿತ್ರದಲ್ಲಿ ತೀರಾ ಭಿನ್ನವಾದ ಬೋಲ್ಡ್ ಹಾಗೂ ಗ್ಲಾಮರಸ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಅವರು ಮುಖ್ಯಮಂತ್ರಿಯ ಮಗಳ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಚಿಕ್ಕಪ್ಪ ಉಪ್ಪಿ ಜೊತೆ ರಂಗಕ್ಕಿಳಿದ ನಿರಂಜನ್! ಕನ್ನಡ ಮತ್ತು ತೆಲುಗಿನಲ್ಲಿ ತಯಾರಾಗುತ್ತಿರುವ ಈ ಸಿನಿಮಾದಲ್ಲಿ ಮತ್ತೊಂದು ವಿಶೇಷತೆಯಿದೆ. ರಿಯಲ್ ಸ್ಟಾರ್ ಉಪೇಂದ್ರ ಅವರ ಜೊತೆಗೆ ಅವರ ಸಹೋದರನ ಮಗ, ನಟ ನಿರಂಜನ್ ಸುಧೀಂದ್ರ ಕೂಡ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದು, ಒಂದೇ ಸಿನಿಮಾದಲ್ಲಿ ಚಿಕ್ಕಪ್ಪ-ಮಗನ ಜುಗಲ್‌ಬಂದಿ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. 'A', 'ಉಪೇಂದ್ರ' ಶೈಲಿಯ ಸಬ್ಜೆಕ್ಟ್ 'ವಿಕ್ಟರಿ-2' ಮತ್ತು 'ಛೂ ಮಂತರ್'ನಂತಹ ಯಶಸ್ವಿ ಸಿನಿಮಾಗಳನ್ನು ನಿರ್ಮಿಸಿರುವ ನಿರ್ಮಾಪಕ ತರುಣ್ ಶಿವಪ್ಪ, ತಮ್ಮದೇ 'ತರುಣ್ ಸ್ಟುಡಿಯೋಸ್' ಬ್ಯಾನರ್ ಅಡಿಯಲ್ಲಿ ಅತ್ಯಂತ ಬೃಹತ್ ಬಜೆಟ್‌ನಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶಕ ಅರವಿಂದ್ ಕೌಶಿಕ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದು ಉಪೇಂದ್ರ ಅವರ ಹಳೆಯ ಕ್ಲಾಸಿಕ್ ಹಿಟ್‌ಗಳಾದ 'ಎ', 'ಉಪೇಂದ್ರ' ಮತ್ತು 'ರಕ್ತಕಣ್ಣೀರು' ಶೈಲಿಯ ಸಿನಿಮಾವಾಗಿದ್ದು, ಇವತ್ತಿನ ಜನರೇಶನ್‌ಗೆ ತಕ್ಕಂತೆ ಉಪ್ಪಿ ಅವರ ವಿಶಿಷ್ಟ ಶೈಲಿಯ ಪಾತ್ರವನ್ನು ರೂಪಿಸಲಾಗಿದೆಯಂತೆ. ಅತ್ಯಂತ ವೈವಿಧ್ಯಮಯ ಕಥಾಹಂದರ ಹಾಗೂ ತಾರಾಗಣವನ್ನು ಹೊಂದಿರುವ ‘ನೆಕ್ಟ್ಸ್ ಲೆವೆಲ್’ ಸಿನಿಮಾ, ಮೂಹೂರ್ತದ ಹಂತದಲ್ಲೇ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿದೆ. #movies #2026
𝗗𝗶𝗚𝗶𝗧𝗮𝗟 𝗠𝗘𝗗𝗜𝗔 🌍 ಸುದ್ದಿ ಪ್ರಪಂಚ
664 views
4 days ago
ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು 🇮🇳✨ #2026
𝗗𝗶𝗚𝗶𝗧𝗮𝗟 𝗠𝗘𝗗𝗜𝗔 🌍 ಸುದ್ದಿ ಪ್ರಪಂಚ
535 views
7 days ago
*ಅಮೆಜಾನ್ ಪ್ರೈಮ್‌ನಲ್ಲಿ 'ಸೆಕೆಂಡ್ ಕೇಸ್ ಆಫ್ ಸೀತಾರಾಮ್' ಐತಿಹಾಸಿಕ ಸಾಧನೆ: 25 ಕೋಟಿಗೂ ಅಧಿಕ ಸ್ಟ್ರೀಮಿಂಗ್ ನಿಮಿಷಗಳ ದಾಖಲೆ!* ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರಸಿದ್ದ ಕಂಟೆಂಟ್ ಆಧಾರಿತ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಕನ್ನಡದ 'ಸೆಕೆಂಡ್ ಕೇಸ್ ಆಫ್ ಸೀತಾರಾಮ್' (Second Case of Seetharam) ಸಿನಿಮಾವು ಡಿಜಿಟಲ್ (OTT) ಲೋಕದಲ್ಲಿ ಅಭೂತಪೂರ್ವ ಯಶಸ್ಸಿನ ಇತಿಹಾಸ ಬರೆದಿದೆ. ಅಮೆಜಾನ್ ಪ್ರೈಮ್ ವೀಡಿಯೊದಲ್ಲಿ ಭಾರತದ 'ಟಾಪ್ 10' ಸಿನಿಮಾಗಳ ಪಟ್ಟಿಯಲ್ಲಿ ಸತತ 15 ವಾರಗಳಿಂದ ತನ್ನ ಸ್ಥಾನವನ್ನು ಕಾಯ್ದುಕೊಳ್ಳುವ ಮೂಲಕ, ಬರೋಬ್ಬರಿ 250 ಮಿಲಿಯನ್‌ಗಿಂತಲೂ ಹೆಚ್ಚು (25 ಕೋಟಿಗೂ ಅಧಿಕ) ಸ್ಟ್ರೀಮಿಂಗ್ ನಿಮಿಷಗಳನ್ನು ಪೂರೈಸಿ ಒಟಿಟಿಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಪ್ರೇಕ್ಷಕರನ್ನು ಹಿಡಿದಿಟ್ಟ ಕಥೆ ಮತ್ತು ನಟನೆ ಚಿತ್ರದಲ್ಲಿ ನಟರಾದ ವಿಜಯ್ ರಾಘವೇಂದ್ರ, ಗೋಪಾಲಕೃಷ್ಣ ದೇಶಪಾಂಡೆ ಮತ್ತು ಸಾಗರ್ ಪುರಾಣಿಕ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದು, ತಮ್ಮ ನೈಜ ಅಭಿನಯದ ಮೂಲಕ ಗಮನಸೆಳೆದಿದ್ದಾರೆ. ಬಿಗಿಯಾದ ಚಿತ್ರಕಥೆ ಹಾಗೂ ಅದಕ್ಕೆ ಪೂರಕವಾದ ಈ ತಾರಾಗಣದ ಬದ್ಧತೆಯೇ ಸಿನಿಮಾವು ವಾರದಿಂದ ವಾರಕ್ಕೆ ಒಟಿಟಿ ಪ್ರೇಕ್ಷಕರನ್ನು ತನ್ನತ್ತ ಸೆಳೆಯಲು ಮುಖ್ಯ ಕಾರಣವಾಗಿದೆ. ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಅವರು ಸಸ್ಪೆನ್ಸ್, ಭಾವನೆಗಳು ಹಾಗೂ ನೈಜತೆಯನ್ನು ಅದ್ಭುತವಾಗಿ ಸಂಯೋಜಿಸಿ ಈ ಥ್ರಿಲ್ಲರ್ ಚಿತ್ರವನ್ನು ತೆರೆಗೆ ತಂದಿದ್ದಾರೆ. ಈ ವರ್ಷ ಒಟಿಟಿಯಲ್ಲಿ ಅತ್ಯಂತ ಹೆಚ್ಚು ಚರ್ಚಿಸಲ್ಪಟ್ಟ ಪ್ರಮುಖ ಕನ್ನಡ ಥ್ರಿಲ್ಲರ್ ಸಿನಿಮಾಗಳಲ್ಲಿ ಒಂದಾಗಿ ಇದು ಗುರುತಿಸಿಕೊಂಡಿದೆ. ಖ್ಯಾತ ಚಲನಚಿತ್ರ ನಿರ್ಮಾಪಕ ಪವನ್ ಒಡೆಯರ್ ಅವರು ಈ ಚಿತ್ರವನ್ನು ಪ್ರಸ್ತುತಪಡಿಸಿದ್ದು, ಅವರ ಉಪಸ್ಥಿತಿ ಹಾಗೂ ಬೆಂಬಲವು ಈ ಚಿತ್ರವನ್ನು ಭಾರತದಾದ್ಯಂತ ತಲುಪಿಸಲು ಪ್ರಮುಖ ಪಾತ್ರ ವಹಿಸಿದೆ. ದೇವಿಪ್ರಸಾದ್ ಶೆಟ್ಟಿ ಮತ್ತು ಸಾತ್ವಿಕ್ ಹೆಬ್ಬಾರ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದು, ಇವರ ಶ್ರಮದಿಂದಾಗಿ ಚಿತ್ರವು ಕನ್ನಡದ ಜೊತೆಗೆ ತಮಿಳು, ತೆಲುಗು ಮತ್ತು ಹಿಂದಿ ಭಾಷೆಗಳಲ್ಲೂ ಪ್ರಸಾರವಾಗಿ ಯಶಸ್ಸು ಕಂಡಿದೆ. ಸ್ಯಾಂಡಲ್‌ವುಡ್‌ಗೆ ಹೆಮ್ಮೆಯ ಕ್ಷಣ ಒಟಿಟಿ ವೇದಿಕೆಯಲ್ಲಿ 250+ ಮಿಲಿಯನ್ ಸ್ಟ್ರೀಮಿಂಗ್ ನಿಮಿಷಗಳನ್ನು ದಾಟುವುದು ಮತ್ತು ಭಾರತದ ಟಾಪ್ 10 ಪಟ್ಟಿಯಲ್ಲಿ ಸತತ 15 ವಾರಗಳ ಕಾಲ ಮುಂದುವರಿಯುವುದು ಸಾಮಾನ್ಯ ವಿಷಯವಲ್ಲ. ಈ ಸಾಧನೆಯು ಭಾರತೀಯ ಚಿತ್ರರಂಗದ ಮಟ್ಟದಲ್ಲಿ ಕನ್ನಡ ಸಿನಿಮಾಗಳ ಕಂಟೆಂಟ್ ಮತ್ತು ಕಥೆ ಹೇಳುವಿಕೆಯ ಶಕ್ತಿಗೆ ಹಿಡಿದ ಕನ್ನಡಿಯಾಗಿದ್ದು, ಇಡೀ ಕನ್ನಡ ಚಿತ್ರರಂಗವೇ ಹೆಮ್ಮೆಪಡುವಂತೆ ಮಾಡಿದೆ. #movies #2026
𝗗𝗶𝗚𝗶𝗧𝗮𝗟 𝗠𝗘𝗗𝗜𝗔 🌍 ಸುದ್ದಿ ಪ್ರಪಂಚ
547 views
8 days ago
*ಕ್ರಾಸಿಂಗ್ ಪಾತ್ಸ್ (CROSSING PATHS): ಮಾನವ-ಆನೆ ಸಂಘರ್ಷದ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಯುಕ್ತಾ ಹೊರನಾಡು ನಿರ್ದೇಶನ* 'ವಿಶ್ವ ಆನೆಗಳ ದಿನ'ದಂದು ಅನಾವರಣಗೊಳ್ಳುತ್ತಿರುವ 'ಕ್ರಾಸಿಂಗ್ ಪಾತ್ಸ್' ಸಾಕ್ಷ್ಯಚಿತ್ರದ ಮೂಲಕ ನಟಿ ಸಂಯುಕ್ತಾ ಹೊರನಾಡು ಅವರು ಪ್ರಥಮ ಬಾರಿಗೆ ನಿರ್ದೇಶಕಿಯಾಗಿ ಬಡ್ತಿ ಪಡೆದುಕೊಂಡಿದ್ದಾರೆ. ಈ ಸಾಕ್ಷ್ಯಚಿತ್ರವು ತೀವ್ರಗೊಳ್ಳುತ್ತಿರುವ ಮಾನವ-ಆನೆ ಸಂಘರ್ಷದ ಕುರಿತು ಬೆಳಕು ಚೆಲ್ಲುತ್ತದೆ. ಈ ಸಾಕ್ಷ್ಯಚಿತ್ರಕ್ಕೆ ಟೆಕಿಯಾನ್ (Tekion) ಸಂಸ್ಥೆಯ ಸಿಎಸ್‌ಆರ್‌ ಇನಿಶಿಯೇಟಿವ್ ಜೊತೆಗೆ ಕರ್ನಾಟಕ ಅರಣ್ಯ ಇಲಾಖೆ ಮತ್ತು ಆ ರೋಚಾ ಇಂಡಿಯಾ, ಸಂಪಿಗೆ ಫಿಲ್ಮ್ಸ್ ಪ್ರೊಡಕ್ಷನ್ ಇದಕ್ಕೆ ಸಹಯೋಗ ನೀಡಿವೆ. ಕಾಡುಗಳು ಕಿರಿದಾಗುತ್ತಾ, ಮಾನವನ ಚಟುವಟಿಕೆಗಳಿಂದಾಗಿ ವನ್ಯಜೀವಿಗಳ ನೈಸರ್ಗಿಕ ಆವಾಸಸ್ಥಾನಗಳು ನಾಶವಾಗುತ್ತಿರುವ ಈ ಸಂದರ್ಭದಲ್ಲಿ, ಆನೆಗಳು ಅನಿವಾರ್ಯವಾಗಿ ಮಾನವ ವಸತಿ ಪ್ರದೇಶಗಳಿಗೆ ಕಾಲಿಡುತ್ತಿವೆ. ಇದು ಸ್ಥಳೀಯ ಸಮುದಾಯಗಳು ಮತ್ತು ವನ್ಯಜೀವಿಗಳು ಇಬ್ಬರ ಮೇಲೆಯೂ ಗಂಭೀರ ಪರಿಣಾಮ ಬೀರುವ ಸಂಘರ್ಷಕ್ಕೆ ಕಾರಣವಾಗಿದೆ. 'ಕ್ರಾಸಿಂಗ್ ಪಾತ್ಸ್' ಚಿತ್ರವು ಈ ಸಂಘರ್ಷವನ್ನು ಹಾಗೂ ಮಾನವ ಮತ್ತು ಪ್ರಾಣಿಗಳು ಸಹಬಾಳ್ವೆ ನಡೆಸಲು ಕಂಡುಕೊಳ್ಳಬೇಕಾದ ಸುಸ್ಥಿರ ಮಾರ್ಗಗಳ ತುರ್ತು ಅಗತ್ಯವನ್ನು ಪರಿಶೀಲಿಸುತ್ತದೆ. ಈ ಸಾಕ್ಷ್ಯಚಿತ್ರವು 'ಆ ರೋಚಾ ಇಂಡಿಯಾ' ಸಂಸ್ಥೆಯು 'ಕರ್ನಾಟಕ ಅರಣ್ಯ ಇಲಾಖೆ'ಯ ಸಹಯೋಗದೊಂದಿಗೆ ನಡೆಸುತ್ತಿರುವ 'ಪ್ರಾಜೆಕ್ಟ್ ಇಎಡಿಡಿಎಸ್' (ಆನೆಗಳ ಉಪಟಳ ತಡೆಯುವ ಶ್ವಾನ ದಳ) ಯೋಜನೆಯನ್ನು ಹಿಂಬಾಲಿಸುತ್ತದೆ. ಈ ಯೋಜನೆಯು ಸಂರಕ್ಷಣೆ ಮತ್ತು ಮುನ್ನೆಚ್ಚರಿಕಾ ಕ್ರಮಗಳ ಮೂಲಕ ಮಾನವ-ಆನೆ ಸಂಘರ್ಷವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. 'ಆ ರೋಚಾ ಇಂಡಿಯಾ' ತಂಡದ ಅವಿನಾಶ್ ಕೃಷ್ಣನ್ ಅವರು ಈ ಇಎಡಿಡಿಎಸ್ ಕಾರ್ಯಕ್ರಮವನ್ನು ನಿಭಾಯಿಸುತ್ತಿದ್ದಾರೆ. 