Follow
Malgudi Express
@news007
25,882
Posts
13,072
Followers
Malgudi Express
693 views
16 hours ago
#📜ಪ್ರಚಲಿತ ವಿದ್ಯಮಾನ📜 जिस प्रकार से डॉलर मजबूत हो रहा है, रुपया कमजोर होता जा रहा है, ऐसे में विश्व व्यापार में भारत टिक नहीं पाएगा: नरेंद्र मोदी #malgudiexpress #malgudinews #news #TopNews | Subscribe | Comment | Like | Share |
Malgudi Express
578 views
16 hours ago
#📜ಪ್ರಚಲಿತ ವಿದ್ಯಮಾನ📜 ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ: ಸಿದ್ದರಾಮಯ್ಯ ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸ್ ಜಾರಿ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬುಧವಾರ ಸುರಿದ ಭಾರಿ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು, ಏಳು ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಇಂದು ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರುಗಳ ಸಭೆಯಲ್ಲಿ ಅವರು ಮಾತನಾಡಿದರು‌. ಗೋಡೆಗೆ ಹಾನಿಯಾಗುವಂತೆ ಮಣ್ಣು ಸುರಿದದ್ದನ್ನು ಆಸ್ಪತ್ರೆ ಮುಖ್ಯಸ್ಥರು ಏಕೆ ಗಮನಿಸಿಲ್ಲ. ಇದು ಮೇಲ್ನೋಟಕ್ಕೆ ಕರ್ತವ್ಯಲೋಪದಂತೆ ಕಾಣುತ್ತಿದ್ದು, ಈ ಸಂಬಂಧ ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಬೇಕು. ಬೆಂಗಳೂರಿನಲ್ಲಿ ಗುಂಡಿಗಳನ್ನು ಮುಚ್ಚಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ನಿನ್ನೆ ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಸಾಕಷ್ಟು ಹಾನಿಯಾಗಿದ್ದು, 250ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಏಳು ಜನ ಸಾವನ್ನಪ್ಪಿದ್ದಾರೆ. ಈಗಾಗಲೇ ಸತ್ತವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದೇನೆ ಎಂದರು. ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಬೆಂಗಳೂರಿನ ಐದೂ ವಲಯಗಳ ಆಯುಕ್ತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಒಣಗಿರುವ ಅಪಾಯಕಾರಿ ಮರಗಳ ರೆಂಬೆಗಳನ್ನು ಈಗಲೇ ಕತ್ತರಿಸಬೇಕು ಎದು ಸೂಚನೆ ನೀಡಿದರು. ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು ರಾಜಕಾಲುವೆಗಳಲ್ಲಿ ಹೂಳು ತೆಗೆದು, ಪ್ರವಾಹ ಉಂಟಾಗದಂತೆ ಕ್ರಮ ತೆಗೆದುಕೊಳ್ಳಬೇಕು. ಮಳೆಯಿಂದ ರಸ್ತೆಯಲ್ಲಿ ಬಿದ್ದಿರುವ ಕಸ, ರೆಂಬೆಗಳನ್ನು ಕೂಡಲೇ ತೆರವು ಮಾಡಬೇಕು. ಅಂಡರ್ ಪಾಸ್ ಗಳಲ್ಲಿ ಮಳೆ ನೀರು ನಿಲ್ಲದಂತೆ ಹಾಗೂ ನೀರು ನಿಂತ ಅಂಡರ್ ಪಾಸ್‌ಗಳನ್ನು ಜನ ಬಳಸದಂತೆ ಕೂಡಲೇ ಬ್ಯಾರಿಕೇಡ್ ಹಾಕಬೇಕು ಎಂದರು. #Suspend #executive #engineer #Siddaramaiah #malgudiexpress #malgudinews #news #TopNews
