Follow
Edu ವೀರ
@edu_veera
12,760
Posts
193,771
Followers
Edu ವೀರ
78.5K views
1 days ago
ದರ್ಶನ್, ಸುದೀಪ್​​ ನಟನೆಯ ಸಿನಿಮಾಗಳಲ್ಲಿ ವಿಲನ್ ಆಗಿ ಮಿಂಚಿದ್ದ ಪ್ರದೀಪ್ ರಾವತ್ಕನ್ನಡದ 'ಗಜ', 'ಅಭಯ್' ಹಾಗೂ ಬಾಲಿವುಡ್‌ನ 'ಗಜಿನಿ' ಚಿತ್ರಗಳಲ್ಲಿ ಖಡಕ್ ವಿಲನ್ ಆಗಿ ಮಿಂಚಿದ್ದ ಪ್ರಸಿದ್ಧ ನಟ ಪ್ರದೀಪ್ ರಾವತ್ (74) ರಕ್ತದ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ. 'ಮಹಾಭಾರತ'ದ ಅಶ್ವಥಾಮನಾಗಿ ಪ್ರಯಾಣ ಆರಂಭಿಸಿದ್ದ ಅವರು, ಸ್ಯಾಂಡಲ್‌ವುಡ್, ಟಾಲಿವುಡ್ ಹಾಗೂ ಬಾಲಿವುಡ್ ಚಿತ್ರರಂಗದಲ್ಲಿ ದೈತ್ಯ ಖಳನಟನಾಗಿ ಕೊಡುಗೆ ನೀಡಿದ್ದಾರೆ. ದರ್ಶನ್ ನಟನೆಯ ‘ಗಜ’ ಹಾಗೂ ‘ಅಭಯ್’ ಸಿನಿಮಾ ನೋಡಿದವರಿಗೆ ಪ್ರದೀಪ್ ರಾವತ್ (Prdeep Rawat) ಪರಿಚಯ ಇದ್ದೇ ಇರುತ್ತದೆ. ಕನ್ನಡದಲ್ಲಿ ಕೆಲವೇ ಸಿನಿಮಾ ಮಾಡಿದ್ದರೂ ಅವರ ಮುಖ ಮರೆಯುವಂಥದ್ದಲ್ಲ. ವಿಲನ್ ಆಗಿ ಅವರು ಅಷ್ಟು ದೊಡ್ಡ ಮಟ್ಟದಲ್ಲಿ ಪ್ರಭಾವ ಬೀರಿದ್ದರು. ಈಗ ಅವರು ನಿಧನ ಹೊಂದಿದ್ದಾರೆ. ರಕ್ತದ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅವರಿಗೆ 74 ವರ್ಷ ವಯಸ್ಸಾಗಿತ್ತು.ದೂರದರ್ಶನದ ‘ಮಹಾಭಾರತ’ದಲ್ಲಿ ಅಶ್ವಥಾಮನಿಂದ ಪ್ರದೀಪ್ ರಾವತ್ ಪ್ರಯಾಣ ಆರಂಭ ಆಯಿತು. ಬಾಲಿವುಡ್‌ನ ‘ಗಜಿನಿ’ ಮತ್ತು ಟಾಲಿವುಡ್‌ನ ‘ಛತ್ರಪತಿ’, ಕನ್ನಡದ ‘ಗಜ’ ಅವರಿಗೆ ಬೇರೆಯದೇ ಖ್ಯಾತಿ ನೀಡಿತು. ಅವರ ಅಗಲಿಕೆಗೆ ಇಡೀ ಭಾರತೀಯ ಚಿತ್ರರಂಗ ಕಂಬನಿ ಮಿಡಿದಿದೆ. ಅಶ್ವಥಾಮ’ನಾಗಿ ಕಿರುತೆರೆಯಿಂದ ಬಾಲಿವುಡ್‌ನತ್ತ ಬಿಗ್ ಎಂಟ್ರಿಜಬಲ್ಪುರದ ಯುಕೋ ಬ್ಯಾಂಕ್‌ನಲ್ಲಿ ಉದ್ಯೋಗಿಯಾಗಿದ್ದ ಪ್ರದೀಪ್ ರಾವತ್ ಅವರಿಗೆ ‘ಮಹಾಭಾರತ’ ಧಾರಾವಾಹಿಯಲ್ಲಿ ನಟಿಸುವ ಅವಕಾಶ ಸಿಕ್ಕಿತು. ಇದರಲ್ಲಿ ಅವರು ನಿರ್ವಹಿಸಿದ ‘ಅಶ್ವಥಾಮನ’ ಪಾತ್ರ ದೇಶಾದ್ಯಂತ ಅಪಾರ ಜನಪ್ರಿಯತೆ ತಂದುಕೊಟ್ಟಿತು. ಬಿಬಿಸಿಯಲ್ಲೂ ಪ್ರಸಾರವಾದ ಈ ಧಾರಾವಾಹಿಯ ಬಳಿಕ, ರಾಜ್ ಬಬ್ಬರ್, ಅನುಪಮ್ ಖೇರ್ ಹಾಗೂ ಅಲೋಕ್ ನಾಥ್ ಅವರಂತಹ ದೈತ್ಯ ಕಲಾವಿದರೊಂದಿಗೆ ಅನೇಕ ರಂಗಭೂಮಿ ನಾಟಕಗಳಲ್ಲಿ ಅವರು ವೇದಿಕೆ ಹಂಚಿಕೊಂಡರು.1990ರಲ್ಲಿ ಸಲ್ಮಾನ್ ಖಾನ್ ಅವರ ‘ಬಾಘಿ’ ಚಿತ್ರದ ಮೂಲಕ ಬಾಲಿವುಡ್‌ಗೆ ಪ್ರವೇಶಿಸಿದ ಇವರಿಗೆ, ನಂತರ ಹಿಂತಿರುಗಿ ನೋಡುವ ಅಗತ್ಯವೇ ಬರಲಿಲ್ಲ. ‘ಅಪರಾಧಿ’, ‘ಇನ್ಸಾನಿಯತ್’, ‘ಕೋಯಾಲಾ’, ‘ದೀವಾರ್’, ‘ಲಗಾನ್’ ಮತ್ತು ‘ಗಜಿನಿ’ಯಂತಹ ಹಿಟ್ ಚಿತ್ರಗಳಲ್ಲಿ ಇವರ ಅಭಿನಯ ಮೈಲಿಗಲ್ಲಾಗಿ ಉಳಿಯಿತು. ಕನ್ನಡದಲ್ಲಿ ನಟನೆಕನ್ನಡದಲ್ಲಿ ‘ಪರೋಡಿ’ ಹೆಸರಿನ ಸಿನಿಮಾದಲ್ಲಿ ಮೊದಲು ನಟಿಸಿದರು. ಉಪೇಂದ್ರ ಅವರು ಈ ಚಿತ್ರಕ್ಕೆ ಹೀರೋ. ಆ ಬಳಿಕ ಗಜ, ಅಭಯ್​ ಮಾಡಿದರು. ಸುದೀಪ್ ನಟನೆಯ ‘ಬಚ್ಚನ್’ ಚಿತ್ರಕ್ಕೂ ಇವರೇ ವಿಲನ್. ‘ಎಲೆಕ್ಷನ್’, ‘ಶಿವಲಿಂಗ’, ‘ಲಕ್ಷ್ಮಣ’ ಸಿನಿಮಾ ಮಾಡಿದರು. 2022ರಲ್ಲಿ ಬಂದ ‘ಚಾಂಪಿಯನ್’ ಅವರ ಕೊನೆಯ ಸಿನಿಮಾ.ಟಾಲಿವುಡ್ ಅಂಗಳದಲ್ಲಿ ಮೆರೆದ ಬ್ಲಾಕ್‌ಬಸ್ಟರ್ ಖಳನಟನಿರ್ದೇಶಕ ಎಸ್.ಎಸ್. ರಾಜಮೌಳಿ ಅವರು ‘ಲಗಾನ್’ ಚಿತ್ರದಲ್ಲಿ ಇವರ ನಟನೆಯನ್ನು ಮೆಚ್ಚಿ, ತಮ್ಮ ‘ಸಾಯಿ’ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಕರೆತಂದರು. ‘ಸಾಯಿ’ ಚಿತ್ರದ ಅತ್ಯುತ್ತಮ ಖಳನಾಯಕ ಪಾತ್ರಕ್ಕಾಗಿ ಇವರಿಗೆ ಫಿಲ್ಮ್‌ಫೇರ್ ಹಾಗೂ ನಂದಿ ಪ್ರಶಸ್ತಿಗಳು ಒಲಿದುಬಂದವು. #🕊️ಕನ್ನಡದ ಮತ್ತೋರ್ವ ಹಿರಿಯ ನಟ ಇನ್ನಿಲ್ಲ: ಕಂಬನಿ ಮಿಡಿದ ಚಿತ್ರರಂಗ 😢💐
Edu ವೀರ
6.8K views
3 days ago
ಲವ್‌ ಬ್ರೇಕ್‌ ಅಪ್‌ ಆಯ್ತಾ, ವೈಯಕ್ತಿಕ ಜೀವನದ ಬಗ್ಗೆ ಊಹಾಪೋಹ.. ಅನುಪಮಾ ಪರಮೇಶ್ವರನ್‌ ಖಡಕ್‌ ಉತ್ತರ! ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಮಾಡುವ ವಿಷಯಗಳು ಸಂಪೂರ್ಣವಾಗಿ ಅವರ ವೈಯಕ್ತಿಕ ನಿರ್ಧಾರ ಮತ್ತು ಇತರರು ಅವರನ್ನು ನಿರ್ಣಯಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.  ತೆಲುಗು ಮತ್ತು ತಮಿಳಿನ ಸರಣಿ ಸಿನಿಮಾಗಳ ಶೂಟಿಂಗ್‌ನಲ್ಲಿ ಫುಲ್‌ ಬ್ಯುಸಿಯಾಗಿರುವ ಅನುಪಮಾ ಪರಮೇಶ್ವರನ್ (Anupama Parameswaran) ಅವರು ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ, ಅನುಪಮಾ ಪರಮೇಶ್ವರನ್ ಅವರ ವೈಯಕ್ತಿಕ ಜೀವನದ ಬಗ್ಗೆ ಒಂದು ಸ್ಟಂಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅವರ ಹೊಸ ಸಿನಿಮಾದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಅವರು ಮಾಡಿದಂತಹ ಕಾಮೆಂಟ್‌ಗಳು ಮತ್ತೊಮ್ಮೆ ಚರ್ಚೆಯಾಗುತ್ತಿವೆ. ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಬರುತ್ತಿರುವ ಟೀಕೆಗಳಿಗೆ ಅನುಪಮಾ ಪರಮೇಶ್ವರನ್ ಅವರು ಟಕ್ಕರ್‌ ಎನ್ನುವಂತೆ ಉತ್ತರ ನೀಡಿದ್ದಾರೆ. ಅನುಪಮಾ ಪರಮೇಶ್ವರನ್ ಪ್ರಸ್ತುತ ಕ್ರೇಜಿ ಕಲ್ಯಾಣಂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ತರುಣ್ ಭಾಸ್ಕರ್, ಅಖಿಲ್ ರಾಜ್ ಮತ್ತು ಅನುಪಮಾ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾವನ್ನು ಭದ್ರಪ್ಪ ಗಜುಲ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ಟೀಸರ್ ಅನ್ನು ಇತ್ತೀಚೆಗೆ ಚಿತ್ರದತಂಡ ಬಿಡುಗಡೆ ಮಾಡಿದೆ. ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅನುಪಮಾ ಅವರಿಗೆ ಅವರ ವೈಯಕ್ತಿಕ ಜೀವನ ಮತ್ತು ಸಾಮಾಜಿಕ ಮಾಧ್ಯಮದಲ್ಲಿನ ಪೋಸ್ಟ್‌ಗಳ ಕುರಿತು ಪ್ರಶ್ನೆ ಮಾಡಲಾಗಿತ್ತು.  ಅನುಪಮಾ ಅವರ ಇತ್ತೀಚಿನ ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಪರೋಕ್ಷವಾಗಿ ಯಾರನ್ನಾದರೂ ಗುರಿಯಾಗಿರಿಸಿಕೊಂಡಿವೆಯೇ ಮತ್ತು ಅವುಗಳ ಹಿಂದೆ ಯಾವುದೇ ವೈಯಕ್ತಿಕ ಕಾರಣವಿದೆಯೇ ಎಂಬ ಪ್ರಶ್ನೆಗೆ ಅನುಪಮಾ ಅವರು ಸ್ಪಷ್ಟವಾಗಿ ಉತ್ತರ ಕೊಟ್ಟಿದ್ದಾರೆ. ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಮಾಡುವ ವಿಷಯಗಳು ಸಂಪೂರ್ಣವಾಗಿ ಅವರ ವೈಯಕ್ತಿಕ ನಿರ್ಧಾರ ಮತ್ತು ಇತರರು ಅವರನ್ನು ನಿರ್ಣಯಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಅನುಪಮಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಯಾರನ್ನೂ ಗುರಿಯಾಗಿಸಿಕೊಂಡಿಲ್ಲ. ಕೋಪ ಅಥವಾ ದ್ವೇಷದಿಂದ ಯಾವುದೇ ಪೋಸ್ಟ್‌ಗಳನ್ನು ನಾನು ಪೋಸ್ಟ್ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಒಬ್ಬ ಮಹಿಳೆಯಾಗಿ ತನ್ನ ಅನುಭವಗಳು, ಆಲೋಚನೆಗಳು ಮತ್ತು ಭಾವನೆಗಳನ್ನು ಸಾಮಾಜಿಕ ಮಾಧ್ಯಮದ ಮೂಲಕ ಮಾತ್ರ ಹಂಚಿಕೊಂಡಿದ್ದೇನೆ ಎಂದು ಅನುಪಮಾ ಹೇಳಿದರು. ತನ್ನ ಭಾವನೆಗಳನ್ನು ಪ್ರಾಮಾಣಿಕವಾಗಿ ವ್ಯಕ್ತಪಡಿಸುವುದರಲ್ಲಿ ಯಾವುದೇ ತಪ್ಪಿಲ್ಲ ಮತ್ತು ಅದರ ಬಗ್ಗೆ ನನಗೆ ಹೆಮ್ಮೆ ಇದೆ ಎಂದಿದ್ದಾರೆ. ತಮ್ಮ ಪೋಸ್ಟ್‌ಗಳನ್ನು ಆಧರಿಸಿ ಅನಗತ್ಯ ಕಥೆಗಳನ್ನು ಸೃಷ್ಟಿಸುವುದು ಮತ್ತು ಅವುಗಳನ್ನು ಯಾರಿಗಾದರೂ ಲಿಂಕ್ ಮಾಡುವುದು ಸರಿಯಾದದ್ದು ಅಲ್ಲವೇ ಅಲ್ಲ ಎಂದು ಹೇಳಿದ್ದಾರೆ.  ಹೊರಗಿನವರಿಗೆ ತನ್ನ ವೈಯಕ್ತಿಕ ಜೀವನದ ಬಗ್ಗೆ ಏಕೆ ಸಂಪೂರ್ಣವಾಗಿ ತಿಳಿದಿಲ್ಲ, ಹಾಗಾದರೆ ಜನರು ತನ್ನ ಬಗ್ಗೆ ಏಕೆ ಊಹಾಪೋಹ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಸಾಮಾಜಿಕ ಮಾಧ್ಯಮವು ತನ್ನ ವೈಯಕ್ತಿಕ ವೇದಿಕೆಯಾಗಿದ್ದು, ಅದರಲ್ಲಿ ತನಗೆ ಇಷ್ಟವಾದದ್ದನ್ನು ಹಂಚಿಕೊಳ್ಳುವ ಹಕ್ಕಿದೆ ಎಂದು ಅನುಪಮಾ ಅವರು ಹೇಳಿದ್ದಾರೆ. ಪ್ರತಿಯೊಂದು ಪೋಸ್ಟ್ ಅನ್ನು ವಿವರಿಸುವ ಜವಾಬ್ದಾರಿ ನನ್ನದಲ್ಲ ಎಂದು ತಮಾಷೆಯಾಗಿ ಹೇಳಿದ್ದಾರೆ. #💔 ಖ್ಯಾತ ನಟನ ಜೊತೆ ಲವ್ ಬ್ರೇಕಪ್ ಬಗ್ಗೆ ಮೌನ ಮುರಿದ ಖ್ಯಾತ ನಟಿ🔥
Edu ವೀರ
32.3K views
3 days ago
ಮುಂದುವರಿದ ವರುಣನ ಅಬ್ಬರ, ಈ ಜಿಲ್ಲೆಗಳತಾಲೂಕುಗಳಲ್ಲಿ ಆ.3ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆ ಅನಾಹುತ ಸೃಷ್ಟಿಸಿದೆ. ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ತಡೆ ಗೋಡೆ, ಗುಡ್ಡ ಕುಸಿತದಿಂದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ತುಂಗಾ ನದಿಲ್ಲೂ ಮಳೆ ಅಬ್ಬರ ಜೋರಾಗಿದೆ. ಹೀಗಾಗಿ ನಾಳೆ (ಆಗಸ್ಟ್ 03) ಕೆಲ ತಾಲೂಕುಗಲ್ಲಿ ಶಾಲಾ-ಕಾಲೇಜುಗಳಿಗೆ ರಝೆ ಘೋಷಣೆ ಘೋಷಣೆ ಮಾಡಲಾಗಿದೆ. ತುಂಬಿ ಹರಿಯುತ್ತಿದ್ದು, ನದಿಪಾತ್ರದಲ್ಲಿ ಪ್ರವಾಹದ ಭೀತಿ ಶುರುವಾಗಿದೆ. ಇನ್ನೊಂದೆಡೆ ಉತ್ತರ ಕನ್ನಡ ಜಿಲ್ಲೆಯ, ಕರ್ನಾಟಕದಲ್ಲಿ ಮುಂಗಾರು ಮಳೆ (monsson Rain) ಆರಂಭದಲ್ಲಿ ಕೈಕೊಟ್ಟಿದ್ದರೂ ಸಹ ಜುಲೈ ಅಂತ್ಯದಿಂದ ಚುರುಕುಗೊಂಡಿದೆ. ಅದರಲ್ಲೂ ಕರಾವಳಿ (Karavali) ಮಲೆನಾಡು ಭಾಗದ ಜಿಲ್ಲೆಗಳಲ್ಲಿ ವರುಣ ಅಬ್ಬರದಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಆದರೂ ಮಳೆ ಅಬ್ಬರ ಇಲ್ಲಿ ನಿಂತಿಲ್ಲ. ಮುಂದಿನ ದಿನಗಳಲ್ಲೂ ಸಹ ಮುಂದುವರಿಯಲಿದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ (Shivamogga) , ಉತ್ತರ ಕನ್ನಡ  (Uttara Kannada)  ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೆಲ ತಾಲೂಕುಗಳಲ್ಲಿ ನಾಳೆ (ಆಗಸ್ಟ್ 03) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಕೆಲ ತಾಲೂಕುಗಳಲ್ಲಿ ರಜೆಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಣೆ. ನಾಳೆ (ಆಗಸ್ಟ್ 03) ದಾಂಡೇಲಿ, ಜೋಯಿಡಾ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ಪ್ರೌಢಶಾಲೆವರೆಗೆ ರಜೆ ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ. ಇನ್ನು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗುತ್ತಿರುವುದರಿಂದ ಸಾಗರ ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜಿಗೆ ನಾಳೆ (ಆಗಸ್ಟ್ 03) ರಜೆ ಘೋಷಿಸಿ ತಹಶೀಲ್ದಾರ್ ಡಾ.ಪ್ರತಿಭಾ ಆದೇಶಿಸಿದ್ದಾರೆ. ಇನ್ನು ಮಳೆಯಿಂದಾಗುವ ಅನಾಹುತ, ಸಮಸ್ಯೆಗಳಿಗೆ ಸ್ಪಂದಿಸಲು ಸಿದ್ಧತೆ ಕೈಗೊಳ್ಳಲಾಗಿದ್ದು, ತಾಲೂಕು ಕಚೇರಿಯಲ್ಲಿ 24 ಗಂಟೆಯೂ ಸಹಾಯವಾಣಿ ಆರಂಭ ಮಾಡಲಾಗಿದೆ.ಕೊಪ್ಪ, ಶೃಂಗೇರಿಯಲ್ಲೂ  ಶಾಲೆಗಳಿಗೆ ರಜೆ ಘೋಷಣೆಚಿಕ್ಕಮಗಳೂರು ಜಿಲ್ಲೆಯಲ್ಲೂ ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಪ್ಪ, ಶೃಂಗೇರಿ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ನಾಳೆ(ಸೋಮವಾರ) ರಜೆ ನೀಡಲಾಗಿದೆ. ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರಕ್ಕೆ ತೆರಳದಂತೆ ಸಾರ್ವಜನಿಕರಿಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಸೂಚನೆ ನೀಡಿದ್ದಾರೆ. ಜೊತೆಗೆ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನಾಳೆ ರಜೆ ನೀಡಿ ಆದೇಶಿಸಿದ್ದಾರೆ. #📢ಮುಂದುವರಿದ ವರುಣನ ಅಬ್ಬರ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ🔴