'ಗಂಧದ ಗುಡಿ' ಮತ್ತು '777 ಚಾರ್ಲಿ' ಚಿತ್ರಗಳಿಗೆ ಛಾಯಾಗ್ರಹಣ ಮಾಡಿರುವ ಪ್ರತೀಕ್ ಶೆಟ್ಟಿ ಅವರು ಈ ಚಿತ್ರಕ್ಕೂ ಛಾಯಾಗ್ರಹಣ ಮಾಡಿದ್ದಾರೆ. ಯೋಜನೆಯೊಂದಿಗೆ ಕೈಜೋಡಿಸಿರುವ ಪ್ರಮುಖ ವ್ಯಕ್ತಿಗಳು: ಈಶ್ವರ್ ಬಿ. ಖಂಡ್ರೆ — ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು, ಕರ್ನಾಟಕ ಸರ್ಕಾರ ಪುಷ್ಕರ್ ಕುಮಾರ್ — ಪಿಸಿವಿಎಫ್ (PCCF) ಮನೋಜ್ ರಾಜನ್ — ಯೋಜನಾ ಮುಖ್ಯಸ್ಥರು, ಪ್ರಾಜೆಕ್ಟ್ ಎಲಿಫೆಂಟ್ ಸೌರಭ್ ಕುಮಾರ್ — ಉಪ ಅರಣ್ಯ ಸಂರಕ್ಷಣಾಧಿಕಾರಿ (DCF), ಹಾಸನ ಅವಿನಾಶ್ ಕೃಷ್ಣನ್ — ರಾಷ್ಟ್ರೀಯ ನಿರ್ದೇಶಕರು, ಆ ರೋಚಾ ಇಂಡಿಯಾ ಹವಾಮಾನ ವೈಪರೀತ್ಯ, ಪರಿಸರ ನಾಶ ಮತ್ತು ನಮ್ಮ ಸುತ್ತಲೂ ಹೆಚ್ಚುತ್ತಿರುವ ಹಿಂಸಾಚಾರದ ಈ ಕಾಲಘಟ್ಟದಲ್ಲಿ, 'ಕ್ರಾಸಿಂಗ್ ಪಾತ್ಸ್' ಅತ್ಯಂತ ತುರ್ತಾಗಿ ಗಮನಹರಿಸಬೇಕಾದ ಶಾಂತಿಯುತ ಸಂಘರ್ಷದ ಕಡೆಗೆ ಬೆಳಕು ಚೆಲ್ಲಲು ಹಾಗೂ ಸಹಬಾಳ್ವೆಯ ಸಾಧ್ಯತೆಯನ್ನು ಎತ್ತಿಹಿಡಿಯಲು ಆಶಿಸುತ್ತದೆ. #movies #2026
𝗗𝗶𝗚𝗶𝗧𝗮𝗟 𝗠𝗘𝗗𝗜𝗔 🌍 ಸುದ್ದಿ ಪ್ರಪಂಚ
575 views
8 days ago
More than just a fan gathering. ❤️‍🔥 The AAFA Annual Summit 2026 brought together over 1,000 AAFA members from seven states. Along with spending hours meeting every fan for an individual photograph, Icon star @AlluArjun announced insurance coverage for AAFA members and hosted lunch for everyone present. A reflection of @AlluArjun's love, gratitude and commitment towards his fans. ❤️ #AAFAAnnualSummit2026 #movies #2026
𝗗𝗶𝗚𝗶𝗧𝗮𝗟 𝗠𝗘𝗗𝗜𝗔 🌍 ಸುದ್ದಿ ಪ್ರಪಂಚ
480 views
8 days ago
*ಅಭಿಮಾನಿಗಳ ಸುರಕ್ಷತೆಗೆ ಮುಂದಾದ 'ಐಕಾನ್ ಸ್ಟಾರ್'; ಕರ್ನಾಟಕದ 150 ಮಂದಿ ಸೇರಿ ಸಾವಿರ ಫ್ಯಾನ್ಸ್‌ಗೆ ‘ಅಪಘಾತ ವಿಮೆ’ ಮಾಡಿಸಿದ ಅಲ್ಲು ಅರ್ಜುನ್!* ಹೈದರಾಬಾದ್: ತಮ್ಮ ನಟನೆ ಮತ್ತು ಅದ್ಭುತ ಡ್ಯಾನ್ಸ್ ಮೂಲಕ ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ 'ಐಕಾನ್ ಸ್ಟಾರ್' ಅಲ್ಲು ಅರ್ಜುನ್, ಇದೀಗ ತಮ್ಮ ಮಾನವೀಯ ನಡೆಯಿಂದ ಮತ್ತೊಮ್ಮೆ ಲಕ್ಷಾಂತರ ಜನರ ಮನಗೆದ್ದಿದ್ದಾರೆ. ಹೈದರಾಬಾದ್‌ನಲ್ಲಿ ಇತ್ತೀಚೆಗೆ ನಡೆದ 'AAFA Annual Summit 2026' ಅಭಿಮಾನಿಗಳ ಸಮಾವೇಶದಲ್ಲಿ ಭಾಗವಹಿಸಿದ್ದ ಸುಮಾರು 1,000 ಅಭಿಮಾನಿಗಳಿಗೆ ಅಲ್ಲು ಅರ್ಜುನ್‌ ಸ್ವತಃ 'ಅಪಘಾತ ವಿಮೆ' ಮಾಡಿಸುವ ಮೂಲಕ ಭಾರತೀಯ ಚಿತ್ರರಂಗದಲ್ಲೇ ಹೊಸದೊಂದು ಮಾದರಿ ಹುಟ್ಟುಹಾಕಿದ್ದಾರೆ. ಏನಿದು 'AAFA Annual Summit 2026'? ಅಲ್ಲು ಅರ್ಜುನ್ ಅವರ ಅಭಿಮಾನಿಗಳಿಂದ ನೂತನವಾಗಿ ಆರಂಭಗೊಂಡಿರುವ 'ಅಲ್ಲು ಅರ್ಜುನ್ ಫ್ಯಾನ್ಸ್ ಅಸೋಸಿಯೇಷನ್' (AAFA) ಆಶ್ರಯದಲ್ಲಿ ಹೈದರಾಬಾದ್‌ನಲ್ಲಿ ಬೃಹತ್ ಫ್ಯಾನ್ಸ್ ಮೀಟ್ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶ, ತೆಲಂಗಾಣ, ಒಡಿಶಾ, ತಮಿಳುನಾಡು, ಕರ್ನಾಟಕ, ಕೇರಳ ಹಾಗೂ ಮಹಾರಾಷ್ಟ್ರ ಸೇರಿದಂತೆ ದೇಶದ 7 ಪ್ರಮುಖ ರಾಜ್ಯಗಳಿಂದ ಸುಮಾರು 1000 ಅಭಿಮಾನಿಗಳು ಆಗಮಿಸಿದ್ದರು. ಕರ್ನಾಟಕದ 150 ಅಭಿಮಾನಿಗಳಿಗೆ ವಿಮಾ ಸುರಕ್ಷೆ: ಈ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬ ಅಭಿಮಾನಿಯ ಸುರಕ್ಷತೆ ಮತ್ತು ಅವರ ಕುಟುಂಬದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅಲ್ಲು ಅರ್ಜುನ್ ಈ ಮಹತ್ವದ ನಿರ್ಧಾರ ತಳೆದಿದ್ದಾರೆ. ಹೈದರಾಬಾದ್‌ ಸಮಾವೇಶದಲ್ಲಿ ಕರ್ನಾಟಕ ಒಂದರಿಂದಲೇ ಸುಮಾರು 150ಕ್ಕೂ ಹೆಚ್ಚು ಅಭಿಮಾನಿಗಳು ಭಾಗವಹಿಸಿದ್ದು, ಅವರೆಲ್ಲರಿಗೂ ಅಲ್ಲು ಅರ್ಜುನ್‌ ಕಡೆಯಿಂದಲೇ ಅಪಘಾತ ವಿಮೆ ಮಾಡಿಸಿ ಕೊಟ್ಟಿರುವುದು ಅಭಿಮಾನಿಗಳಲ್ಲಿ ಖುಷಿ ತಂದಿದೆ. ವಿಮೆಯ ವಿವರ ಹಾಗೂ ಪಾಲಿಸಿ ವಿತರಣೆ: ರಾಜ್ಯ ಸಮಿತಿ ಸದಸ್ಯರಿಗೆ ತಲಾ ₹5 ಲಕ್ಷ ಮೊತ್ತದ ಅಪಘಾತ ವಿಮೆ ಕವರೇಜ್, ಜಿಲ್ಲಾ ಸಮಿತಿ ಸದಸ್ಯರಿಗೆ ತಲಾ ₹3 ಲಕ್ಷ ಮೊತ್ತದ ಅಪಘಾತ ವಿಮೆ ಕವರೇಜ್ ಮಾಡಿಸಲಾಗಿದೆ. ಕಾರ್ಯಕ್ರಮ ವೇದಿಕೆಯಲ್ಲೇ ಅಲ್ಲು ಅರ್ಜುನ್‌ ಅವರು ಸ್ವತಃ ಪ್ರತಿಯೊಬ್ಬ ಅಭಿಮಾನಿಗೂ ಇನ್ಶೂರೆನ್ಸ್ ಕಾರ್ಡ್‌ಗಳನ್ನು ವಿತರಿಸಿದ್ದಾರೆ. "ನನಗೆ ನನ್ನ ಅಭಿಮಾನಿಗಳ ಪ್ರೀತಿ ಎಷ್ಟು ಮುಖ್ಯವೋ, ಅವರ ಹಾಗೂ ಅವರ ಕುಟುಂಬಗಳ ಸುರಕ್ಷತೆಯೂ ಅಷ್ಟೇ ಮುಖ್ಯ" ಎಂಬ ಸಂದೇಶವನ್ನು ಈ ವೇಳೆ ನೀಡಿದರು. ಸಾಮಾಜಿಕ ಜಾಲತಾಣಗಳಲ್ಲಿ ಶ್ಲಾಘನೆಗಳ ಮಹಾಪೂರ ಅಭಿಮಾನಿಗಳನ್ನು ಕೇವಲ ಸಿನಿಮಾ ಗೆಲುವಿನ ಸಂಭ್ರಮಕ್ಕೆ ಅಥವಾ ಪ್ರಚಾರಕ್ಕೆ ಸೀಮಿತಗೊಳಿಸದೆ, ಅವರ ಕುಟುಂಬದ ಹಿತದೃಷ್ಟಿಯಿಂದ ಈ ರೀತಿಯ ಭದ್ರತಾ ಯೋಜನೆ ರೂಪಿಸಿದ 'ಐಕಾನ್ ಸ್ಟಾರ್' ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಲ್ಲು ಅರ್ಜುನ್ ಅವರ ಈ ಸಾಮಾಜಿಕ ಕಾಳಜಿ ಬೇರೆಲ್ಲಾ ಚಿತ್ರರಂಗದ ನಟರಿಗೂ ಪ್ರೇರಣೆಯಾಗಲಿ, ಪ್ರತಿಯೊಬ್ಬ ತಾರೆಯೂ ತಮ್ಮ ಅಭಿಮಾನಿಗಳ ಭದ್ರತೆಗೆ ಈ ರೀತಿ ಚಿಂತಿಸಲಿ ಎಂದು ನೆಟ್ಟಿಗರು ಕೊಂಡಾಡುತ್ತಿದ್ದಾರೆ. #movies #2026
𝗗𝗶𝗚𝗶𝗧𝗮𝗟 𝗠𝗘𝗗𝗜𝗔 🌍 ಸುದ್ದಿ ಪ್ರಪಂಚ
556 views
8 days ago
*ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !* ಕನ್ನಡ ಚಿತ್ರರಂಗದ ಖ್ಯಾತ ನಟ, ‘ನಟರಾಕ್ಷಸ’ ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ‘ಅಣ್ಣ ಫ್ರಮ್‌ ಮೆಕ್ಸಿಕೋ’ (Anna From Mexico) ಸಿನಿಮಾದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ. ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಾಲು ಸಾಲು ರಜಾದಿನಗಳ ಸಂಭ್ರಮವನ್ನು ದುಪ್ಪಟ್ಟು ಮಾಡಲು, ಈ ಸಿನಿಮಾ ಮುಂಬರುವ ಡಿಸೆಂಬರ್ 24ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ವರ್ಷಾಂತ್ಯಕ್ಕೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ಮನರಂಜನೆ ನೀಡಲು ಸಜ್ಜಾಗಿರುವ ಈ ಸುದ್ದಿ ಡಾಲಿ ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಹಾಗೂ ಸಂತಸ ಮೂಡಿಸಿದೆ. ಈ ಚಿತ್ರದ ವಿಶೇಷವೆಂದರೆ, 2021ರ ಡಿಸೆಂಬರ್‌ ತಿಂಗಳಲ್ಲಿ ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ನಲ್ಲಿ ಸೂಪರ್ ಡೂಪರ್ ಹಿಟ್ ಆಗಿದ್ದ 'ಬಡವ ರಾಸ್ಕಲ್' ಸಿನಿಮಾದ ಜೋಡಿ ಈಗ ಬರೋಬ್ಬರಿ ಐದು ವರ್ಷಗಳ ಬಳಿಕ ಮತ್ತೆ ಒಂದಾಗಿದೆ. 'ಬಡವ ರಾಸ್ಕಲ್' ಚಿತ್ರದ ಮೂಲಕವೇ ಧನಂಜಯ್ ತಮ್ಮ 'ಡಾಲಿ ಪಿಕ್ಚರ್ಸ್' ಬ್ಯಾನರ್ ಅಡಿಯಲ್ಲಿ ನಿರ್ಮಾಪಕರಾಗಿ ಬಡ್ತಿ ಪಡೆದು ಯಶಸ್ಸು ಕಂಡಿದ್ದರು. ಆ ಚಿತ್ರವನ್ನು ಯಶಸ್ವಿಯಾಗಿ ನಿರ್ದೇಶಿಸಿದ್ದ ಶಂಕರ್ ಗುರು, ಈಗ ಎರಡನೇ ಬಾರಿಗೆ ಧನಂಜಯ್ ಅವರಿಗೆ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ಮೂಲಕ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಹಿಟ್ ಜೋಡಿ ಮತ್ತೆ ಅದೇ ಡಿಸೆಂಬರ್ ತಿಂಗಳಲ್ಲೇ ಒಂದಾಗಿ ಚಿತ್ರಮಂದಿರಕ್ಕೆ ಎಂಟ್ರಿ ನೀಡುತ್ತಿರುವುದು ಸಿನಿಪ್ರಿಯರಲ್ಲಿ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ಪಕ್ಕಾ ಆಕ್ಷನ್ ಜೊತೆಗೆ ಫ್ಯಾಮಿಲಿ ಎಂಟರ್‌ಟೇನರ್ ಎಲಿಮೆಂಟ್ಸ್‌ ಹೊಂದಿರುವ ಈ ಸಿನಿಮಾದಲ್ಲಿ ಧನಂಜಯ್‌ಗೆ ನಾಯಕಿಯಾಗಿ ಸ್ಯಾಂಡಲ್‌ವುಡ್‌ನ ಉದಯೋನ್ಮುಖ ನಟಿ ರೀಷ್ಮಾ ನಾಣಯ್ಯ ಜೋಡಿಯಾಗಿದ್ದಾರೆ. ಉಳಿದಂತೆ ರಂಗಾಯಣ ರಘು, ನಾಗಭೂಷಣ ಹಾಗೂ ಪೂರ್ಣಚಂದ್ರ ಮೈಸೂರು ಸೇರಿದಂತೆ ಬಲವಾದ ತಾರಾಗಣವೇ ಚಿತ್ರದಲ್ಲಿದ್ದು, ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ವಿಶೇಷವೆಂದರೆ, ನಟ ಲೂಸ್ ಮಾದ ಯೋಗಿ ಅವರು ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಐರಾ ಫಿಲ್ಮ್ಸ್ ಹಾಗೂ ರಾಯಲ ಸ್ಟುಡಿಯೋಸ್ ಜಂಟಿ ಬ್ಯಾನರ್‌ನಡಿ ಅದ್ಧೂರಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಚಿತ್ರಕ್ಕೆ ವಾಸುಕಿ ವೈಭವ್‌ ಅವರ ಸಂಗೀತ ನಿರ್ದೇಶನವಿದ್ದು, ಹಿನ್ನೆಲೆ ಸಂಗೀತ ಹಾಗೂ ಹಾಡುಗಳ ಮೇಲೆ ಅಪಾರ ನಿರೀಕ್ಷೆಯಿದೆ. ತಾಂತ್ರಿಕ ಬಳಗದಲ್ಲಿ ಅಜಯ್ ಅವರ ಸಂಕಲನ ಹಾಗೂ ಗುಣ ಅವರ ಕಲಾ ನಿರ್ದೇಶನವಿದ್ದು, ಅದ್ಧೂರಿ ಮೇಕಿಂಗ್‌ನೊಂದಿಗೆ ಸಿನಿಮಾ ಡಿಸೆಂಬರ್ 24ಕ್ಕೆ ಪ್ರೇಕ್ಷಕರ ಮುಂದೆ ಬರಲು ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ. #movies #2026
𝗗𝗶𝗚𝗶𝗧𝗮𝗟 𝗠𝗘𝗗𝗜𝗔 🌍 ಸುದ್ದಿ ಪ್ರಪಂಚ
459 views
8 days ago
*ಕಾರ್ತಿಕ್ ಶರ್ಮಾ ನಿರ್ದೇಶನದ ‘ಭಾವಾಂತರ’ ಚಿತ್ರದ ‘ಮೊದಮೊದಲಿದು’ ಮೆಲೋಡಿ ಹಾಡು ರಿಲೀಸ್‌* ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಾಲನಟನಾಗಿ ಹಾಗೂ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಬಹುಮುಖ ಪ್ರತಿಭೆ ಕಾರ್ತಿಕ್ ಶರ್ಮಾ ಈಗ ‘ಭಾವಾಂತರ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ಈ ಸಿನಿಮಾದ ‘ಮೊದಮೊದಲಿದು’ ಎಂಬ ಮೆಲೋಡಿ ಹಾಡು ಇತ್ತೀಚೆಗೆ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡದ ಹೆಮ್ಮೆಯ ನಿರ್ಮಾಣ ಸಂಸ್ಥೆಯಾದ ‘ಹೊಂಬಾಳೆ ಫಿಲ್ಮ್ಸ್’ ತನ್ನದೇ ಆದ ‘ಹೊಂಬಾಳೆ ಮ್ಯೂಸಿಕ್’ ಆಡಿಯೋ ಲೇಬಲ್ ಮೂಲಕ ಈ ಚಿತ್ರದ ಆಡಿಯೋ ಹಕ್ಕುಗಳನ್ನು ಪಡೆದುಕೊಂಡಿದ್ದು, ಹೊಸಬರ ಈ ವಿಭಿನ್ನ ಪ್ರಯತ್ನಕ್ಕೆ ಸಾಥ್ ನೀಡಿದೆ. ನಿರ್ದೇಶನದ ಜೊತೆಗೆ ಸಂಗೀತ ಸಂಯೋಜನೆಯ ಜವಾಬ್ದಾರಿಯನ್ನೂ ಸ್ವತಃ ಕಾರ್ತಿಕ್ ಶರ್ಮಾ ಅವರೇ ಹೊತ್ತಿದ್ದಾರೆ. ಬಿಡುಗಡೆಯಾಗಿರುವ 'ಮೊದಮೊದಲಿದು' ಹಾಡಿಗೆ ವಾಸುಕಿ ವೈಭವ್ ಸಾಹಿತ್ಯ ಬರೆದಿದ್ದು, ಪ್ರಖ್ಯಾತ ಗಾಯಕರಾದ ಸಿದ್ಧಾರ್ಥ ಬೆಳ್ಮಣ್ಣು ಹಾಗೂ ಐಶ್ವರ್ಯ ರಂಗರಾಜನ್ ತಮ್ಮ ಮಧುರ ಕಂಠದಲ್ಲಿ ಹಾಡಿ ಜೀವ ತುಂಬಿದ್ದಾರೆ. ನೈಜ ಘಟನೆಗಳಿಂದ ಪ್ರೇರಿತವಾದ ಈ ಕಥಾಹಂದರಕ್ಕೆ ಕಾರ್ತಿಕ್ ಶರ್ಮಾ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಇಡೀ ದಕ್ಷಿಣ ಭಾರತದ ಚಿತ್ರರಂಗದಲ್ಲೇ ಈ ರೀತಿಯ ವಿಶಿಷ್ಟವಾದ ಹಾಗೂ ಅಪರೂಪದ ಎಳೆ ಹೊಂದಿರುವ ಸಿನಿಮಾ ಬಂದಿಲ್ಲ ಎಂದು ಚಿತ್ರತಂಡ ಹೇಳಿಕೊಂಡಿದೆ. ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು, ಎಲ್ಲವನ್ನೂ ಹೊಂಬಾಳೆ ಮ್ಯೂಸಿಕ್ ಮೂಲಕ ಹಂತ ಹಂತವಾಗಿ ಬಿಡುಗಡೆ ಆಗಲಿವೆ. ಈಗಾಗಲೇ ಸಂಪೂರ್ಣ ಚಿತ್ರೀಕರಣ ಮುಗಿಸಿಕೊಂಡಿರುವ ‘ಭಾವಾಂತರ’ ತಂಡ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿದ್ದು, ಶೀಘ್ರದಲ್ಲೇ ಬೆಳ್ಳಿಪರದೆಗೆ ಬರಲು ಸಜ್ಜಾಗಿದೆ. ಕರಾವಳಿಯ ಉಡುಪಿ, ಬೆಂಗಳೂರು ಹಾಗೂ ತಮಿಳುನಾಡಿನ ಸುಂದರ ತಾಣಗಳಲ್ಲಿ ಸಿನಿಮಾದ ಚಿತ್ರೀಕರಣ ನಡೆಸಲಾಗಿದೆ. ‘ಕಿಕ್ ಮೀಡಿಯಾ’ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಕಾರ್ತಿಕ್ ಶರ್ಮಾ ಅವರಿಗೆ ಜೋಡಿಯಾಗಿ ಖ್ಯಾತ ನಟಿ ತನ್ವಿ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಜೊತೆಗೆ ಪ್ರಣವ್ ಶ್ರೀಧರ್, ಶ್ರೀವೈಷ್ಣವ್, ವೇದ ರಾವ್ ಮತ್ತು ಭಾನು ಮುಂತಾದ ಪ್ರತಿಭಾನ್ವಿತ ಕಲಾವಿದರು ನಟಿಸಿದ್ದು, ಸಾಗರ್ ಅತ್ಕರ್ ಛಾಯಾಗ್ರಹಣ ಹಾಗೂ ಆಶೀಷ್ ಹುಲಕುಂದ್ ಅವರ ಸಂಕಲನ ಈ ಚಿತ್ರಕ್ಕಿದೆ. ನಿರ್ದೇಶಕ ಕಾರ್ತಿಕ್ ಶರ್ಮಾ ಅವರಿಗೆ ಚಿತ್ರರಂಗ ಹೊಸದೇನಲ್ಲ. 'ಪವರ್ ಸ್ಟಾರ್' ಪುನೀತ್ ರಾಜ್‌ಕುಮಾರ್ ಅಭಿನಯದ ‘ವೀರ ಕನ್ನಡಿಗ’ ಹಾಗೂ ನಟಿ ಖುಷ್ಬೂ ಅಭಿನಯದ ‘ಮ್ಯಾಜಿಕ್ ಅಜ್ಜಿ’ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಾಲನಟನಾಗಿ ಅವರು ಮಿಂಚಿದ್ದರು. ಕೇವಲ ನಟನೆಯಷ್ಟೇ ಅಲ್ಲದೆ, ನೂರಕ್ಕೂ ಹೆಚ್ಚು ಕಿರುತೆರೆ ಧಾರಾವಾಹಿಗಳು ಮತ್ತು ರಿಯಾಲಿಟಿ ಶೋಗಳಿಗೆ ಸಂಗೀತ ನೀಡುವ ಮೂಲಕ ಸಂಗೀತ ಲೋಕದಲ್ಲೂ ದೊಡ್ಡ ಹೆಸರು ಮಾಡಿದ್ದಾರೆ. ಇದೀಗ ಚಿತ್ರರಂಗದಲ್ಲ ತಮಗಿರುವ ಸುದೀರ್ಘ ಅನುಭವವನ್ನು ಧಾರೆ ಎರೆದು ‘ಭಾವಾಂತರ’ ಚಿತ್ರವನ್ನು ಪ್ರೇಕ್ಷಕರ ಮುಂದೆ ತರಲು ಸಜ್ಜಾಗಿದ್ದಾರೆ. #movies #2026