Malgudi Express
6.4K views
16 hours ago
#📜ಪ್ರಚಲಿತ ವಿದ್ಯಮಾನ📜 क्या कारण है हिंदुस्तान का रुपया गिरता जा रहा है? यह जवाब देना पड़ेगा आपको देश आपसे जवाब माँग रहा है: नरेंद्र मोदी #malgudiexpress #malgudinews #news #TopNews | Subscribe | Comment | Like | Share |
Malgudi Express
540 views
16 hours ago
#📜ಪ್ರಚಲಿತ ವಿದ್ಯಮಾನ📜 ಅತಿಥಿ ಉಪನ್ಯಾಸಕರ ಹಿತಾಸಕ್ತಿ ಕಾಪಾಡುವ “ಶೈಕ್ಷಣಿಕ ಸಂಯೋಜಕ” ವಿಶೇಷ ಯೋಜನೆ: ಎಂ ಸಿ ಸುಧಾಕರ್ ಬೆಂಗಳೂರು: ರಾಜ್ಯ ಸರ್ಕಾರ ಉನ್ನತ ನ್ಯಾಯಾಲಯದ ನಿರ್ದೇಶನದ ಅನ್ವಯ, ಅತಿಥಿ ಉಪನ್ಯಾಸಕರ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ “ಶೈಕ್ಷಣಿಕ ಸಂಯೋಜಕ” ಎಂಬ ವಿಶೇಷ ಯೋಜನೆಯನ್ನು 2026-27ನೇ ಶೈಕ್ಷಣಿಕ ಸಾಲಿನಿಂದ ಜಾರಿಗೊಳಿಸಲು ತೀರ್ಮಾನಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಹೇಳಿದ್ದಾರೆ. ಈ ಯೋಜನೆಯಡಿ, ಕನಿಷ್ಠ 5 ವರ್ಷ ಸೇವಾ ಅನುಭವ ಹೊಂದಿರುವ ಹಾಗೂ UGC ಅರ್ಹತೆ ಹೊಂದಿರದ ಅತಿಥಿ ಉಪನ್ಯಾಸಕರನ್ನು ತಾತ್ಕಾಲಿಕವಾಗಿ ಶೈಕ್ಷಣಿಕ ಸಂಯೋಜಕರಾಗಿ ನೇಮಿಸಲಾಗುವುದು. ಇದರಿಂದ ಸುಮಾರು 3853 ಉಪನ್ಯಾಸಕರಿಗೆ ಪ್ರಯೋಜನವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಶೈಕ್ಷಣಿಕ ಸಂಯೋಜಕರು ಕಾಲೇಜುಗಳಲ್ಲಿ ಪ್ರಯೋಗಾಲಯ, ಗ್ರಂಥಾಲಯ, ಐಟಿ, ಪರೀಕ್ಷಾ ಕಾರ್ಯಗಳು ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ ಎಂದಿದ್ದಾರೆ. ಈ ಯೋಜನೆ ಅತಿಥಿ ಉಪನ್ಯಾಸಕರಿಗೆ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಒದಗಿಸುವುದರ ಜೊತೆಗೆ, ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಸಹಕಾರಿಯಾಗಲಿದೆ ಎಂದಿದ್ದಾರೆ. #Academic #Coordinator #SpecialScheme #Protect #Interest #GuestLecturers #MCSudhakar #malgudiexpress #malgudinews #news #TopNews
Malgudi Express
633 views
1 days ago
