ಬಸವಾದಿ ಶರಣ ಶರಣೆಯರು

ಕಾಯಕವೇ ಕೈಲಾಸ..
596 views
6 days ago
ಬಸವ ಬೆಳಗಿನ ಶರಣು ಶರಣಾರ್ಥಿಗಳು!🙏🏻 "ತನು ಕರಗದವರಲ್ಲಿ ಮಜ್ಜನವನೊಲ್ಲೆಯಯ್ಯಾ ನೀನು.. ಮನ ಕರಗದವರಲ್ಲಿ ಪುಷ್ಪವನೊಲ್ಲೆಯಯ್ಯಾ ನೀನು.. ಹದುಳಿಗರಲ್ಲದವರಲ್ಲಿ ಗಂಧಾಕ್ಷತೆಯನೊಲ್ಲೆಯಯ್ಯಾ ನೀನು.. ಅರಿವು ಕಣ್ದೆರೆಯದವರಲ್ಲಿ ಆರತಿಯನೊಲ್ಲೆಯಯ್ಯಾ ನೀನು.. ಭಾವಶುದ್ಭವಿಲ್ಲದವರಲ್ಲಿ ಧೂಪವನೊಲ್ಲೆಯಯ್ಯಾ ನೀನು.. ಪರಿಣಾಮಿಗಳಲ್ಲದವರಲ್ಲಿ ನೈವೇದ್ಯವನೊಲ್ಲೆಯಯ್ಯಾ ನೀನು.. ತ್ರಿಕರಣ ಶುದ್ಧವಿಲ್ಲದವರಲ್ಲಿ ತಾಂಬೂಲವನೊಲ್ಲೆಯಯ್ಯಾ ನೀನು.. ಹೃದಯಕಮಲ ಅರಳದವರಲ್ಲಿ ಇರಲೊಲ್ಲೆಯಯ್ಯಾ ನೀನು.. ಎನ್ನಲ್ಲಿ ಏನುಂಟೆಂದು ಕರಸ್ಥಲವನಿಂಬುಗೊಂಡೆ ಹೇಳಾ ಚೆನ್ನಮಲ್ಲಿಕಾರ್ಜುನಯ್ಯಾ??? ✍ ಅಕ್ಕಮಹಾದೇವಿಯವರ ವಚನ.. ಸ.ವ.ಸಂ:೫ ವ.ಸಂ:೨೧೮ #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು
ಕಾಯಕವೇ ಕೈಲಾಸ..
613 views
6 days ago
"ನುಡಿಯಲ್ಲಿ ಎಚ್ಚತ್ತು ನಡೆಯಲ್ಲಿ ತಪ್ಪಿದಡೆ ಹಿಡಿದಿರ್ದ ಲಿಂಗವು ಘಟಸರ್ಪನಂತೆ! ನುಡಿಯಲು ಬಾರದು, ನಡೆಯಲು ಬಾರದು, ಲಿಂಗದೇವನೆ ದಿಬ್ಯವೊ, ಅಯ್ಯಾ! ಬಡವನ ಕೋಪ ಅವುಡಿಗೆ ಮೃತ್ಯುವಾದಂತೆ ಕಡೆದಾಂಟದು, ಕಾಣಾ, ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು