ಫಾಲೋ
Malgudi Express
@news007
25,007
ಪೋಸ್ಟ್ಸ್
12,506
ಫಾಲೋವರ್ಸ್
Malgudi Express
565 ವೀಕ್ಷಿಸಿದ್ದಾರೆ
17 ಗಂಟೆಗಳ ಹಿಂದೆ
#📜ಪ್ರಚಲಿತ ವಿದ್ಯಮಾನ📜 ಸ್ವಸಹಾಯ ಸಂಘಗಳ ನಿರ್ವಹಣೆಯ ಅಕ್ಕ ಕಫೆ ಉದ್ಘಾಟನೆ ತರಕಾರಿ ಹೆಚ್ಚಿ ಅಡುಗೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಧಾರವಾಡ: ರಾಜ್ಯದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ರಾಷ್ಟ್ರೀಯ ಜೀವನೋಪಾಯ ಅಭಿಯಾನವನ್ನು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಹೇಳಿದರು. ಜಿಲ್ಲಾ ಪಂಚಾಯತ ಹತ್ತಿರವಿರುವ ಕಟ್ಟಡದಲ್ಲಿ ಕಬ್ಬೆನೂರು ಗ್ರಾಮದ ಕಾಮದೇನು ಮಹಿಳಾ ಸ್ವಸಹಾಯ ಸಂಘ ಆರಂಭಿಸಿರುವ ಅಕ್ಕ-ಕಫೆ ಉದ್ಘಾಟಿಸಿ, ಮಾತನಾಡಿದರು. ಸದರಿ ಅಭಿಯಾನದ ಉದ್ದೇಶ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನದ ಪ್ರಮಾಣವನ್ನು ಕಡಿಮೆ ಮಾಡುವುದಾಗಿದೆ. ಈ ನಿಟ್ಟಿನಲ್ಲಿ ಅಭಿಯಾನದಡಿ ಸ್ವಸಹಾಯ ಗುಂಪುಗಳ ಮಹಿಳೆಯರೆ ನಿರ್ವಹಿಸಲು ಅವಕಾಶವಾಗುವಂತೆ ಅಕ್ಕ-ಕಫೆ ರೂಪಿಸಲಾಗಿದ್ದು, ಮಹಿಳೆಯರ ಆರ್ಥಿಕ ಸಬಲಿಕರಣಕ್ಕೆ ಇದು ದೊಡ್ಡ ಕೊಡುಗೆ ನೀಡಲಿದೆ ಎಂದರು. ಮಹಿಳೆಯರನ್ನು ಸ್ವಸಹಾಯ ಗುಂಪುಗಳಡಿ ಸಂಘಟಿಸಿ, ಅವರಿಗೆ ಕೃಷಿ ಮತ್ತು ಕೃಷಿಯೇತರ ವಿಭಾಗಗಳಡಿ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಒದಗಿಸುವುದರ ಜೊತೆಗೆ ಅವರು, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಅಭಿವೃದ್ಧಿ ಪಥದೊಂದಿಗೆ ಸ್ವಾವಲಂಬನೆಯ ಜೀವನವನ್ನು ನಿರ್ವಹಿಸುವಲ್ಲಿ ನಿರಂತರ ಬೆಂಬಲ ನೀಡಲಾಗುತ್ತಿದೆ ಎಂದರು. ಪ್ರಮುಖವಾಗಿ ಮಹಿಳೆಯರು ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಿಕೊಂಡು ಜೀವನೋಪಾಯದೊಂದಿಗೆ ಸಬಲೀಕರಣದ ಬದುಕನ್ನು ರೂಪಿಸಿಕೊಳ್ಳುವಲ್ಲಿ ಅವಶ್ಯಕ ಸಾಮಥ್ರ್ಯಾಭಿವೃದ್ಧಿ ತರಬೇತಿಗಳನ್ನು ಏರ್ಪಡಿಸಿ, ಪ್ರತಿಯೊಬ್ಬ ಮಹಿಳೆಯನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಸೂಕ್ತ ಅವಕಾಶಗಳನ್ನು ಕಲ್ಪಿಸಿ ನಿರಂತರವಾಗಿ ಸರ್ಕಾರ ಶ್ರಮಿಸುತ್ತಿದೆ ಎಂದರು. ಮಹಿಳೆಯರ ಜೀವನೋಪಾಯ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡುವಲ್ಲಿ ರಾಜ್ಯ ಸರ್ಕಾರವು 2024-25ನೇ ಸಾಲಿನ ಆಯವ್ಯಯದಲ್ಲಿ ಅಕ್ಕ-ಕಫೆ ಕಾರ್ಯಕ್ರಮವನ್ನು ಘೋಷಿಸಿದೆ. ಸರ್ಕಾರದ ಆದೇಶದಂತೆ ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿರುಚಿಯಾಗಿ ಕೈಗೆಟಕುವ ದರದಲ್ಲಿ ಒದಗಿಸಲು ಮಹಿಳೆಯರೇ ನಡೆಸುವ 50 ಕೆಫೆ ಸಂಜೀವಿನಿ (ಅಕ್ಕ ಕೆಫೆ) ಕ್ಯಾಂಟೀನ್‍ಗಳನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ. ಅದರಂತೆ ಧಾರವಾಡ ಜಿಲ್ಲೆಯ ಜಿಲ್ಲಾ ಕೇಂದ್ರ ಸ್ಥಾನ ಮತ್ತು ಎಲ್ಲ ತಾಲೂಕು ಕೇಂದ್ರ ಸ್ಥಾನಗಳಲ್ಲಿ ಅಕ್ಕ ಕೆಫೆಯನ್ನು ಆರಂಭಿಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ನವಲಗುಂದ ಶಾಸಕರಾದ ಎನ್. ಎಚ್.ಕೋನರಡ್ಡಿ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ್ ಹಾಗೂ ಪ್ರಭಾರ ಜಿಲ್ಲಾಧಿಕಾರಿ ಆಗಿರುವ ಜಿ.ಪಂ. ಸಿಇಓ ಭುವನೇಶ ದೇವಿದಾಸ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ ಆರ್ಯ, ಪ್ರೋಬೆಷನರಿ ಐಎಎಸ್ ಅಧಿಕಾರಿ ರೀತಿಕಾ ವರ್ಮಾ, ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಹಾಗೂ ಕಾಮದೇನು ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ರಾಜಶ್ರೀ ಮಂಜುನಾಥ ಪವಾಡಿ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ವಿವಿಧ ಸ್ವಸಹಾಯ ಸಂಘಗಳ ಸದಸ್ಯೆಯರು, ಸಾರ್ವಜನಿಕರು ಹಾಜರಿದ್ದರು. ಅಕ್ಕ ಕೆಫೆ: ಅಕ್ಕ ಕೆಫೆ ಕಾರ್ಯಕ್ರಮವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಕಾರ್ಯಕ್ರಮದ ಮುಖ್ಯ ಉದ್ದೇಶವು ಮಹಿಳಾ ಸ್ವ-ಸಹಾಯ ಸಂಘಗಳಿಗೆ ಆಹಾರ ಪೂರೈಕೆ ಕ್ಷೇತ್ರದಲ್ಲಿ ಸುಸ್ಥಿರ ಜೀವನೋಪಾಯ ಚಟುವಟಿಕೆಯನ್ನು ಒದಗಿಸುವುದಾಗಿದೆ. ಪ್ರಮುಖವಾಗಿ ಈ ಅಕ್ಕ ಕೆಫೆ ಚಟುವಟಿಕೆಯಡಿ ಉತ್ತಮ ಗುಣಮಟ್ಟದ ಶುಚಿ-ರುಚಿ ಪೌಷ್ಠಿಕ ಆಹಾರವನ್ನು ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಪೂರೈಸುವ ದೂರದೃಷ್ಠಿಯೊಂದಿಗೆ ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಗೆ ಎರಡು ಅಕ್ಕ ಕೆಫೆಗಳ ಸ್ಥಾಪನೆಗಾಗಿ ಸ್ಥಳ ಗುರುತಿಸಿ ಸರಕಾರಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು. ಅದು ಅನುಮೋದನೆಗೊಂಡು ಅನುದಾನ ಬೀಡುಗಡೆಯಾಗಿದೆ. ಸದರಿ ಕೆಫೆ ಅನುಷ್ಠಾನಕ್ಕಾಗಿ ಜಿಲ್ಲಾ ಹಂತದಲ್ಲಿ ಜಂಟಿ ನಿರ್ದೇಶಕರು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆರವರ ಅಧ್ಯಕ್ಷತೆಯಲ್ಲಿ, 7 ಜನರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಸದರಿ ಸಮಿತಿ ನಿರ್ಣಯದಂತೆ ಆಸಕ್ತ ಸ್ವ-ಸಹಾಯ ಸಂಘಗಳ ಆಯ್ಕೆಗಾಗಿ ಪ್ರಕಟಣೆ ಹೊರಡಿಸಿ, ಸರ್ಕಾರದ ನಿಯಮಾನುಸಾರ ಆಯ್ಕೆ ಮಾಡಲಾಗುತ್ತದೆ. ನಂತರ ಆಯ್ಕೆ ಗೊಂಡ ಸ್ವ-ಸಹಾಯ ಸಂಘಗಳಿಗೆ ಪಾಕ ಪ್ರಾವಿಣ್ಯತೆ, ಶುಚಿತ್ವ, ನೈರ್ಮಲ್ಯ, ನಾಯಕತ್ವ, ನಿರ್ವಹಣೆ ಕುರಿತು ತರಬೇತಿ ನೀಡಲಾಗುತ್ತದೆ. #Inauguration #AkkaCafe #run #SelfHelpGroups #malgudiexpress #malgudinews #news #TopNews
Malgudi Express
647 ವೀಕ್ಷಿಸಿದ್ದಾರೆ
18 ಗಂಟೆಗಳ ಹಿಂದೆ
#📜ಪ್ರಚಲಿತ ವಿದ್ಯಮಾನ📜 ಬೆಳಗಾವಿ ನಗರಕ್ಕೆ 100 ಎಲೆಕ್ಟ್ರಿಕ್ ಬಸ್ಸುಗಳನ್ನು ಸೇರಿಸಲಾಗುವುದು: ರಾಮಲಿಂಗಾರೆಡ್ಡಿ ಬೆಳಗಾವಿ: ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಗೆ 700 ಹೊಸ ಬಸ್ಸುಗಳು ಹಾಗೂ ಬೆಳಗಾವಿ ನಗರಕ್ಕೆ 100 ಎಲೆಕ್ಟ್ರಿಕ್ ಬಸ್ಸುಗಳನ್ನು ಮುಂದಿನ ದಿನಗಳಲ್ಲಿ ಸೇರಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಬೆಳಗಾವಿಯಲ್ಲಿ ನಿರ್ಮಾಣಗೊಂಡ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಬಸ್ ನಿಲ್ದಾಣದ ಉದ್ಘಾಟನೆಯನ್ನು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನೆರವೇರಿಸಿ ಮಾತನಾಡಿದರು. 5 ಎಕರೆ 5 ಗುಂಟೆ ಪ್ರದೇಶದಲ್ಲಿ ರೂ.24 ಕೋಟಿ ವೆಚ್ಚದಲ್ಲಿ ಎಲೆಕ್ಟ್ರಿಕ್ ಬಸ್ ಘಟಕವನ್ನು ಸಹ ಸ್ಥಾಪಿಸಲಾಗುತ್ತಿದೆ. ನೂತನ ಬಸ್ ನಿಲ್ದಾಣದಲ್ಲಿ 28 ಅಂಕಣಗಳು, 1365 ಸಾರಿಗೆ ಸರತಿಗಳು ನಿರ್ಗಮನವಾಗಲಿದ್ದು, 87 ಉಪನಗರ ಸ್ಥಳಗಳನ್ನು ಒಳಗೊಂಡಂತೆ ಒಟ್ಟು 143 ಸ್ಥಳಗಳಿಗೆ ಬಸ್ ಸೌಲಭ್ಯ ಒದಗಲಿದೆ. ಪ್ರತಿ ದಿನ ಸುಮಾರು 96,000 ಜನರು ಈ ನಿಲ್ದಾಣದ ಮೂಲಕ ಪ್ರಯಾಣಿಸಲಿದ್ದಾರೆ ಎಂದರು. ನಿಲ್ದಾಣದಲ್ಲಿ ಪಾರ್ಕಿಂಗ್ ವ್ಯವಸ್ಥೆ, ವಾಣಿಜ್ಯ ಮಳಿಗೆಗಳು, ಕುಡಿಯುವ ನೀರು, ಶೌಚಾಲಯಗಳು, ಶಿಶುಗಳಿಗೆ ಹಾಲುಣಿಸುವ ಕೊಠಡಿ, ವಿಕಲಚೇತನರ ರಾಂಪ್ ವ್ಯವಸ್ಥೆ, ಪೊಲೀಸ್ ಚೌಕಿ, ವಿಭಾಗೀಯ ಕಚೇರಿ, ಸಬ್-ವೇ ಸಂಪರ್ಕ, ಲಿಫ್ಟ್ ಹಾಗೂ ಎಸ್ಕಲೇಟರ್ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಇದೇ ಸಂದರ್ಭದಲ್ಲಿ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ, ಗೃಹ ವೈದ್ಯರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಶಿಲಾನ್ಯಾಸ ಹಾಗೂ ರಾಣಿ ಚೆನ್ನಮ್ಮ ವಿ.ವಿಯ ಹಿರೇಬಾಗೇವಾಡಿ ಹೊಸ ಆವರಣದಲ್ಲಿ ಪಿ.ಎಂ ಉಷಾ ವಿವಿಧ ಕಟ್ಟಡಗಳ ಹಾಗೂ ರಾಷ್ಟ್ರೀಯ ಹೆದ್ದಾರಿಯಿಂದ ವಿವಿಯ ನೂತನ ಆವರಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಯಿತು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಸೇರಿ ಹಲವು ಗಣ್ಯರು, ಪ್ರತಿನಿಧಿಗಳು, ಅಧಿಕಾರಿಗಳು ಹಾಜರಿದ್ದರು. #electricbuses #added #Belgavi #city #RamalingaReddy #ಬೆಳಗಾವಿ #Belagavi #NWKRTC #Karnataka #Siddaramaiah #malgudiexpress #malgudinews #news #TopNews
Malgudi Express
532 ವೀಕ್ಷಿಸಿದ್ದಾರೆ
19 ಗಂಟೆಗಳ ಹಿಂದೆ
#📜ಪ್ರಚಲಿತ ವಿದ್ಯಮಾನ📜 ಸಮೀಕ್ಷೆ ವೇಳೆ ಸಿಡಿಮಿಡಿಯಾದ ಡಿ ಕೆ ಶಿವಕುಮಾರ್ ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಗೊಂದಲಗಳಿಂದ ಸಾಕಷ್ಟು ಸುದ್ದಿಯಾಗುತ್ತಿದೆ.ಸಮೀಕ್ಷೆಯ ಸಮಯದಲ್ಲಿ ಕೇಳುವ ಪ್ರಶ್ನೆಗಳಿಗೆ ಆಕ್ಷೇಪ ವ್ಯಕ್ತವಾಗುತ್ತಿದ್ದು, ಇದರ ಅಗತ್ಯವಿದೆಯಾ ಎಂದು ಕೇಳಲಾಗುತ್ತಿದೆ. ಬೆಂಗಳೂರಿನಲ್ಲಿ ಸಮೀಕ್ಷೆಗೆ ಬಂದ ಅಧಿಕಾರಿಗಳಿಗೆ ತಮ್ಮ ಪತ್ನಿಯ ಜೊತೆಗೂಡಿ ವಿವರಗಳನ್ನು ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್, ತಮ್ಮ ಬಳಿ ಇರುವ ಚಿನ್ನಾಭರಣ ಸೇರಿದಂತೆ ಹಲವು ವಿಷಯಗಳ ಕುರಿತು ಕೇಳಿದ ಮಾಹಿತಿಗೆ ಸಿಡಿಮಿಡಿಗೊಂಡರು. ಈ ಸಮೀಕ್ಷೆಯಲ್ಲಿ ಇಂತಹ ವೈಯಕ್ತಿಕ ವಿಷಯಗಳನ್ನು ಸಂಗ್ರಹಿಸುವ ಅಗತ್ಯವಿದೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಅವರು ತಮ್ಮ ಕುಟುಂಬದ ಸಮೀಕ್ಷೆಗೆ ಕನಿಷ್ಠ ಒಂದು ಗಂಟೆ ವ್ಯಯಸಿದ್ದನ್ನು ಕಂಡು ಇಷ್ಟೊಂದು ಸಮಯ ತೆಗೆದುಕೊಂಡರೆ ಸಮೀಕ್ಷೆ ಯಾವಾಗ ಪೂರ್ಣಗೊಳ್ಳುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಗಣತಿ ದಾರರಿಗೆ ತಮ್ಮ ವಿವರಗಳನ್ನು ನೀಡಿದ ಡಿ ಕೆ ಶಿವಕುಮಾರ್ ತಮ್ಮ ಜನ್ಮ ಜಿಲ್ಲೆ ಬೆಂಗಳೂರು ದಕ್ಷಿಣ ಎಂಕಾಮ್‌., ಶಿಕ್ಷಣ ಪಡೆದಿದ್ದೇನೆ ಎಂದರು. ಉದ್ಯೋಗದ ಕುರಿತ ಪ್ರಶ್ನೆಗೆ, 'ಕೃಷಿ ಎಂದು ಹಾಕಿ' ಎಂದರು. ಧರ್ಮ: ಹಿಂದೂ, ಜಾತಿ: ಒಕ್ಕಲಿಗ ಗೌಡ ಒಕ್ಕಲಿಗ(154), ಜಾತಿ ಪ್ರಯಾಣ ಪತ್ರ ಶಾಲೆಯಲ್ಲಿ ಪಡೆದಿದ್ದೇನೆ. 