#📜ಪ್ರಚಲಿತ ವಿದ್ಯಮಾನ📜 ವಿಷ್ಣುವರ್ಧನ್ ಸ್ಮಾರಕ ಕುರಿತು ನಮ್ಮ ಕುಟುಂಬದಿಂದ ಯಾವುದೇ ಸ್ಪಷ್ಟನೆ ನಿರೀಕ್ಷೆ ಮಾಡಬೇಡಿ: ಅನಿರುದ್ಧ ಪುಣ್ಯಭೂಮಿಯ ಬಗ್ಗೆ ನನ್ನ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಕೇಳಿದ್ದಾರೆ. ಹಾಗಾಗಿ… ಪುಣ್ಯಭೂಮಿಯ ಬಗ್ಗೆ ಈಗಾಗಲೇ ನಾವು ಮಾನ್ಯ ಮಂತ್ರಿರವರನ್ನು ಕೇಳಿದ್ದೇವೆ… ಕೆಲವು ಅಧಿಕಾರಿಗಳನ್ನೂ ಸಂಪರ್ಕಿಸಿ ಕೇಳಿದ್ದೇವೆ. ಆದರೆ ಅದು ಈಗ ಅರಣ್ಯ ಇಲಾಖೆಗೆ ಸೇರಿದೆ ಎಂದು ತಿಳಿಸಿದ್ದಾರೆ. ಅದರಿಂದಾಗಿ ಸಾಕಷ್ಟು ಅಡಚಣೆಗಳಿವೆ. ಸ್ಮಾರಕ ಅಲ್ಲೇ ಆಗಬೇಕು ಅಂತ ನಾವು 6½ ವರ್ಷಗಳ ಕಾಲ ನಿರಂತರವಾಗಿ ಪ್ರಯತ್ನ ಪಟ್ಟಿದ್ದೇವೆ. “ಅಲ್ಲಿ ಸಾಧ್ಯವಿಲ್ಲ” ಅಂತ ಮಾನ್ಯ ಮುಖ್ಯಮಂತ್ರಿಗಳು ಹಲವಾರು ಬಾರಿ ಸೂಚಿಸಿದ್ದರೂ, ನಾವು ನಮ್ಮ ಪ್ರಯತ್ನವನ್ನು ಬಿಡಲಿಲ್ಲ. ಈಗಲೂ ಅದೇ ಪರಿಸ್ಥಿತಿ… ಆದರೂ ನಾವು ಅವರಿಗೆ ಕೇಳಿದ್ದೇವೆ. ಹಾಗೆಯೇ ಅಧಿಕಾರಿಗಳು ಹೇಳಿರುವುದೇನೆಂದರೆ — ಸರ್ಕಾರ ಈಗಾಗಲೇ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಿದೆ. ಇನ್ನು ಮುಂದೆ ನಾವು, ಅಂದರೆ ಕುಟುಂಬದವರು, ಅಭಿಮಾನ ಸ್ಟೂಡಿಯೋ ಬಗ್ಗೆ ಮತ್ತೆ ಕೇಳುತ್ತಾ ಹೋದರೆ ಅದು ಒಳ್ಳೆಯದಾಗಿ ಕಾಣುವುದಿಲ್ಲ ಎಂದು. ಹಾಗಾಗಿ, ಅಭಿಮಾನಿಗಳಾಗಿ ಇದರ ಸಂಪೂರ್ಣ ಜವಾಬ್ದಾರಿ ಈಗ ಕೇವಲ ತಮ್ಮದಾಗಿದೆ. ತಾವೆಲ್ಲರೂ ಕೂಡ ಪ್ರಯತ್ನ ಮಾಡಿ… ಅದು ಆದರೆ ನಾವೂ ಸಂತೋಷಪಡುತ್ತೇವೆ. ಜೊತೆಗೆ ಅಭಿಮಾನಿಗಳಿಂದ ಆಯಿತು ಅನ್ನೋ ಹೆಗ್ಗಳಿಕೆಗೂ ತಾವೆಲ್ಲರೂ ಪಾತ್ರರಾಗುತ್ತೀರಿ, ಮಾದರಿ ಆಗುತ್ತೀರಿ… ಈಗಾಗಲೇ ತಾವು ಅಪ್ಪ ಅವರ ಬಗ್ಗೆ ಇರುವ ತಮ್ಮ ಅಭಿಮಾನವನ್ನು ಬೇರೆ ಬೇರೆ ರೀತಿಯಲ್ಲಿ ತೋರಿಸಿ ಎಲ್ಲರಿಗೂ ಪ್ರೇರಣೆ ಆಗಿದ್ದೀರಿ, ದಾಖಲೆಗಳನ್ನೂ ಸೃಷ್ಟಿ ಮಾಡಿದ್ದೀರಿ… ಈ ಕೆಲಸವೂ ತಮ್ಮಿಂದ ಆಗಲಿ ಎಂದು ಆಶಿಸುತ್ತೇನೆ. ತಮಗೆ ಗೊತ್ತಿರಲಿ, ಅಭಿಮಾನ ಸ್ಟೂಡಿಯೋದಲ್ಲಿ ಇದ್ದ ಮಂಟಪವನ್ನು ಭಾರತಿ ಅಮ್ಮ ಸ್ವಂತ ಖರ್ಚಿನಲ್ಲೇ ಕಟ್ಟಿಸಿದ್ದರು. ನಾವು ಕೆಲ ಕಾರಣಗಳಿಂದ ಅಲ್ಲಿ ಹೋಗದೇ ಇದ್ದರೂ, ಅಭಿಮಾನಿಗಳಿಗೋಸ್ಕರ ಅದು ಹಾಗೆಯೇ ಇರಲಿ ಅಂದುಕೊಂಡಿದ್ವಿ. ಆದರೆ ಅದು ತೆರವುಗೊಂಡಿದ್ದು ಖಂಡನೀಯ. ಇನ್ನೂ ಮೈಸೂರಿನ ಸ್ಮಾರಕದ ವಿಷಯಕ್ಕೆ ಬಂದರೆ, ಅಲ್ಲೂ ನಮಗೆ ಸುಲಭವಾಗಿರಲಿಲ್ಲ. ತುಂಬಾ ಪರಿಶ್ರಮ ಪಟ್ಟಿದ್ದೇವೆ. “ಅಭಿಮಾನ ಸ್ಟೂಡಿಯೋದಲ್ಲೇ ಆಗಬೇಕು” ಅಂತ ಹಠ ಹಿಡಿದಿದ್ದರೆ ಅಥವಾ ನಾವು ಪ್ರಯತ್ನಿಸದೇ ಇದ್ದಿದ್ದರೆ, ಇವತ್ತಿಗೂ ಸ್ಮಾರಕವೇ ನಿರ್ಮಾಣವಾಗುತ್ತಿರಲಿಲ್ಲ. ಅಷ್ಟೇ ಯಾಕೆ, ಬನಶಂಕರಿಯಿಂದ ಕೆಂಗೇರಿವರೆಗೆ 14.3 ಕಿ.ಮೀ. ರಸ್ತೆಗೆ ನಾಮಕರಣ ಕೂಡ ಆಗುತ್ತಿರಲಿಲ್ಲ. ದಯವಿಟ್ಟು ಇದನ್ನು ಅರ್ಥಮಾಡಿಕೊಳ್ಳಿ. ನಮ್ಮ ಪ್ರಾಮಾಣಿಕತೆ, ಪರಿಶ್ರಮದ ಬಗ್ಗೆ ಏನೂ ಗೊತ್ತಿಲ್ಲದೇ, ಕೆಲವರು ಮಾತಾಡುವುದು, ಆರೋಪಗಳನ್ನು ಮಾಡುವುದು, ಏನೂ ಮಾಡದೇ ಹೇಳಿಕೆಗಳನ್ನು ಕೊಟ್ಟು ಚಪ್ಪಾಳೆ ಗಿಟ್ಟಿಸಿಕೊಂಡು ಪ್ರಚಾರ ಪಡೆಯುವ ವ್ಯಕ್ತಿಗಳ ಬಗ್ಗೆ ತಮಲ್ಲಿ ಕೆಲವರಿಗೆ ವಿಶ್ವಾಸವಿರುವುದು ನಮಗೆ ನಿಜಕ್ಕೂ ತುಂಬಾ ಬೇಸರ ತಂದಿದೆ, ಸಾಕಾಗಿದೆ. ಕೆಲವರು ಅಭಿಮಾನಿಗಳ ವೇಷ ತೊಟ್ಟು ತಮ್ಮ ತಮ್ಮ ಸ್ವಾರ್ಥಕ್ಕಾಗಿ ನಮ್ಮ ಮಧ್ಯೆ ಬಿರುಕು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ದಯವಿಟ್ಟು ಎಚ್ಚರಿಕೆಯಿಂದಿರಿ. ಹಾಗೆಯೇ ಮೈಸೂರಲ್ಲೇ ಆಗಬೇಕು ಅನ್ನೋದು ಅಪ್ಪ ಅವರ ಆಸೆಯಾಗಿರಬಹುದು. ಅದಕ್ಕಾಗಿಯೇ ಅವರು ತಮ್ಮ ಕೊನೆಯ ಉಸಿರನ್ನು ಅಲ್ಲೇ ತೆಗೆದುಕೊಂಡರು. ಅಲ್ಲಿ ಅವರ ಅಸ್ತಿ ಇರಿಸಲಾಗಿದೆ; ಅದರ ಮೇಲೆಯೇ ಅವರ ಪ್ರತಿಮೆ ನಿಂತಿದೆ. ಅತ್ಯಂತ ಸೂಕ್ತವಾದ, ಬೃಹತ್ ಸ್ಮಾರಕ ಅದಾಗಿದೆ. ಅಪಾರ ಶ್ರದ್ಧೆಯಿಂದ ಮಾಡಿದ್ದೇವೆ… ಕ್ಷಮಿಸಿ, ಅಪ್ಪ ಅವರೇ ನಮ್ಮಿಂದ ಮಾಡಿಸಿದ್ದಾರೆ. ಅವರಿಗೆ ಗೌರವ ಕೊಡಿ. ದಯವಿಟ್ಟು ಅಲ್ಲಿ ಭೇಟಿ ನೀಡಿ… ಅಪ್ಪ ಅವರ ಆಶೀರ್ವಾದ ಪಡೆಯಿರಿ. ಇಷ್ಟಕ್ಕೂ ಕೆಲವರು ಇನ್ನೂ ಕೂಡ ಏನೂ ಮಾಡದೇ, ಅಥವಾ ಮಾಡುತ್ತಿದ್ದೇವೆ, ಮಾಡ್ತೀವಿ ಎಂದು ಹೇಳಿ, ಕುತಂತ್ರ ಮಾಡೋ ಅಥವಾ ಮಾಡಿದ ವ್ಯಕ್ತಿಗಳು ಮತ್ತೆ ನಮ್ಮ ಮೇಲೆ ಆರೋಪ ಮಾಡಿದರೆ, ಅವರ ಮೇಲೆ ನಂಬಿಕೆ ಇಡಬೇಕೋ, ಬಿಡಬೇಕೋ ತಮಗೇ ಬಿಟ್ಟದ್ದು. ಆದರೆ ಇನ್ನೂ ಮುಂದೆ ನಮ್ಮ ಕುಟುಂಬದಿಂದ ಇದರ ಬಗ್ಗೆ ಯಾವುದೇ ಸ್ಪಷ್ಟನೆ ನಿರೀಕ್ಷೆ ಮಾಡಬೇಡಿ. ಅಪ್ಪ ಅವರ ಮೇಲೆ ನಮಗಿರುವ ಪ್ರೀತಿ, ಅಭಿಮಾನ ಯಾರಿಗೂ ಸಾಬೀತುಪಡಿಸೋ ಅವಶ್ಯಕತೆ ನಮಗಿಲ್ಲ… ಅಪ್ಪ ಅವರ ಆಶೀರ್ವಾದ ಅವರ ನಿಜವಾದ ಅಭಿಮಾನಿಗಳ ಮೇಲೆ ಸದಾ ಇರಲಿ. - ಅನಿರುದ್ಧ, ನಟ #Dontexpect #clarification #family #regarding #Vishnuvardhan #memorial #Aniruddha #malgudiexpress #malgudinews #news #TopNews
Malgudi Express
705 views
2 days ago
#📜ಪ್ರಚಲಿತ ವಿದ್ಯಮಾನ📜 ಕುಡಿಯುವ ನೀರಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿಲ್ಲ: ಆರ್ ಅಶೋಕ್ #rashok #drinkingwater #malgudiexpress #malgudinews #news #TopNews | Subscribe | Comment | Like | Share |
Malgudi Express
600 views
3 days ago
#📜ಪ್ರಚಲಿತ ವಿದ್ಯಮಾನ📜 ತಳವಾರ ಸಮುದಾಯದ ಜನ ತಪ್ಪಾಗಿ ರಾಜಕೀಯ ಪ್ರೇರಣೆಗೆ ಬಲಿಯಾಗದೆ ಸತ್ಯ ಅರಿಯಬೇಕು: ಪ್ರಿಯಾಂಕ್ ಖರ್ಗೆ ತಳವಾರ ಸಮುದಾಯಕ್ಕೆ ಉದ್ದೇಶಪೂರ್ವಕವಾಗಿ ಎಸ್‌ಟಿ ಪ್ರಮಾಣ ಪತ್ರ ನೀಡುತ್ತಿಲ್ಲ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಇದು ರಾಜಕೀಯ ಪ್ರೇರಿತ ಆರೋಪವಾಗಿದ್ದು, ತಳವಾರ ಸಮುದಾಯ ಸೇರಿದಂತೆ ಎಲ್ಲ ಅರ್ಹ ಸಮುದಾಯಗಳಿಗೂ ಪರಿಶಿಷ್ಟ ಪಂಗಡ ಪ್ರಮಾಣಪತ್ರ ದೊರಕಿಸಲು ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ನಮ್ಮ ಸರ್ಕಾರ ನಡೆಸಿದ ಪ್ರಾಮಾಣಿಕ ಪ್ರಯತ್ನಗಳ ವಿವರ ನಿಮ್ಮ ಮುಂದಿದೆ. 1. ತಳವಾರ ಸಮುದಾಯದವರಿಗೆ ST ಜಾತಿ ಪ್ರಮಾಣ ಪತ್ರ ವಿತರಣೆಯಲ್ಲಿ ಇರುವ ಸಮಸ್ಯೆ ಕುರಿತು ಮಾನ್ಯ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಇತರೆ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಬೆಳಗಾವಿ ಅಧಿವೇಶನದ ಸಮಯದಲ್ಲಿ ಒಂದು ಸಭೆ ನಡೆದಿದೆ. ಇದಲ್ಲದೆ ಇದೇ ವಿಷಯವಾಗಿ ಬೆಂಗಳೂರಿನಲ್ಲಿ 03 ಬಾರಿ ಸಭೆ ಸೇರಲಾಗಿದೆ. ಒಟ್ಟಾರೆ 04 ಸಭೆಗಳನ್ನು ನಡೆಸಿ, ಸಂಬಂಧಿಸಿದ ಇಲಾಖೆಯಿಂದ ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ST ಪ್ರಮಾಣ ಪತ್ರ ವಿತರಿಸಲು ಸ್ಪಷ್ಟ ಸೂಚನೆ ನೀಡಲಾಗಿರುತ್ತದೆ. 2. ಮುಖ್ಯಮಂತ್ರಿಗಳ ಸಭೆ ನಂತರವೂ ಹೋರಾಟ ಮಾಡುವ ಮುಂಚೂಣಿಯಲ್ಲಿರುವ ನಾಯಕರಿಗೆ ಹಾಗೂ ಸಮಾಜದ ಮುಖಂಡರಿಗೆ ಇಲಾಖೆಯ ಕಾರ್ಯದರ್ಶಿಗಳಿಗೆ 2-3 ಬಾರಿ ಭೇಟಿ ಮಾಡಿಸಿ, ಸಮಾಲೋಚಿಸಿ, ಸಲಹೆ ನೀಡಿದ ನಂತರವೇ ಸರ್ಕಾರಿ ಆದೇಶವನ್ನು ಹೊರಡಿಸಲಾಯಿತು. 3. ದಿನಾಂಕ: 01.01.2023 ರಿಂದ ಇಲ್ಲಿಯವರೆಗೆ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 14,282 ಜನರಿಗೆ Naikda (including Parivara and Talawara) ST ಜಾತಿ ಪ್ರಮಾಣಪತ್ರ ನೀಡಲಾಗಿರುತ್ತದೆ. 4. ದಿನಾಂಕ: 01.01.2023 ರಿಂದ ಇಲ್ಲಿಯವರೆಗೆ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 1,624 ಜನರಿಗೆ Talwar_Boya CAT-1 ನಲ್ಲಿ ಜಾತಿ ಪ್ರಮಾಣ ಪತ್ರ ನೀಡಲಾಗಿರುತ್ತದೆ. 5. ದಿನಾಂಕ: 01.03.2020 ರಿಂದ ಇಲ್ಲಿಯವರೆಗೆ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 29,306 ಜನರಿಗೆ Naikda (including Parivara and Talawara) ST ಜಾತಿ ಪ್ರಮಾಣ ಪತ್ರ ನೀಡಲಾಗಿರುತ್ತದೆ. 6. ದಿನಾಂಕ: 01.03.2020 ರಿಂದ ಇಲ್ಲಿಯವರೆಗೆ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 12,126 ಜನರಿಗೆ Talwar_Boya CAT-1 ನಲ್ಲಿ ಜಾತಿ ಪ್ರಮಾಣ ಪತ್ರ ನೀಡಲಾಗಿರುತ್ತದೆ. 7. ಮಾನ್ಯ ಉಚ್ಚ ನ್ಯಾಯಾಲಯ, ಬೆಂಗಳೂರಿನಲ್ಲಿ ರಿಟ್ ಪಿಟಿಷನ್ ನಂ. 13777/2023 ರಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ರದ್ದು ಪಡಿಸುವ ಕುರಿತು ಪ್ರಕರಣ ದಾಖಲಾಗಿರುತ್ತದೆ. ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಲಬುರಗಿ ಜಿಲ್ಲೆಯಲ್ಲಿ 17 ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಸಕ್ಷಮ ಪ್ರಾಧಿಕಾರವಾಗಿರುವ ಸಹಾಯಕ ಆಯುಕ್ತರು ಉಪವಿಭಾಗ ಕಲಬುರಗಿ ಮತ್ತು ಸೇಡಂ ಅವರಿಂದ ರದ್ದುಗೊಳಿಸಲಾಗಿರುತ್ತದೆ. 8. ಕಲ್ಯಾಣ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕರ ಸಂಘ (ರಿ) ಇವರು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಕೆಲವರು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯಲು ಪುಯತ್ನಿಸುತ್ತಿದ್ದು, ಇದರಿಂದ ನಿಜವಾದ ಪರಿಶಿಷ್ಟ ಪಂಗಡ ಸಮುದಾಯದ ಜನರಿಗೆ ಅನ್ಯಾಯವಾಗುತ್ತಿದೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿರುತ್ತಾರೆ. 9. ಜಾತಿ ಪ್ರಮಾಣ ಪತ್ರ ಕೋರಿ ಸಲ್ಲಿಕೆಯಾಗುವ ಪ್ರತಿಯೊಂದು ಅರ್ಜಿಯನ್ನು ತಹಸೀಲ್ದಾರರ ಹಂತದಲ್ಲಿ ನಿಯಮಾವಳಿಗಳ ಪ್ರಕಾರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಈಗಾಗಲೇ ಸ್ಪಷ್ಟವಾದ ಸೂಚನೆ ನೀಡಲಾಗಿರುತ್ತದೆ. 10. ಸರ್ಕಾರದಿಂದ ಅರ್ಹರಿಗೆ ST ಜಾತಿ ಪ್ರಮಾಣ ಪತ್ರ ನೀಡಲು ನಮ್ಮ ಸರ್ಕಾರ ಮತ್ತು ನಾನು ಪ್ರಾಮಾಣಿಕ ಪ್ರಯತ್ನ ಮಾಡಿದಾಗಲೂ ಸಹ ಕೆಲವು ಸಂಘ-ಸಂಸ್ಥೆಗಳು, ಹೋರಾಟಗಾರರು ವಾಸ್ತವಿಕ ಸತ್ಯ ಅರಿಯದೆ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿರುವುದು ನೋಡಿದರೆ ಇದು ರಾಜಕೀಯ ಪ್ರೇರಿತ ಎಂಬುದು ಸ್ಪಷ್ಟವಾಗಿ ಕಂಡುಬರುತ್ತಿದೆ. ತಳವಾರ ಸಮುದಾಯದ ಜನರು ತಪ್ಪಾಗಿ ರಾಜಕೀಯ ಪ್ರೇರಣೆಗೆ ಬಲಿಯಾಗದೆ ಸತ್ಯವನ್ನು ಅರಿಯಬೇಕು. ಗ್ಯಾರಂಟಿ ಸರ್ಕಾರವು ಸದಾ ನಿಮ್ಮೊಂದಿಗೆ ಇರಲಿದೆ ಎಂದು ಈ ಮೂಲಕ ತಿಳಿಸಲು ಇಚ್ಛಿಸುತ್ತೇನೆ. - ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ #People #Talawara #community #know #truth #prey #political #persuasion #PriyankKharge #malgudiexpress #malgudinews #news #TopNews
Malgudi Express
536 views
3 days ago
#📜ಪ್ರಚಲಿತ ವಿದ್ಯಮಾನ📜 ಕುವೆಂಪು ವಿವಿಯಲ್ಲಿ ಪಿಎಚ್‌ಡಿ ಪೂರೈಸಿದ ಐಜಿಪಿ ಹರ್ಷ ಪಿ.ಎಸ್ ಬಳ್ಳಾರಿ: ಬಳ್ಳಾರಿ ವಲಯದ ಪೊಲೀಸ್ ಉಪಮಹಾನಿರೀಕ್ಷಕ (ಐಜಿಪಿ) ಹರ್ಷ ಪಿ.ಎಸ್ ಅವರು ಕೇವಲ ಕಾನೂನು ಸುವ್ಯವಸ್ಥೆಯಲ್ಲಷ್ಟೇ ಅಲ್ಲ, ಶೈಕ್ಷಣಿಕ ಕ್ಷೇತ್ರದಲ್ಲೂ ಅಪೂರ್ವ ಸಾಧನೆ ಮಾಡಿದ್ದಾರೆ. ವನ್ಯಜೀವಿ ಸಂರಕ್ಷಣೆ ಕುರಿತಾದ ಅವರ ಸುದೀರ್ಘ ಸಂಶೋಧನೆಯನ್ನು ಪರಿಗಣಿಸಿರುವ ಕುವೆಂಪು ವಿಶ್ವವಿದ್ಯಾನಿಲಯವು ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್‌ಡಿ) ಪದವಿಯನ್ನು ಘೋಷಿಸಿದೆ. ಸಂಶೋಧನೆಯ ಹೂರಣ: ಹರ್ಷ ಪಿ.