ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ Suvendu Adhikari ಹಾಗೂ ಅವರ ಸಂಪುಟದ ಎಲ್ಲಾ ಸಚಿವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು.💐👏
ಪಶ್ಚಿಮ ಬಂಗಾಳ ರಾಜ್ಯದ ಜನರು ಹೊಸ ಸರ್ಕಾರದ ಮೇಲೆ ಇಟ್ಟಿರುವ ವಿಶ್ವಾಸವನ್ನು ಗೌರವಿಸಿ, ಅಭಿವೃದ್ಧಿ, ಶಾಂತಿ, ನ್ಯಾಯ ಮತ್ತು ಸೌಹಾರ್ದತೆಯ ಮಾರ್ಗದಲ್ಲಿ ಪಶ್ಚಿಮ ಬಂಗಾಳವನ್ನು ಮತ್ತಷ್ಟು ಮುನ್ನಡೆಸುವ ಶಕ್ತಿ ಅವರಿಗೆ ದೊರಕಲಿ ಎಂದು ಹಾರೈಸುತ್ತೇನೆ.
ಕಳೆದ ಹಲವು ವರ್ಷಗಳಲ್ಲಿ ಅನೇಕ ಜನರು ಅನುಭವಿಸಿದ್ದ ಭಯ, ಅಶಾಂತಿ, ರಾಜಕೀಯ ಹಿಂಸಾಚಾರ ಮತ್ತು ಸಾಮಾಜಿಕ ಸಂಕಷ್ಟಗಳಿಗೆ ಅಂತ್ಯ ಸಿಗಲಿ. ವಿಶೇಷವಾಗಿ ಹಿಂದೂ ಸಮಾಜದ ಎಲ್ಲಾ ಸಮುದಾಯದ ಜನರು ಯಾವುದೇ ಭಯವಿಲ್ಲದೆ, ಗೌರವದಿಂದ ಮತ್ತು ಸಮಾನ ಹಕ್ಕುಗಳೊಂದಿಗೆ ಬದುಕುವ ವಾತಾವರಣ ನಿರ್ಮಾಣವಾಗಲಿ ಎಂಬುದು ನಮ್ಮ ಆಶಯ.
ಹೊಸ ಸರ್ಕಾರವು ಹಿಂದೂ ಧರ್ಮದ ಎಲ್ಲಾ ಜಾತಿಯ ನಾಗರಿಕರ ಕಲ್ಯಾಣಕ್ಕಾಗಿ ಕೆಲಸ ಮಾಡಿ, ಪಶ್ಚಿಮ ಬಂಗಾಳವನ್ನು ಅಭಿವೃದ್ಧಿ, ಉದ್ಯೋಗ, ಶಿಕ್ಷಣ, ಭದ್ರತೆ ಮತ್ತು ಸಾಂಸ್ಕೃತಿಕ ಗೌರವದ ದಿಕ್ಕಿನಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. 🙏🚩
#💪 ಜೈ ಹನುಮಾನ್ 🚩