ಫಾಲೋ
Rekha
@rk203
451
ಪೋಸ್ಟ್ಸ್
4,810
ಫಾಲೋವರ್ಸ್
Rekha
15.3K ವೀಕ್ಷಿಸಿದ್ದಾರೆ
9 ಗಂಟೆಗಳ ಹಿಂದೆ
ಕಾಮಿಡಿ ಕಿಲಾಡಿಗಳು ಶೋ ಮೂಲಕ ಜನಪ್ರಿಯತೆ ಪಡೆದ ನಟಿ ನಯನಾ ವಿರುದ್ಧ ಕಲಬುರ್ಗಿಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್​​ಐಆರ್ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆಸಿದ್ದಾರೆ. ಕಾಮಿಡಿ ಕಿಲಾಡಿಗಳು (Comedy Kiladigalu) ಖ್ಯಾತಿನ ನಟಿ, ಹಾಸ್ಯ ಕಲಾವಿದೆ ನಯನ ವಿರುದ್ಧ ದೂರು ದಾಖಲಾಗಿದೆ. ನಟಿ ನಯನಾ ಅವರು ದಲಿತ ನಿಂದನೆ ಮಾಡಿದ್ದಾರೆಂದು ಆರೋಪಿಸಿ ದಲಿತ ಸಂಘಟನೆಯೊಂದು ನಟಿಯ ವಿರುದ್ಧ ದೂರು ದಾಖಲಿಸಿದ್ದಾರೆ. ನಯನಾ ಅವರು ಕಳೆದ ತಿಂಗಳು ಚಿಟ್ ಫಂಡ್ ಮೋಸದ ಕುರಿತಾಗಿ ಮಾತನಾಡುತ್ತಾ ಬಳಸಿದ್ದ ಪದಗಳು ದಲಿತ ವಿರೋಧಿ ಮತ್ತು ಜಾತಿ ನಿಂದನಾತ್ಮಕ ಪದಗಳಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಲಬುರ್ಗಿಯಲ್ಲಿ ದಲಿತ ಸೇನೆಯ ಅಧ್ಯಕ್ಷರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. #😮ಜಾತಿ ನಿಂದನೆ ಆರೋಪ: ಖ್ಯಾತ ನಟಿ ವಿರುದ್ಧ ದೂರು ದಾಖಲು😱
Rekha
38.5K ವೀಕ್ಷಿಸಿದ್ದಾರೆ
11 ಗಂಟೆಗಳ ಹಿಂದೆ
ಕಳೆದ ಕೆಲವು ದಿನಗಳಿಂದ ಚಿತ್ರರಂಗದಲ್ಲಿ ವಿಚ್ಛೇದನಗಳ ಸಂಖ್ಯೆ ಹೆಚ್ಚಾಗಿದೆ. ಇದು ಮಾತ್ರವಲ್ಲ, ಪ್ರತಿದಿನ ಹಿರಿಯ ನಟಿಯರು ಮತ್ತು ನಟರ ವಿಚ್ಛೇದನದ ಸುದ್ದಿಗಳು ಕೇಳಿ ಬರುತ್ತಿವೆ. ಇದೀಗ, ನಟಿಯೊಬ್ಬರು 43 ನೇ ವಯಸ್ಸಿನಲ್ಲಿ ವಿಚ್ಛೇದನ ಪಡೆದಿದ್ದಾರೆ. ಇದು ಮಾತ್ರವಲ್ಲದೆ, ಇತ್ತೀಚೆಗೆ ನಟಿ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ವಿಚ್ಛೇದನದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆಘಾತಕಾರಿ ಸಂಗತಿಯೆಂದರೆ ಇದು ನಟಿಯ ಮೂರನೇ ವಿಚ್ಛೇದನ. ಕಳೆದ ಕೆಲವು ದಿನಗಳಲ್ಲಿ ನಟಿಯ ವಿಚ್ಛೇದನದ ಬಗ್ಗೆ ಚರ್ಚೆ ನಡೆಯುತ್ತಿತ್ತು. ಈಗ ಅವರು ಪೋಸ್ಟ್ ಹಂಚಿಕೊಳ್ಳುವ ಮೂಲಕ ಅಧಿಕೃತ ಘೋಷಣೆ ಮಾಡಿದ್ದಾರೆ. ನಟಿಯ ಪೋಸ್ಟ್ ನೋಡಿ, ಅವರ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ. ಮಲಯಾಳಂ ನಟಿ ಮೀರಾ ವಾಸುದೇವನ್ ಛಾಯಾಗ್ರಾಹಕ ವಿಪಿನ್ ಪುಥಿಯಕಂ ಅವರಿಂದ ವಿಚ್ಛೇದನ ಪಡೆಯುತ್ತಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಮೀರಾ ವಾಸುದೇವನ್ ಮತ್ತು ವಿಪಿನ್ ಕಳೆದ ವರ್ಷ ಮೇ ತಿಂಗಳಲ್ಲಿ ಕೊಯಮತ್ತೂರಿನಲ್ಲಿ ವಿವಾಹವಾದರು. ಮದುವೆಯಾದ ಕೇವಲ ಒಂದು ವರ್ಷದೊಳಗೆ, ಇಬ್ಬರೂ ಬೇರೆಯಾಗಲು ನಿರ್ಧರಿಸಿದರು. ನಿರ್ಧಾರ ಮಾತ್ರವಲ್ಲ, ಇಬ್ಬರೂ ಕಾನೂನುಬದ್ಧವಾಗಿ ಬೇರ್ಪಟ್ಟಿದ್ದಾರೆ. #😮43 ನೇ ವಯಸ್ಸಿಗೆ ಮೂರನೇ ಬಾರಿ ವಿಚ್ಛೇದನ ಪಡೆದ ಪ್ರಸಿದ್ಧ ನಟಿ😱
Rekha
534 ವೀಕ್ಷಿಸಿದ್ದಾರೆ
4 ದಿನಗಳ ಹಿಂದೆ
‘ಅಕಿರ’, ‘ವಾಸು ನಾನ್ ಪಕ್ಕಾ ಲೋಕಲ್’ ಇತ್ತೀಚೆಗಿನ ‘ಆರಾಮ್ ಅರವಿಂದ ಸ್ವಾಮಿ’ ಇನ್ನೂ ಕೆಲ ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಅನೀಶ್ ಅವರ ಹೊಸ ಸಿನಿಮಾ ‘ಲವ್ ಒಟಿಪಿ’ ನಿನ್ನೆ (ಶುಕ್ರವಾರ) ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಒಳ್ಳೆಯ ವಿಮರ್ಶೆಗಳು ಪ್ರಕಟಗೊಂಡಿವೆ. ಆದರೆ ಜನ ಸಿನಿಮಾ ನೋಡಲು ಬಂದಿಲ್ಲ. ಇದು ಅನೀಶ್ ಅವರಿಗೆ ತೀವ್ರ ನೋವುಂಟು ಮಾಡಿದ್ದು, ಕಣ್ನೀರು ಹಾಕುತ್ತಾ ಭಾವುಕವಾಗಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಕನ್ನಡದಲ್ಲಿ ಈಗಾಗಲೇ ಹಲವು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿರುವ ಅನೀಶ್ ಅವರ ಹೊಸ ಸಿನಿಮಾ ‘ಲವ್ ಒಟಿಪಿ’ (Love OTP) ಇದೇ ವಾರ ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಒಳ್ಳೆಯ ವಿಮರ್ಶೆಗಳು ವ್ಯಕ್ತವಾಗಿವೆ. ಪ್ರೇಮಕತೆಯುಳ್ಳ ಈ ಸಿನಿಮಾವನ್ನು ಲವ-ಲವಿಕೆಯಿಂದ ನಿರ್ದೇಶಕರು ತೆರೆಗೆ ತಂದಿದ್ದಾರೆ. ಸಿನಿಮಾದ ಬಗ್ಗೆ ಸಾಕಷ್ಟು ಧನಾತ್ಮಕ ವಿಮರ್ಶೆಗಳು ಬಂದ ಹೊರತಾಗಿಯೂ ಚಿತ್ರಮಂದಿರಗಳಿಗೆ ಜನ ಬಂದಿಲ್ಲ. ಇದು ನಟ ಅನೀಶ್ ಅವರಿಗೆ ಬೇಸರ ತರಿಸಿದ್ದು, ಕಣ್ಣೀರು ಹಾಕುತ್ತಾ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. #😢ಸಿನಿಮಾಗೆ ನೀರಸ ಪ್ರತಿಕ್ರಿಯೆ, ಕಣ್ಣೀರು ಹಾಕಿದ ಖ್ಯಾತ ನಟ😞