31ರ ವಯಸ್ಸಿನಲ್ಲಿ ಮದುವೆಯಾಗಿದ್ದೇನೆ. ಸರ್ಕಾರದ ಯಾವುದೇ ಸೌಲಭ್ಯ ಸಿಕ್ಕಿಲ್ಲ‌ ಎಂದು ಪ್ರಶ್ನೆಗಳಿಗೆ ಉತ್ತರ ನೀಡಿದರು. ಮೀಸಲಾತಿ ಸೌಲಭ್ಯವನ್ನು ಪಡೆದಿಲ್ಲ, ಉದ್ಯೋಗದ ಪ್ರಶ್ನೆಗೆ ಪಬ್ಲಿಕ್ ಸರ್ವಂಟ್,ಸ್ವ ಉದ್ಯೋಗ ಎಂದು ಬರೆದುಕೊಳ್ಳಿ ಎಂದು ಹೇಳಿದರು. ಕುಲ ಕಸುಬು ಕೃಷಿ ಸಾಗುವಳಿ ಎಂದ ಅವರು, ಆದಾಯದ ಬಗ್ಗೆ ಪ್ರಶ್ನೆ ಬಂದಾಗ ದೊಡ್ಡ ಸ್ಲಾಬ್ ಹಾಕು ಎಂದು ಹೇಳಿದರು. ರಾಜಕೀಯ ಪ್ರಾತಿನಿಧ್ಯದ ಪ್ರಶ್ನೆಗೆ 'ಮಂತ್ರಿ ಹಾಕು' ಎಂದು ಹೇಳಿದರು. ಈ ವೇಳೆ ಅಂಥ ಆಯ್ಕೆ ಇಲ್ಲ ಎಂದಿದ್ದಕ್ಕೆ, 'ಮಾಜಿ ಜಿಲ್ಲಾ ಪಂಚಾಯತ್ ಮೆಂಬರ್' ಎಂದು ಹಾಕುವಂತೆ ತಿಳಿಸಿದರು. ಮಾರ್ಕೆಟಿಂಗ್‌ ಸೊಸೈಟಿ, ಬೇಕಾದಷ್ಟು ನಿಗಮ ಮಂಡಳಿಗಿದ್ದೇನಲ್ಲ ಎಂದು ಹೇಳಿದರು. ಇಷ್ಟು ಪ್ರಶ್ನೆಗಳನ್ನು ಕೇಳಿದ ಬಳಿಕ, ಪ್ರಶ್ನೆಗಳು ತುಂಬಾ ಆದವು. ಇದೆಲ್ಲವೂ ಬಹಳ ಸಿಂಪಲ್‌ ಆಗಿ ಇರಬೇಕು ಎಂದು ಹೇಳಿದರು. ಕುಟುಂಬ ಹೊಂದಿರುವ ಆಸ್ತಿ 50-50 ಎಕರೆ ಹಾಕಿ ಎಂದು ಹೇಳಿದರು. ಬ್ಯುಸಿನೆಸ್‌ಗೋಸ್ಕರ ಸಾಲ ಇದೆ. ಬ್ಯಾಂಕ್‌ನಲ್ಲಿ ಮಾಡಿದ್ದೇವೆ. 25 ಹಸು ಇದೆ, ಎತ್ತು ಇದೆ, ಕುರಿ ಮೇಕೆ ಹತ್ತತ್ತು ಹಾಕು ಎಂದು ಹೇಳಿದರು. ಹೈನುಗಾರಿಕೆ, ಕೋಳಿ ಸಾಕಾಣಿಕೆ, ರೇಷ್ಮೆ ಇದೆ. ವಾಣಿಜ್ಯ ಕಟ್ಟಡ 4 ಹಾಕೊಳ್ಳಿ, ತೋಟದ ಮನೆ ಇದೆ. ಇತರ ಕಟ್ಟಡ ಪಟ್ಟಿಕೊಡಬೇಕು ಅಷ್ಟೇ ಎಂದರು. ಬಳಿಕ ಉಷಾ ಶಿವಕುಮಾರ್‌ಗೆ ಪ್ರಶ್ನೆಗಳನ್ನು ಕೇಳಲಾಯಿತು. ಮನೆ ಸಂಖ್ಯೆ 128 ಇರಬೇಕು. ಅಂಚೆ ವಿಳಾಸ ದೊಡ್ಡಾಲಹಳ್ಳಿ. ಎರಡು ಫಾರ್ಮ್‌ ಹೌಸ್‌, ಕಂಪ್ಯೂಟರ್, ಪ್ರಿಡ್ಜ್ ಒಂದ್ 5 ಹಾಕಿಕೊಳ್ಳಿ. ಎಸಿ ಇದೆ ಎಂದು ಹೇಳಿದರು. ಫ್ಯಾಕ್ಸ್‌ ಇದ್ಯಾ ಎನ್ನುವ ಪ್ರಶ್ನೆಗೆ, 'ಇದನೆಲ್ಲಾ ಯಾಕೆ ಹಾಕಿದ್ರಿ‌. ಈಗ ಯಾರದ್ದಿರುತ್ತೆ ಫ್ಯಾಕ್ಸ್' ಎಂದು ಉತ್ತರಿಸಿದರು. ಈ ವೇಳೆ ಗಣತಿ ದಾರರು ತಮ್ಮ ಬಳಿ ಚಿನ್ನಾಭರಣಗಳಿವೆಯಾ, ಇದ್ದರೆ ಎಷ್ಟಿದೆ ಎಂದು ಕೇಳಿದರು. ಪ್ರಶ್ನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಿವಕುಮಾರ್ ಜ್ಯುವೆಲರಿ ಇದೆಯಾ ಇಲ್ಲವಾ ಅನ್ನೋದು ನಿಮಗ್ಯಾಕೆ ತೀರಾ ಪರ್ಸನಲ್ ಡೀಟೆಲ್ಸ್‌ಗೆ ಹೋಗಬಾರದು. ನಮ್ಮ ಮನೆಯಲ್ಲೇ 1 ಗಂಟೆ ಆಯ್ತು ದಿನಕ್ಕೆ ಎಷ್ಟು ಸಮೀಕ್ಷೆ ಮಾಡ್ತೀರಾ ಎಂದು ಪ್ರಶ್ನಿಸಿದರು. #DKShivakumar #angry #during #survey #malgudiexpress #malgudinews #news #TopNews
Malgudi Express
3.4K ವೀಕ್ಷಿಸಿದ್ದಾರೆ
1 ದಿನಗಳ ಹಿಂದೆ
#📜ಪ್ರಚಲಿತ ವಿದ್ಯಮಾನ📜 ಸೆರೆಯಲ್ಲಿರುವ ಗುಬ್ಬಚ್ಚಿ ಸೀನಾ ಬರ್ತ್ ಡೇ ಪಾರ್ಟಿ ವಿಡಿಯೋ ವೈರಲ್ ಬೆಂಗಳೂರು: ಒಂದಲ್ಲ ಒಂದು ಕಾರಣಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸುದ್ದಿಯಾಗುತ್ತಿದೆ. ಜೈಲಿನಲ್ಲಿರುವ ಕುಖ್ಯಾತ ಕೈದಿಗಳ ಸುದ್ದಿ ಒಂದು ಕಡೆಯಾದರೆ, ಇಲ್ಲಿನ ಸಿಬ್ಬಂದಿ ವಿರುದ್ಧ ಕೇಳಿ ಬರುವ ಆರೋಪಗಳು ಮತ್ತೊಂದು ಕಡೆ. ಇದರ ಜೊತೆಯಲ್ಲಿ ಕೈದಿಗಳಿಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ಕೂಡ ಸಿಗುತ್ತದೆ ಎನ್ನುವ ಆರೋಪಗಳಿವೆ. ಇವುಗಳಿಗೆ ಪೂರಕವೆಂಬಂತೆ ಇದೀಗ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ರೌಡಿ ಗುಬ್ಬಚ್ಚಿ ಸೀನ ಕೇಕ್ ಕಟ್ ಮಾಡಿ ಹುಟ್ಟುಹಬ್ಬದ ಪಾರ್ಟಿ ಮಾಡಿರುವ ಘಟನೆ ನಡೆದಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕುಖ್ಯಾತ ರೌಡಿ ಶೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬದ ಪಾರ್ಟಿ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸೇಬಿನ ಹಾರ ಹಾಕಿಕೊಂಡು ಜೈಲಿನ ಬ್ಯಾರಕ್‌ನಲ್ಲಿ ಗುಬ್ಬಚ್ಚಿ ಸೀನಾ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ. ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ನಟೋರಿಯಸ್ ರೌಡಿ ಗುಬ್ಬಚ್ಚಿ ಸೀನ ಮೊಬೈಲ್‌ನಲ್ಲಿ ಹುಟ್ಟುಹಬ್ಬದ ಸಂಭ್ರಮದ ವಿಡಿಯೋ, ಪೋಟೋ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಜೈಲು ಅಧಿಕಾರಿಗಳು, ಸಿಬ್ಬಂದಿಯಿಂದ ಕೈದಿಗಳಿಗೆ ರಾಜಾತಿಥ್ಯ ಸಿಗುತ್ತಿದೆ ಎಂಬುದನ್ನು ವೀಡಿಯೋ ಬಹಿರಂಗಪಡಿಸಿದೆ. #GubbacchiSeena #birthday #party #video #goes #viral #malgudiexpress #malgudinews #news #TopNews
Malgudi Express
601 ವೀಕ್ಷಿಸಿದ್ದಾರೆ
1 ದಿನಗಳ ಹಿಂದೆ
#ಬಸವ ಮೆಟ್ರೋ ಹೆಸರಿಗೆ ಶಿಫಾರಸು ನಮ್ಮ ಮೆಟ್ರೋಗೆ ಬಸವ ಮೆಟ್ರೋ ಎಂದು ನಾಮಕರಣಕ್ಕೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ: ಸಿದ್ದರಾಮಯ್ಯ ಬೆಂಗಳೂರು: ನಮ್ಮ ಮೆಟ್ರೋಗೆ "ಬಸವ ಮೆಟ್ರೋ" ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ "ಬಸವ ಮೆಟ್ರೋ" ಎಂದು ಘೋಷಿಸಿ ಬಿಡುತ್ತಿದ್ದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಶ್ವಗುರು ಬಸವಣ್ಣ ಅವರನ್ನು "ಕರ್ನಾಟಕ ಸಾಂಸ್ಕೃತಿಕ ನಾಯಕ" ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ 'ಬಸವ ಸಂಸ್ಕೃತಿ ಅಭಿಯಾನ-2025' ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಅನೇಕ ಜಾತಿ, ಅನೇಕ‌ ಧರ್ಮಗಳಿವೆ. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು ನಾವು. ಶೂದ್ರರು ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು ಎಂದರು. ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ‌ ನಂಬಿಕೆ - ಬದ್ಧತೆ ಇಟ್ಟುಕೊಂಡಿದ್ದೇನೆ. ಅಂದಿಗಲ್ಲ - ಇಂದಿಗಲ್ಲ - ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ. ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ, ಹತ್ತು ಹಲವು ಭಾಗ್ಯಗಳ, ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ. ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಇಡೀ ಸರ್ಕಾರ ಬಸವಣ್ಣನವರಿಗೆ ಗೌರವ ಸೂಚಿಸಿದೆ ಎಂದರು. ನಾನು ಕಾನೂನು ವಿದ್ಯಾರ್ಥಿ ಆದ ಗಳಿಗೆಯಿಂದ ಬಸವಣ್ಣನವರ ಅನುಯಾಯಿ. ಅಂಬೇಡ್ಕರ್ ಅವರೂ ತಮ್ಮ ಸಂವಿಧಾನದಲ್ಲಿ ಬಸವಣ್ಣನವರ ಆಶಯಗಳನ್ನೇ ಹೇಳಿದ್ದಾರೆ. ಹೀಗಾಗಿ ಸಂವಿಧಾನ ಮತ್ತು ಶರಣ ಸಂಸ್ಕೃತಿ ಒಂದೇ ಆಗಿದೆ. ನಮ್ಮ ಸರ್ಕಾರ ಸಂವಿಧಾನದ ಪೀಠಿಕೆ ಓದಿಸುವುದನ್ನು ಅಭಿಯಾನದ ರೀತಿ ನಡೆಸುತ್ತಿದೆ ಎಂದರು. ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯವಾದರೆ ಬಸವಣ್ಣನವರೂ ಜಾತಿ ರಹಿತ, ವರ್ಗ ರಹಿತ ಬ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದರು. ಹೀಗಾಗಿ ಬಸವಣ್ಣನವರು ಯಾವತ್ತಿಗೂ ಪ್ರಸ್ತುತ. ಬಸವಣ್ಣನವರು ನುಡಿದಂತೆ ನಡೆದರು. ನಾವು ಬಸವ ಅನುಯಾಯಿಗಳೂ ನುಡಿದಂತೆ ನಡೆದಾಗ ಮಾತ್ರ ನಿಜವಾದ ಬಸವ ಅನುಯಾಯಿ ಆಗುತ್ತೇವೆ ಎಂದರು. ವಚನ ವಿಶ್ವವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು. #recommend #Center #name #nammametro #BasavaMetro #Siddaramaiah #Basaveshwara #malgudiexpress #malgudinews #news #TopNews
Malgudi Express
575 ವೀಕ್ಷಿಸಿದ್ದಾರೆ
1 ದಿನಗಳ ಹಿಂದೆ
#ಹೈಕಮಾಂಡ್ ಮುಂದೆ ಡಿಕೆಶಿ ಅಸಮಾಧಾನ ಹೈಕಮಾಂಡ್ ನಿಲುವಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಡಿ ಕೆ ಶಿವಕುಮಾರ್ ಬೆಂಗಳೂರು: ಅಧಿಕಾರ ಹಸ್ತಾಂತರ ಕುರಿತಂತೆ ರಾಜ್ಯ ಕಾಂಗ್ರೆಸ್ಸಿನಲ್ಲಿ ಪರ ವಿರೋಧದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಡಿಸಿಎಂ ಡಿ ಕೆ ಶಿವಕುಮಾರ್ ಈ ವಿಚಾರವಾಗಿ ಹೈಕಮಾಂಡ್ ನಿಲುವಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮತಗಳ್ಳತನ ಕುರಿತು ಕಾಂಗ್ರೆಸ್ ಪಕ್ಷ ರಾಷ್ಟ್ರೀಯ ಮಟ್ಟದಲ್ಲಿ ನಡೆಸುತ್ತಿರುವ ಆಂದೋಲನದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿರುವ ಡಿ ಕೆ ಶಿವಕುಮಾರ್ ನಾಯಕತ್ವ ಕುರಿತಾಗಿ ಹಲವು ಮಹತ್ವದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಸಮಯದಲ್ಲಿ ಅಧಿಕಾರ ಹಂಚಿಕೆ ಕುರಿತಾಗಿ ಒಪ್ಪಂದ ಏರ್ಪಟ್ಟಿದೆ. ಅದರ ಅನ್ವಯ ಮೊದಲ ಎರಡೂವರೆ ವರ್ಷಗಳ ಅವಧಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಲಿದ್ದಾರೆ. ಉಳಿದ ಎರಡೂವರೆ ವರ್ಷಕ್ಕೆ ಡಿ ಕೆ ಶಿವಕುಮಾರ್ ಅವರನ್ನು ಹೈಕಮಾಂಡ್ ಮುಖ್ಯಮಂತ್ರಿಯನ್ನಾಗಿ ನೇಮಿಸಲಿದೆ ಎಂಬ ವಿಷಯ ಚರ್ಚೆಯಲ್ಲಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೂರ್ಣ ಅವರು ತಾವೇ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತೇನೆ. ಈ ರೀತಿಯ ಯಾವುದೇ ಒಪ್ಪಂದ ಏರ್ಪಟ್ಟಿಲ್ಲ ಎಂದು ಸ್ಪಷ್ಟನೆ ನೀಡುತ್ತಿದ್ದಾರೆ. ಇದರ ನಡುವೆ ಅಧಿಕಾರ ಹಂಚಿಕೆ ಕುರಿತಾಗಿ ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಕಟ್ಟಪ್ಪಣೆ ವಿಧಿಸಿದೆ. ಆದರೂ ಡಿಸಿಎಂ ಅವರ ಪರವಾಗಿ ಕೆಲವು ಶಾಸಕರು ಮತ್ತು ಮುಖಂಡರು ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಕೆಲವು ಸಚಿವರು ಸಿದ್ದರಾಮಯ್ಯ ಅವರ ಪರ ಹೇಳಿಕೆ ನೀಡುತ್ತಿದ್ದು ಗೊಂದಲಕ್ಕೆ ಕಾರಣವಾಗಿದೆ. ಇದಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ಹೈಕಮಾಂಡ್ ನಾಯಕತ್ವ ಕುರಿತು ಮಾತನಾಡಿದವರಿಗೆ ನೋಟಿಸ್ ಜಾರಿಗೊಳಿಸಿದೆ. ಈ ವಿಚಾರವಾಗಿ ವೇಣುಗೋಪಾಲ್ ಮತ್ತು ಸುರ್ಜೆವಾಲಾ ಅವರೊಂದಿಗೆ ಮಾತುಕತೆ ನಡೆಸಿದ ಡಿ ಕೆ ಶಿವಕುಮಾರ್ ಅಧಿಕಾರ ಹಸ್ತಾಂತರ ಮತ್ತು ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಸ್ಪಷ್ಟ ನಿರ್ಧಾರವನ್ನು ಪ್ರಕಟಿಸಬೇಕು. ಈ ಬಗ್ಗೆ ಮುಖಂಡರು ಹೈಕಮಾಂಡ್ ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳುವ ಮೂಲಕ ಗೊಂದಲ ಮೂಡಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿರುವುದಾಗಿ ಗೊತ್ತಾಗಿದೆ. ಪಕ್ಷದ ಸಂಘಟನಾ ಕಾರ್ಯದರ್ಶಿಗಳಾಗಿರುವ ವೇಣುಗೋಪಾಲ್ ಅವರಾಗಲಿ ಅಥವಾ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ಸುರ್ಜೆವಾಲ ಅವರಾಗಲಿ ಸ್ಪಷ್ಟವಾಗಿ ಮಾತನಾಡಿ ನಾಯಕತ್ವ ಬದಲಾವಣೆ ಇದೆ ಅಥವಾ ಇಲ್ಲಾ ಎನ್ನುವುದನ್ನು ತಿಳಿಸಬೇಕು. ಅದನ್ನು ಬಿಟ್ಟು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳುವ ಮೂಲಕ ಗೊಂದಲಕ್ಕೆ ಕಾರಣವಾಗುತ್ತಿದೆ. ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಮಾತನಾಡುವ ಬದಲಿಗೆ ಸ್ಪಷ್ಟವಾಗಿ ನಿರ್ಧಾರ ಪ್ರಕಟಿಸುವ ಮೂಲಕ ಗೊಂದಲಗಳಿಗೆ ತೆರೆ ಎಳೆಯಬೇಕು ಎಂದು ಮನವಿ ಮಾಡಿರುವುದಾಗಿ ತಿಳಿದು ಬಂದಿದೆ. ಇನ್ನು ನಾಯಕತ್ವ ವಿಚಾರವಾಗಿ ಮಾತನಾಡಿದರೆ ಶಿಸ್ತುಕ್ರಮ ಜರುಗಿಸುವುದಾಗಿ ಹೈಕಮಾಂಡ್ ಹೇಳಿದೆ. ತಮ್ಮ ಪರವಾಗಿ ಮಾತನಾಡುವ ಶಾಸಕರು ಮತ್ತು ಮುಖಂಡರಿಗೆ ಶಿಸ್ತು ಸಮಿತಿ ನೋಟಿಸ್ ನೀಡುತ್ತಿದೆ. ಆದರೆ ಮುಖ್ಯಮಂತ್ರಿ ಪರವಾಗಿ ಮಾತನಾಡುವ ಯಾವುದೇ ನಾಯಕರಿಗೆ ನೋಟಿಸ್ ನೀಡುತ್ತಿಲ್ಲ. ಇದು ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಉಪಮುಖ್ಯಮಂತ್ರಿ ಪರವಾಗಿ ಮಾತನಾಡಿದರೆ ಅಶಿಸ್ತು ಮುಖ್ಯಮಂತ್ರಿ ಪರವಾಗಿ ಮಾತನಾಡಿದರೆ ಶಿಸ್ತಿನ ಉಲ್ಲಂಘನೆ ಆಗುವುದಿಲ್ಲವೇ ಎಂದು ಪ್ರಶ್ನಿಸುತ್ತಿದ್ದಾರೆ. ಇದಕ್ಕೆ ಹೈಕಮಾಂಡ್ ಉತ್ತರ ನೀಡಬೇಕು ಎಂದು ಸುರ್ಜೇವಾಲಾ ಅವರಲ್ಲಿ ಕೇಳಿರುವುದಾಗಿ ಡಿಸಿಎಂ ಆಪ್ತ ಮೂಲಗಳು ತಿಳಿಸಿವೆ. ಶಿವಕುಮಾರ್ ಅವರ ಎಲ್ಲ ಮಾತುಗಳನ್ನು ಸಮಾಧಾನ ಚಿತ್ತದಿಂದ ಆಲಿಸಿದ ಇಬ್ಬರೂ ನಾಯಕರು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿದ್ದು, ಅವರು ಹಿಂತಿರುಗಿದ ಬಳಿಕ ಈ ಬಗ್ಗೆ ಚರ್ಚೆ ನಡೆಸಿ ಸ್ಪಷ್ಟ ಉತ್ತರ ನೀಡುವುದಾಗಿ ಸಮಾಧಾನಪಡಿಸಿದರು ಎಂದು ಗೊತ್ತಾಗಿದೆ. #DKShivakumar #expressed #deep #dissatisfaction #highcommand #stance #malgudiexpress #malgudinews #news #TopNews
Malgudi Express
601 ವೀಕ್ಷಿಸಿದ್ದಾರೆ
1 ದಿನಗಳ ಹಿಂದೆ
#📜ಪ್ರಚಲಿತ ವಿದ್ಯಮಾನ📜 ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ! ಬೆಂಗಳೂರು: ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ನಡೆದಿದೆ. ಈ ಘಟನೆ ಪ್ರಾಣಿ ಪ್ರಿಯರ ಆತಂಕಕ್ಕೆ ಕಾರಣವಾಗಿದೆ. ಘಟನೆ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಸಚಿವ ಈಶ್ವರ್ ಖಂಡ್ರೆ, ಹತ್ಯೆ ಪ್ರಕರಣದ ಬಗ್ಗೆ ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಲಿಖಿತ ಆದೇಶ ನೀಡಿರುವ ಅವರು, ಮಲೆ ಮಹದೇಶ್ವರ ಬೆಟ್ಟದ ಕಾನನದ ಹನೂರು ವಲಯದ, ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ ಗ್ರಾಮದ ಬಳಿ ನಿನ್ನೆ ಸತ್ತ ಹುಲಿಯ ಅರ್ಧ ಕಳೇಬರ ಪತ್ತೆಯಾಗಿರುವ ಬಗ್ಗೆ ಪಿಸಿಸಿಎಫ್ ಸ್ಮಿತಾ ಬಿಜ್ಜೂರು ಅವರ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಆದೇಶಿಸುವಂತೆ ಸೂಚಿಸಿದ್ದಾರೆ. ಈ ಕಾನನದಲ್ಲಿ ಕಳೆದ 3 ವರ್ಷದಲ್ಲಿ ದಾಖಲಾಗಿರುವ ಕಳ್ಳಬೇಟೆ ಪ್ರಕರಣಗಳ ಬಗ್ಗೆಯೂ ಗಮನ ಹರಿಸಿ, ಹಿಂದಿನ ತನಿಖಾ ವರದಿಗಳನ್ನೂ ಪರಾಮರ್ಶಿಸಿ ಮುಂದೆ ಈ ಭಾಗದಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮವಹಿಸಲು, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಹಾಗೂ ಕಳ್ಳಬೇಟೆಗಾರರ ವಿರುದ್ಧ ಸೂಕ್ತ ಕ್ರಮದ ಶಿಫಾರಸಿನೊಂದಿಗೆ 8 ದಿನಗಳಲ್ಲಿ ವರದಿ ಸಲ್ಲಿಸಲು ಮತ್ತು ಹುಲಿ ಹಂತಕರನ್ನು ಪತ್ತೆಮಾಡಿ ಅವರಿಗೆ ಕಾನೂನು ರೀತ್ಯ ದಂಡನೆ ಕೊಡಿಸಲು ತುರ್ತು ಕ್ರಮ ವಹಿಸಲು ಆದೇಶ ಹೊರಡಿಸುವಂತೆ ಸೂಚನೆ ನೀಡಿದ್ದಾರೆ. ಘಟನೆ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ಧಾಮದಲ್ಲಿ ನಿರಂತರವಾಗಿ ವನ್ಯಜೀವಿಗಳ ಕಳ್ಳಬೇಟೆ ನಡೆಯುತ್ತಿರುವುದನ್ನು ದೃಢಪಡಿಸುತ್ತಿದ್ದು ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. #Another #tiger #killed #Hanur #malgudiexpress #malgudinews #news #TopNews
Malgudi Express
626 ವೀಕ್ಷಿಸಿದ್ದಾರೆ
1 ದಿನಗಳ ಹಿಂದೆ
#ಹಿರಿಯ ಕಥೆಗಾರ ಮೊಗಳ್ಳಿ ಗಣೇಶ್ ನಿಧನ #📜ಪ್ರಚಲಿತ ವಿದ್ಯಮಾನ📜 ನಿಗದಿತ ಅವಧಿಗಿಂತ ಮೊದಲು ಸಮೀಕ್ಷೆ ಪೂರ್ಣಗೊಳಿಸಿದ ಪಿ.ಎಫ್.ಗುಡೇನಕಟ್ಟಿ ಅವರಿಗೆ ಸನ್ಮಾನ ಧಾರವಾಡ: ನಿಗದಿತ ಅವಧಿಗಿಂತ ಮುಂಚಿತವಾಗಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಕಾರ್ಯವನ್ನು ಗಣತಿದಾರರಾದ ಪಿ.ಎಫ್. ಗುಡೇನಕಟ್ಟಿ ಪೂರೈಸಿದ್ದಾರೆ. ಅವರಿಗೆ ವಾರ್ಡ್ ನಂ. 7 ರ 129 ಮನೆಗಳ ಗುರಿ ನೀಡಲಾಗಿತ್ತು. ಅದರಂತೆ ಮಹಾವೀರ ನಗರ, ರಾಮರಹೀಮ್ ಕಾಲನಿಯ ಕರವೀರ ಕಾಲನಿ, ಆಜಾದ ಕಾಲನಿ, ಸಾಯಿ ಲೇಔಟ್, ಚರಂತಿಮಠ ಗಾರ್ಡನ್ ಹತ್ತಿರದ ಬ್ಲಾಕ್ನಾಲ್ಲಿ ಒಟ್ಟು 134 ಮನೆಗಳ ಗಣತಿಯನ್ನು ಪೂರ್ಣಗೊಳಿಸಿ, ಶೇ.100 ರಷ್ಟು ಸಾಧನೆ ಮಾಡಿದ್ದಾರೆ. ಅವರ ಈ ಸಾಧನೆಗೆ ಮಹಾನಗರಪಾಲಿಕೆ ಧಾರವಾಡದ ಅಮೃತಮಹೋತ್ಸವ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಈ ವೇಳೆ ತಹಶೀಲ್ದಾರ್ ಡಾ.ಡಿ.ಎಚ್. ಹೂಗಾರ ಹಾಗೂ ಮಹಾನಗರ ಪಾಲಿಕೆ ವಲಯ ಸಹಾಯಕ ಆಯುಕ್ತ ಶಂಕರ ಪಾಟೀಲ, ಬಿಇಓ ಅಶೋಕ ಸಿಂದಗಿ, ಸಮನ್ವಯಾಧಿಕಾರಿ ಮಂಜು ಅಡವೇರ್ ಹಾಗೂ ಮೇಲ್ವಿಚಾರಕ ಜಿ.ಬಿ. ಶೆಟ್ಟರ್, ಸುಮಿತಾ ಹಿರೇಮಠ, ಎಸ್.ಬಿ.ಅರಮನಿ, ಎಂ.ಆರ್. ಕಬ್ಬೇರ, ಮಹೇಶ ಬಾಳಗಿ, ಆಸಿಫ್ ಸವಣೂರ ಹಾಗೂ ವಿ.ಎಂ. ಪಾಟೀಲ, ಇರ್ಫಾನ್ ಕವಲಗೇರಿ ಹಾಗೂ ಇತರರು ಹಾಜರಿದ್ದರು. #PFGudenakatti #Honored #completing #survey #before #scheduled #time #malgudiexpress #malgudinews #news #TopNews
See other profiles for amazing content