ಎಸ್ ಅವರು ಕುವೆಂಪು ವಿವಿಯ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದ ಪ್ರಾಧ್ಯಾಪಕ ಡಾ. ವಿಜಯ ಕುಮಾರ್ ಅವರ ಮಾರ್ಗದರ್ಶನದಲ್ಲಿ ಕಳೆದ ಐದು ವರ್ಷಗಳಿಂದ ಶ್ರಮದಾಯಕ ಅಧ್ಯಯನ ನಡೆಸಿದ್ದರು. ಪ್ರಬಂಧದ ಶೀರ್ಷಿಕೆ: "ನಾಗರಹೊಳೆ, ಬಂಡೀಪುರ ಮತ್ತು ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಹುಲಿಗಳ ಜನಸಂಖ್ಯೆಯ ಸ್ಥಿರತೆಯ ಕುರಿತು ಒಂದು ಅಧ್ಯಯನ, ಮಾನವ-ಹುಲಿ ಸಂಘರ್ಷಕ್ಕೆ ವಿಶೇಷ ಉಲ್ಲೇಖದೊಂದಿಗೆ." ಕ್ಷೇತ್ರಕಾರ್ಯದ ಮುಖ್ಯಾಂಶಗಳು: ಒಬ್ಬ ಪೊಲೀಸ್ ಅಧಿಕಾರಿಯಾಗಿ ಬಿಡುವಿಲ್ಲದ ಕೆಲಸದ ನಡುವೆಯೂ ಹರ್ಷ ಅವರು ಕಾಡಿನ ಆಳಕ್ಕಿಳಿದು ಸಂಶೋಧನೆ ನಡೆಸಿದ್ದಾರೆ. ಈ ಪ್ರಬಂಧವು ಈ ಕೆಳಗಿನ ಪ್ರಮುಖ ಅಂಶಗಳನ್ನು ಒಳಗೊಂಡಿದೆ: ಕ್ಯಾಮೆರಾ ಟ್ರ್ಯಾಪಿಂಗ್: ಬೃಹತ್ ಪ್ರಮಾಣದಲ್ಲಿ ಕ್ಯಾಮೆರಾ ಟ್ರ್ಯಾಪಿಂಗ್ ಬಳಸಿ ಹುಲಿಗಳ ಚಲನವಲನ ಪತ್ತೆ. ಸಂಘರ್ಷ ತಾಣಗಳ ವಿಶ್ಲೇಷಣೆ: ಮಾನವ ಮತ್ತು ಹುಲಿಗಳ ನಡುವಿನ ಸಂಘರ್ಷ ನಡೆಯುವ ಸೂಕ್ಷ್ಮ ಪ್ರದೇಶಗಳ ಸಮಗ್ರ ಅಧ್ಯಯನ. ಸ್ಥಿರತೆಯ ವಿಶ್ಲೇಷಣೆ: ಸಂರಕ್ಷಿತ ಪ್ರದೇಶಗಳಲ್ಲಿ ಹುಲಿಗಳ ಸಂಖ್ಯೆ ಮತ್ತು ಅವುಗಳ ಜೀವನ ಕ್ರಮದ ಸ್ಥಿರತೆಯ ಕುರಿತು ವೈಜ್ಞಾನಿಕ ವರದಿ. ಘಟಿಕೋತ್ಸವದ ವಿವರ: ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಈಗಾಗಲೇ ಈ ಪದವಿಗೆ ಔಪಚಾರಿಕ ಅನುಮೋದನೆ ನೀಡಿದೆ. ಮೇ 06, 2026ರಂದು ನಡೆಯಲಿರುವ ಕುವೆಂಪು ವಿಶ್ವವಿದ್ಯಾನಿಲಯದ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಐಜಿಪಿ ಹರ್ಷ ಪಿ.ಎಸ್ ಅವರಿಗೆ ಅಧಿಕೃತವಾಗಿ ಪಿಎಚ್‌ಡಿ ಪ್ರಮಾಣಪತ್ರವನ್ನು ಪ್ರದಾನ ಮಾಡಲಿದೆ. ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ಪರಿಸರ ಮತ್ತು ವನ್ಯಜೀವಿಗಳ ಬಗ್ಗೆ ಇಂತಹ ಗಂಭೀರ ಸಂಶೋಧನೆ ನಡೆಸಿರುವುದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. #IGP #HarshaPS #completes #PhD #KuvempuUniversity #malgudiexpress #malgudinews #news #TopNews
Malgudi Express
600 views
3 days ago
#📜ಪ್ರಚಲಿತ ವಿದ್ಯಮಾನ📜 ಬಿಜೆಪಿ ನಾಯಕನಿಂದ 'ಹಾಸಿಗೆ ಹಂಚಿಕೊಂಡರೆ ಪದವಿ' ಆಮಿಷ ಉತ್ತರ ಪ್ರದೇಶದಲ್ಲಿ ಕೇಸರಿ ಪಡೆಯ ಅಸಲಿ ಮುಖವಾಡ ಕಳಚಿದೆಯೇ? ಲಕ್ನೋ: "ಬೇಟಿ ಬಚಾವೋ, ಬೇಟಿ ಪಢಾವೋ" ಎಂದು ಘೋಷಣೆ ಕೂಗುವ ಬಿಜೆಪಿ ಪಡಯ ಒಳಗಿನ ಕರಾಳ ಮುಖವೊಂದು ಈಗ ಉತ್ತರ ಪ್ರದೇಶದ ಮಹೋಬಾದಲ್ಲಿ ಬಹಿರಂಗವಾಗಿದೆ. ಪಕ್ಷದ ಹಿರಿಯ ನಾಯಕನೊಬ್ಬ ಮಹಿಳಾ ಕಾರ್ಯಕರ್ತೆಗೆ ನೀಡಿದ ಅಸಭ್ಯ ಆಮಿಷ ಇಡೀ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಘಟನೆಯ ಹಿನ್ನೆಲೆ: ಏನಿದು ಹಗರಣ?: ಮಹೋಬಾ ಜಿಲ್ಲೆಯ ಬಿಜೆಪಿ ಮಾಜಿ ಜಿಲ್ಲಾ ಮಂತ್ರಿ ದೀಪಾಲಿ ತಿವಾರಿ ಅವರು ಜಿಲ್ಲಾಧ್ಯಕ್ಷ ಮೋಹನ್ ಲಾಲ್ ಕುಶವಾಹ ವಿರುದ್ಧ ಗಂಭೀರ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ದೀಪಾಲಿ ತಿವಾರಿ ಅವರ ಪ್ರಕಾರ, ಮೋಹನ್ ಲಾಲ್ ಕುಶವಾಹ ಅವರು ರಾಜಕೀಯ ಉನ್ನತಿಗಾಗಿ ಅತ್ಯಂತ ಕೆಳಮಟ್ಟದ ಬೇಡಿಕೆಯನ್ನಿಟ್ಟಿದ್ದಾರೆ. "ನನ್ನೊಂದಿಗೆ ಹಾಸಿಗೆ ಹಂಚಿಕೊ, ನಿನಗೆ ಜಿಲ್ಲಾ ಉಪಾಧ್ಯಕ್ಷ ಸ್ಥಾನ ನೀಡುತ್ತೇನೆ ಮತ್ತು ಜಿಲ್ಲಾ ಪಂಚಾಯತ್ ಅಧ್ಯಕ್ಷ ಟಿಕೆಟ್ ಕೊಡಿಸುತ್ತೇನೆ" ಎಂದು ಕುಶವಾಹ ಬಹಿರಂಗವಾಗಿ ಆಮಿಷ ಒಡ್ಡಿದ್ದಾರೆ ಎಂದು ದೀಪಾಲಿ ತಿವಾರಿ ಗದ್ಗದಿತರಾಗಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ಮಹಿಳಾ ಗೌರವದ ಮಾತು ಬರೀ ಬೂಟಾಟಿಕೆಯೇ?: ಈ ಘಟನೆಯು ಬಿಜೆಪಿ ಪ್ರತಿಪಾದಿಸುವ 'ಮಹಿಳಾ ಸಬಲೀಕರಣ' ಮತ್ತು 'ನಾರಿ ಶಕ್ತಿ'ಯ ಘೋಷಣೆಗಳನ್ನು ಪ್ರಶ್ನಿಸುವಂತೆ ಮಾಡಿದೆ. ಸ್ವಪಕ್ಷದ ಮಹಿಳಾ ಮಂತ್ರಿಯೇ ಸುರಕ್ಷಿತವಾಗಿಲ್ಲದಿದ್ದರೆ, ಸಾಮಾನ್ಯ ಮಹಿಳೆಯರ ಗತಿ ಏನು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಅಧಿಕಾರದ ದುರ್ಬಳಕೆ: ಸಾಂಸ್ಥಿಕ ಹುದ್ದೆಗಳನ್ನು ಲೈಂಗಿಕ ತೃಪ್ತಿಗಾಗಿ ದಾಳವಾಗಿ ಬಳಸಿಕೊಳ್ಳುತ್ತಿರುವ ಆರೋಪ. ಸಂತ್ರಸ್ತೆಯ ಆಕ್ರೋಶ: ಪಕ್ಷಕ್ಕಾಗಿ ದುಡಿದ ಮಹಿಳೆಗೆ ಸಿಕ್ಕ ಪ್ರತಿಫಲ ಅಪಮಾನ ಮತ್ತು ಶೋಷಣೆಯೇ? ಪಕ್ಷದ ಮೌನ: ಈ ಗಂಭೀರ ಆರೋಪದ ಬಗ್ಗೆ ರಾಜ್ಯ ಬಿಜೆಪಿ ಘಟಕ ಇನ್ನೂ ಸ್ಪಷ್ಟವಾದ ಶಿಸ್ತು ಕ್ರಮ ಜರುಗಿಸದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ವಿರೋಧ ಪಕ್ಷಗಳ ವಾಗ್ದಾಳಿ: ಈಗಾಗಲೇ ಈ ವಿಷಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ವಿರೋಧ ಪಕ್ಷಗಳು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿವೆ. "ಮಹಿಳಾ ಗೌರವದ ಬಗ್ಗೆ ಭಾಷಣ ಮಾಡುವ ಬಿಜೆಪಿ ನಾಯಕರು, ತಮ್ಮದೇ ಪಕ್ಷದ ಮಹಿಳೆಯರನ್ನು ಯಾವ ಕಣ್ಣಿನಿಂದ ನೋಡುತ್ತಾರೆ ಎಂಬುದು ದೀಪಾಲಿ ತಿವಾರಿ ಅವರ ಕಣ್ಣೀರಿನಲ್ಲಿ ಎದ್ದು ಕಾಣುತ್ತಿದೆ" ಎಂದು ಟೀಕಿಸಲಾಗಿದೆ. ರಾಜಕೀಯದಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಬಗ್ಗೆ ಮಾತನಾಡುವ ಹೊತ್ತಲ್ಲೇ, ಇಂತಹ ಘಟನೆಗಳು ಮಹಿಳೆಯರನ್ನು ಸಕ್ರಿಯ ರಾಜಕಾರಣದಿಂದ ದೂರ ತಳ್ಳುವಂತೆ ಮಾಡುತ್ತವೆ. ಆರೋಪಿತ ಜಿಲ್ಲಾಧ್ಯಕ್ಷನ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಬಿಜೆಪಿ ತನ್ನ 'ನೈತಿಕತೆ'ಯನ್ನು ಸಾಬೀತುಪಡಿಸುತ್ತದೆಯೇ ಅಥವಾ ಪ್ರಕರಣವನ್ನು ಹಳ್ಳ ಹಿಡಿಸುತ್ತದೆಯೇ ಎಂದು ಕಾದು ನೋಡಬೇಕಿದೆ. #BJP #leader #offers #post #shareabed #MohanlalKushwah #DeepaliTiwari #malgudiexpress #malgudinews #news #TopNews