Rekha
15.5K ವೀಕ್ಷಿಸಿದ್ದಾರೆ
5 ದಿನಗಳ ಹಿಂದೆ
ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದಿದ್ದರಿಂದ ಡ್ಯಾನ್ಸರ್ ಸುಧೀಂದ್ರ ಸಾವನ್ನಪ್ಪಿದ್ದಾರೆ. ನೆಲಮಂಗಲ ತಾಲ್ಲೂಕಿನ ಪೆಮ್ಮನಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ನಿನ್ನೆಯಷ್ಟೇ ಹೊಸ ಕಾರು ಡಿಲಿವರಿ ಪಡೆದಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಪಟ್ಟಣದ ನಿವಾಸಿ ಸುಧೀಂದ್ರ ಹೊಸ ಇಕೋ ಕಾರಿನಲ್ಲಿ ಹೋಗುವಾಗ ರಸ್ತೆ ಮಧ್ಯೆ ಕಾರ್ ಕೆಟ್ಟು ನಿಂತಿದೆ. ಇದರಿಂದಾಗಿ ಕಾರ್ ಪರೀಕ್ಷಿಸಲು ಸುಧೀಂದ್ರ ಕಾರ್ ನಿಂದ ಇಳಿದು ಕಾರ್ ಹಿಂಭಾಗ ನಿಂತಿದ್ದಾಗ, ಹಿಂದಿನಿಂದ ಬಂದ ಕ್ಯಾಂಟರ್‌, ಸುಧೀಂದ್ರಗೆ ಡಿಕ್ಕಿ ಹೊಡೆದಿದೆ. ಇದರಿಂದ ಸುಧೀಂದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಈ ಕಾರ್‌ಗೆ ಕ್ಯಾಂಟರ್‌ ಡಿಕ್ಕಿ ಹೊಡೆಯುವ ದೃಶ್ಯ ಸಮೀಪದಲ್ಲೇ ಇದ್ದ ಸಿಸಿಟಿವಿಯಲ್ಲಿ ದಾಖಲಾಗಿದೆ. ಸಿಸಿಟಿವಿ ದೃಶ್ಯವನ್ನು ನೋಡಿದರೇ, ಇದು ಅಪಘಾತದಂತೆ ಕಾಣುತ್ತಿಲ್ಲ. ದುರುದ್ದೇಶಪೂರ್ವಕವಾಗಿಯೇ ಕ್ಯಾಂಟರ್‌ ಚಾಲಕ, ಇಕೋ ಕಾರಿನ ಬಳಿಗೆ ಬಂದು ಡಿಕ್ಕಿ ಹೊಡೆದು ಮರ್ಡರ್ ಮಾಡಿದಂತೆ ಕಾಣುತ್ತಿದೆ. ಹೆದ್ದಾರಿ ಸಂಪೂರ್ಣ ಖಾಲಿ ಇತ್ತು. ಬಲಭಾಗದಲ್ಲಿ ಯಾವುದೇ ವಾಹನಗಳು ಇರಲಿಲ್ಲ. ಆದರೂ, ಕ್ಯಾಂಟರ್‌ ಚಾಲಕ ಹೆದ್ದಾರಿಯ ಎಡಭಾಗದಲ್ಲಿ ನಿಂತಿದ್ದ ಇಕೋ ಕಾರಿನ ಬಳಿಗೆ ಲಾರಿ ಬಂದು ಹೆದ್ದಾರಿಯಲ್ಲಿ ನಿಂತಿದ್ದ ಡ್ಯಾನ್ಸರ್ ಸುಧೀಂದ್ರ ಹಾಗೂ ಇಕೋ ಕಾರಿಗೆ ಡಿಕ್ಕಿ ಹೊಡೆದು ಮುಂದೆ ಹೋಗಿದೆ. #💔ರಸ್ತೆ ಅಪಘಾತದಲ್ಲಿ ಖ್ಯಾತ ಡ್ಯಾನ್ಸರ್ ಸಾವು 😭
Rekha
20.8K ವೀಕ್ಷಿಸಿದ್ದಾರೆ
9 ದಿನಗಳ ಹಿಂದೆ
ಅಮೃತವರ್ಷಿಣಿ ಖ್ಯಾತಿಯ ಸೀರಿಯಲ್‌ ನಟಿ ರಜನಿಯವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅರುಣ್ ಗೌಡ ಅವರನ್ನು ಒರಸಿರುವ ಅವರು ತಮ್ಮಿಬ್ಬರ ನಡುವಿನ ಸ್ನೇಹಕ್ಕೆ ಪ್ರೀತಿಯ ಹೆಸರು ನೀಡಿದ್ದ ಅವರು ಈಗ ಕೊನೆಗೂ ದಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಿರುತರೆ ನಟಿ ರಜನಿಯವರು ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅಮೃತವರ್ಷಿಣಿ ಮತ್ತು ಜೀ ಕನ್ನಡ ವಾಹಿನಿಯ ಹಿಟ್ಲರ್‌ ಕಲ್ಯಾಣ ಧಾರಾವಾಹಿ ಸೇರಿದಂತೆ ಅನೇಕ ಸೀರಿಯಲ್‌ಗಳಲ್ಲಿ ನಟಿಸಿ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಎರಡು ವರ್ಷಗಳಿಂದ ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡಿಕೊಂಡಿದ್ದ ಈ ಜೋಡಿ, ಎಲ್ಲರಿಗೂ ಇಷ್ಟವಾಗಿತ್ತು ಈಗ ಇವರಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟರುವುದು ಅವರ ಅಭಿಮಾನಿಗಳಿಗೆ ಸಂತಸದ ಸುದ್ದಿಯಾಗಿದೆ. ಇನ್ನು ಇವರಿಬ್ಬರ ಅನ್ಯೂನ್ಯತರಯನ್ನು ನೋಡಿದವರೆಲ್ಲ ಕೆಲವು ಬಾರಿ ಲವ್ ಮಾಡ್ತಿದ್ದೀರಾ ಎಂಬ ಪ್ರಶ್ನೆಗೆ ಸ್ನೇಹಿತರು ಎಂದು ಉತ್ತರಿಸಿದ್ದ ನಟಿ ರಜಿನಿ ಈಗ ಕೊನೆಗೂ ಆ ಸ್ನೇಹಕ್ಕೆ ಮದುವೆ ಮೂಲಕ ಅರ್ಥ ನೀಡಿದ್ದಾರೆ. ಅರುಣ್ ಗೌಡ ಅವರು ವೃತ್ತಿಯಲ್ಲಿ ಜಿಮ್ ಟ್ರೈನರ್ ಆಗಿದ್ದು ಫಿಟ್‌ನೆಸ್‌ ಪ್ರಿಯರಾಗಿದ್ದಾರೆ. #💖ಜಿಮ್ ಟ್ರೈನರ್ ಜೊತೆ ಸಪ್ತಪದಿ ತುಳಿದ ಖ್ಯಾತ ನಟಿ 😍
Rekha
43.5K ವೀಕ್ಷಿಸಿದ್ದಾರೆ
10 ದಿನಗಳ ಹಿಂದೆ
ನಟ ದಿವಂಗತ ಕೆ ಎಸ್ ಅಶ್ವತ್ಥ್ ಅವರ ಧರ್ಮಪತ್ನಿ , ಶಂಕರ್ ಅಶ್ವತ್ಥ್ ರ ತಾಯಿ ಇಂದು ದೈವಾಧೀನ. 96 ವರ್ಷದ ಶಾರದಾ ಅಶ್ವಥ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನಾಳೆ ಮಧ್ಯಾಹ್ನ 12 ಗಂಟೆಗೆ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಕ್ರಿಯೆ. #😭💔ಖ್ಯಾತ ಹಿರಿಯ ನಟನ ತಾಯಿ ನಿಧನ😭💔
Rekha
298.9K ವೀಕ್ಷಿಸಿದ್ದಾರೆ
22 ದಿನಗಳ ಹಿಂದೆ
ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಎಂದೇ ಖ್ಯಾತರಾದ ನಟ ಪುನೀತ್ ರಾಜ್‌ಕುಮಾರ್ ಅವರು ಕರ್ನಾಟಕದ ಲಕ್ಷಾಂತರ ಜನರ ಪ್ರೀತಿಗೆ ಪಾತ್ರರಾಗಿದ್ದರು. ಕನ್ನಡದ ಜನಪ್ರಿಯ ನಟ ಪುನೀತ್ ರಾಜ್‌ಕುಮಾರ್ ಅಕ್ಟೋಬರ್ 29, 2021 ರಂದು ತಮ್ಮ 46 ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾದರು. ಕನ್ನಡ ಮತ್ತು ಭಾರತೀಯ ಚಿತ್ರರಂಗದಲ್ಲಿ ಗೌರವಾನ್ವಿತ ದಂತಕಥೆಯಾಗಿದ್ದ ಡಾ. ರಾಜ್‌ಕುಮಾರ್ ಅವರ ಕಿರಿಯ ಮಗ ಪುನೀತ್ ತಮ್ಮ ಹಿರಿಯ ಸಹೋದರರಾದ ಡಾ. ಶಿವ ರಾಜ್‌ಕುಮಾರ್ ಮತ್ತು ಡಾ. ರಾಘವೇಂದ್ರ ರಾಜ್‌ಕುಮಾರ್ ಅವರೊಂದಿಗೆ ಜನಮನದಲ್ಲಿ ಬೆಳೆದರು, ಇಬ್ಬರೂ ಪ್ರಮುಖ ನಟ-ನಿರ್ಮಾಪಕರು. ಅವರ ಕುಟುಂಬ ಮತ್ತು ಕರ್ನಾಟಕದ ಜನರು ಪ್ರೀತಿಯಿಂದ 'ಅಪ್ಪು' ಎಂದು ಕರೆಯಲ್ಪಡುವ ಪುನೀತ್ ಅವರ ಪರಂಪರೆಯನ್ನು ಅವರ ನಿಧನದ ನಂತರವೂ ಅಭಿಮಾನಿಗಳು ಮತ್ತು ಕುಟುಂಬವು ಪಾಲಿಸುತ್ತದೆ ಮತ್ತು ಆಚರಿಸುತ್ತದೆ. #❤️ಡಾ . ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆ 💐
Rekha
25.2K ವೀಕ್ಷಿಸಿದ್ದಾರೆ
23 ದಿನಗಳ ಹಿಂದೆ
ಬಾಲಿವುಡ್‌ನ ಪ್ರತಿಭಾವಂತ ನಟಿ ಸಂಧ್ಯಾ ಮೃದುಲ್ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಮನಕಲಕುವ ಪೋಸ್ಟ್ ಮಾಡಿದ್ದು, ಅದು ಎಲ್ಲರ ಮನಸ್ಸನ್ನೂ ಮುಟ್ಟಿದೆ. “ಕೆಲಸವಿಲ್ಲ, ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ” ಎಂದು ಮನವಿ ಮಾಡಿರುವ ಅವರು, ತಮ್ಮ ಜೀವನದ ಕಷ್ಟದ ಹಂತವನ್ನು ಸ್ಪಷ್ಟವಾಗಿ ಹಂಚಿಕೊಂಡಿದ್ದಾರೆ. ಒಂದು ಕಾಲದಲ್ಲಿ “ಪೇಜ್ 3”, “ಹನಿಮೂನ್ ಟ್ರಾವೆಲ್ಸ್ ಪ್ರೈವೇಟ್ ಲಿಮಿಟೆಡ್”, “ಸಾಥಿಯಾನ್” ಮುಂತಾದ ಯಶಸ್ವಿ ಸಿನಿಮಾಗಳಲ್ಲಿ ನಟಿಸಿದ್ದ ಸಂಧ್ಯಾ, ಈಗ ಉದ್ಯೋಗವಿಲ್ಲದೆ ಸಂಕಷ್ಟದಲ್ಲಿದ್ದಾರೆ. ಸಂಧ್ಯಾ ತಮ್ಮ ಪೋಸ್ಟ್‌ನಲ್ಲಿ, ಇಂದಿನ ಚಿತ್ರರಂಗದ ಹೊಸ ವಾಸ್ತವತೆಯ ಬಗ್ಗೆ ಮಾತನಾಡಿದ್ದಾರೆ — “ಇಂದಿನ ಕಾಲದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಅನುಯಾಯಿಗಳು (followers) ಇದ್ದರೆ ಮಾತ್ರ ಕೆಲಸ ಸಿಗುತ್ತದೆ. ಆದರೆ ಕೆಲಸವಿಲ್ಲದೆ ಜನಪ್ರಿಯತೆ ಹೇಗೆ ಬರುತ್ತದೆ? ಜನಪ್ರಿಯತೆ ಇಲ್ಲದೆ ಅನುಯಾಯಿಗಳು ಹೇಗೆ ಹೆಚ್ಚಾಗುತ್ತಾರೆ?” ಎಂಬ ಪ್ರಶ್ನೆಯನ್ನು ಅವರು ಎತ್ತಿದ್ದಾರೆ. #🥺ಕೆಲಸವಿಲ್ಲ ಊಟಕ್ಕೂ ಗತಿ ಇಲ್ಲ ; ಖ್ಯಾತ ನಟಿ ಕಣ್ಣೀರು 😢
See other profiles for amazing content