2026

𝗗𝗶𝗚𝗶𝗧𝗮𝗟 𝗠𝗘𝗗𝗜𝗔 🌍 ಸುದ್ದಿ ಪ್ರಪಂಚ
638 views
9 days ago
*ಸಾಯಿ ದುರ್ಗಾ ತೇಜ್ ನಟನೆಯ ಪ್ಯಾನ್-ಇಂಡಿಯಾ ಸಿನಿಮಾ 'ಸಂಬರಾಲ ಯೇಟಿ ಗಟ್ಟು' ಶೂಟಿಂಗ್ ಕಂಪ್ಲೀಟ್; 2027ರ ಸಂಕ್ರಾಂತಿಗೆ ರಿಲೀಸ್* ಮೆಗಾ ಸುಪ್ರೀಂ ಹೀರೋ ಸಾಯಿ ದುರ್ಗಾ ತೇಜ್ ಅಭಿನಯದ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಆ್ಯಕ್ಷನ್-ಡ್ರಾಮಾ 'ಸಂಬರಾಲ ಯೇಟಿ ಗಟ್ಟು' (SYG) ಚಿತ್ರದ ಸಂಪೂರ್ಣ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಪ್ರತಿಷ್ಠಿತ ಪ್ರೈಮ್‌ಶೋ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಕೆ. ನಿರಂಜನ್ ರೆಡ್ಡಿ ಹಾಗೂ ಚೈತನ್ಯ ರೆಡ್ಡಿ ಅತ್ಯಂತ ಅದ್ಧೂರಿ ವೆಚ್ಚದಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ನೂತನ ಪ್ರತಿಭೆ ರೋಹಿತ್ ಕೆ.ಪಿ. ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಸದ್ಯ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡವು, ಪೋಸ್ಟ್-ಪ್ರೊಡಕ್ಷನ್ ಕೆಲಸಗಳನ್ನು ಭರದಿಂದ ಮಾಡುತ್ತಿದೆ. 2027ರ ಜನವರಿ 12ರಂದು ಸಂಕ್ರಾಂತಿ ಹಬ್ಬದ ಕೊಡುಗೆಯಾಗಿ ಚಿತ್ರವನ್ನು ವಿಶ್ವಾದ್ಯಂತ ತೆರೆಗೆ ತರುವುದಾಗಿ ಅಧಿಕೃತವಾಗಿ ಚಿತ್ರತಂಡ ಪ್ರಕಟಿಸಿದೆ. ಚಿತ್ರದ ರಿಲೀಸ್ ಡೇಟ್ ಪೋಸ್ಟರ್ ಸಿನಿಪ್ರಿಯರಲ್ಲಿ ಭಾರಿ ಕುತೂಹಲ ಮೂಡಿಸಿದೆ. ಪೋಸ್ಟರ್‌ನಲ್ಲಿ ಸಾಯಿ ದುರ್ಗಾ ತೇಜ್ ಅವರು ಹಿಂದೆಂದೂ ಕಾಣದ ರಗಡ್ ಮತ್ತು ತೀವ್ರ ಲುಕ್‌ನಲ್ಲಿ ಅಬ್ಬರಿಸಿದ್ದಾರೆ. ರಕ್ತಸಿಕ್ತ ಮುಖ, ಕೈಯಲ್ಲಿ ಆಯುಧ, ಮುಖದಲ್ಲಿ ಗಂಭೀರ ಭಾವದೊಂದಿಗೆ ಬೆಂಕಿಯ ಜ್ವಾಲೆಗಳು ಹಾಗೂ ಹೊತ್ತಿ ಉರಿಯುತ್ತಿರುವ ಕಟ್ಟಡಗಳ ನಡುವೆ ಅವರು ನಿರ್ಭಯವಾಗಿ ನಡೆದುಬರುವ ದೃಶ್ಯವು ಚಿತ್ರದಲ್ಲಿನ ಭೀಕರ ಸಂಘರ್ಷ ಹಾಗೂ ಚಿತ್ರದಲ್ಲಿ ಹೈ-ವೋಲ್ಟೇಜ್ ಆ್ಯಕ್ಷನ್ ಇದೆ ಎಂಬುದನ್ನು ಅನಾವರಣಗೊಳಿಸಿದೆ. ಈಗಾಗಲೇ ಬಿಡುಗಡೆಯಾಗಿರುವ 'ಅಸುರ ಆಗಮನ' ಗ್ಲಿಂಪ್ಸ್ ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ಪಡೆದುಕೊಂಡಿದ್ದು, ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಹಲವು ನೈಜ ಹಾಗೂ ವಿಭಿನ್ನ ತಾಣಗಳಲ್ಲಿ ಬೃಹತ್ ಸೆಟ್‌ಗಳನ್ನು ನಿರ್ಮಿಸಿ ಈ ಚಿತ್ರವನ್ನು ಶೂಟ್ ಮಾಡಲಾಗಿದೆ. ಸಾಯಿ ದುರ್ಗಾ ತೇಜ್ ಅವರ ಜೊತೆಗೆ ಐಶ್ವರ್ಯಾ ಲಕ್ಷ್ಮಿ ನಾಯಕಿಯಾಗಿ ನಟಿಸಿದ್ದು, ಜಗಪತಿ ಬಾಬು, ಸಾಯಿ ಕುಮಾರ್, ಶ್ರೀಕಾಂತ್, ಅನನ್ಯಾ ನಾಗಲ್ಲ ಹಾಗೂ ಬಾಲಿವುಡ್‌ನ ಖ್ಯಾತ ನಟರೊಬ್ಬರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಪ್ಯಾನ್-ಇಂಡಿಯಾ ಮೆರುಗನ್ನು ಹೆಚ್ಚಿಸಿದ್ದಾರೆ. ರೋಹಿತ್ ಕೆ.ಪಿ. ಭಾವನಾತ್ಮಕ ಅಂಶಗಳ ಜೊತೆಗೆ ರೋಮಾಂಚಕ ಆ್ಯಕ್ಷನ್ ಸನ್ನಿವೇಶಗಳನ್ನು ಈ ಕಥೆಯಲ್ಲಿ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ ಎಂಬುದು ಚಿತ್ರತಂಡದ ಮಾಹಿತಿ. ಉನ್ನತ ತಾಂತ್ರಿಕ ಮೌಲ್ಯಗಳೊಂದಿಗೆ ಮೂಡಿಬರುತ್ತಿರುವ ಈ ಚಿತ್ರಕ್ಕೆ ಬಿ. ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನವಿದ್ದು, ವೆಟ್ರಿವೇಲ್ ಪಳನಿಸಾಮಿ ಅವರ ಛಾಯಾಗ್ರಹಣವಿದೆ. ಛೋಟಾ ಕೆ. ಪ್ರಸಾದ್ ಸಂಕಲನ, ಗಾಂಧಿ ನಡಿಕುಡಿಕರ್ ಪ್ರೊಡಕ್ಷನ್ ಡಿಸೈನ್, ಕೆವಿನ್ ಮಾಸ್ಟರ್ ಸಾಹಸ ನಿರ್ದೇಶನ ಹಾಗೂ ಆಯೆಷಾ ಮರಿಯಮ್ ಕಾಸ್ಟ್ಯೂಮ್ ಡಿಸೈನಿಂಗ್ ಜವಾಬ್ದಾರಿ ಹೊತ್ತಿದ್ದಾರೆ. ಪ್ರೇಕ್ಷಕರಿಗೆ ಅತ್ಯುತ್ತಮ ಸಿನಿಮೀಯ ಅನುಭವ ನೀಡಲು ಚಿತ್ರತಂಡವು ತಾಂತ್ರಿಕ ಹಾಗೂ ದೃಶ್ಯ ವೈಭವದ ಗುಣಮಟ್ಟಕ್ಕೆ ಹೆಚ್ಚಿನ ಒತ್ತು ನೀಡಿ ಕೆಲಸ ಮಾಡುತ್ತಿದೆ. #movies #2026
𝗗𝗶𝗚𝗶𝗧𝗮𝗟 𝗠𝗘𝗗𝗜𝗔 🌍 ಸುದ್ದಿ ಪ್ರಪಂಚ
543 views
9 days ago
*ಮೆಗಾಸ್ಟಾರ್ ಚಿರಂಜೀವಿ ಹುಟ್ಟುಹಬ್ಬಕ್ಕೆ ‘ಕಾಕಾ’ ಗ್ಲಿಂಪ್ಸ್ ರಿಲೀಸ್: ಸಂಕ್ರಾಂತಿಗೆ ಬಾಕ್ಸಾಫೀಸ್ ಧಮಾಕಾ!* ಮೆಗಾಸ್ಟಾರ್ ಚಿರಂಜೀವಿ ಅವರ ಹುಟ್ಟುಹಬ್ಬದ (ಆಗಸ್ಟ್ 22) ಅಂಗವಾಗಿ ‘ಮೆಗಾ 158’ ಚಿತ್ರತಂಡ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ನೀಡಿದೆ. ‘ವಾಲ್ತೇರು ವೀರಯ್ಯ’ ಚಿತ್ರದ ಯಶಸ್ಸಿನ ನಂತರ ಮೆಗಾಸ್ಟಾರ್ ಚಿರಂಜೀವಿ ಮತ್ತು ಮಾಸ್ ಕಮರ್ಷಿಯಲ್ ನಿರ್ದೇಶಕ ಬಾಬಿ ಕೊಲ್ಲಿ ಕಾಂಬಿನೇಷನ್‌ನಲ್ಲಿ ಸಿದ್ಧವಾಗುತ್ತಿರುವ ಈ ಬಹುನಿರೀಕ್ಷಿತ ಚಿತ್ರದ ಟೈಟಲ್ ಗ್ಲಿಂಪ್ಸ್ ಅನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ಈ ಚಿತ್ರಕ್ಕೆ ‘ಕಾಕಾ’ ಎಂದು ಶೀರ್ಷಿಕೆ ಇಡಲಾಗಿದ್ದು, ಗ್ಲಿಂಪ್ಸ್‌ನಲ್ಲಿ ಚಿರಂಜೀವಿ ವಿಭಿನ್ನ ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ. ‘ಅಮ್ಮಾಜಿ ಆಕ್ವಾ ಇಂಡಸ್ಟ್ರೀಸ್’ನಲ್ಲಿ ಸತ್ಯಂ ಎಂಬ ಹೆಸರಿನ ಸೌಮ್ಯ ಸ್ವಭಾವದ ಸೂಪರ್‌ವೈಸರ್ ಆಗಿ ಕೆಲಸ ಮಾಡುವ ಅವರು, ಎಲ್ಲರೂ ತೆರಳಿದ ನಂತರ ನೀರಿನಲ್ಲಿ ಬಚ್ಚಿಟ್ಟಿದ್ದ ಬಂದೂಕುಗಳನ್ನು ಹೊರತೆಗೆಯುತ್ತಾರೆ. ಗ್ಲಿಂಪ್ಸ್‌ನಲ್ಲಿ ಗೆಟಪ್ ಶ್ರೀನು ಎಸೆದ ಕೀಚೈನ್ ನೀರಿನಲ್ಲಿ ಬೀಳಲಿದ್ದು, ಅದರ ಮೇಲೆ ‘ಐ ಲವ್ ಯೂ ಡ್ಯಾಡಿ’ ಎಂಬ ಅಕ್ಷರಗಳಿವೆ. ಇದನ್ನು ನೋಡಿದರೆ ಚಿತ್ರದಲ್ಲಿ ತಂದೆ-ಮಗಳ ಸೆಂಟಿಮೆಂಟ್ ಪ್ರಮುಖ ಹೈಲೈಟ್ ಆಗಿರಲಿದೆ ಎಂಬುದು ಸ್ಪಷ್ಟವಾಗುತ್ತದೆ. ಆರಂಭದಲ್ಲಿ ಸೌಮ್ಯವಾಗಿ ಕಾಣುವ ಚಿರಂಜೀವಿ, ಗ್ಲಿಂಪ್ಸ್‌ನ ಕೊನೆಯಲ್ಲಿ ಗುಂಡಿನ ಮಳೆಯೊಂದಿಗೆ ಶತ್ರುಗಳನ್ನು ಧ್ವಂಸ ಮಾಡುವ ಮಾಸ್ ಅವತಾರದಲ್ಲಿ ಅಬ್ಬರಿಸಿದ್ದಾರೆ. ಈ ಚಿತ್ರವನ್ನು 2027ರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ, ಜನವರಿ 13ರಂದು ತೆರೆಗೆ ತರುವುದಾಗಿ ಚಿತ್ರತಂಡ ಘೋಷಿಸಿದೆ. ಈ ಹಿಂದೆ ಸಂಕ್ರಾಂತಿ ಉಡುಗೊರೆಯಾಗಿ ಬಂದಿದ್ದ ‘ವಾಲ್ತೇರು ವೀರಯ್ಯ’ ₹200 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಇಂಡಸ್ಟ್ರಿ ಹಿಟ್ ಎನಿಸಿಕೊಂಡಿತ್ತು. ಮೆಗಾಸ್ಟಾರ್ ಅವರ ವಿಂಟೇಜ್ ಮಾಸ್ ಎನರ್ಜಿಯನ್ನು ತೆರೆಯ ಮೇಲೆ ತರುವಲ್ಲಿ ನಿರ್ದೇಶಕ ಬಾಬಿ ಸಂಪೂರ್ಣ ಯಶಸ್ವಿಯಾಗಿದ್ದರು. ಇದೀಗ ಮತ್ತೊಮ್ಮೆ ಈ ಜೋಡಿ ಒಂದಾಗಿರುವುದರಿಂದ ಚಿತ್ರರಂಗದಲ್ಲಿ ಭಾರಿ ನಿರೀಕ್ಷೆ ಮೂಡಿದೆ. ಚಿತ್ರದ ಶೇಕಡಾ 50ಕ್ಕೂ ಹೆಚ್ಚು ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದ್ದು, ಸುಮಾರು 40 ದಿನಗಳ ಶೆಡ್ಯೂಲ್‌ ಮುಕ್ತಾಯವಾಗಿದೆ. ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಈ ಪ್ರಾಜೆಕ್ಟ್ ಮೂಲಕ ಟಾಲಿವುಡ್‌ಗೆ ಪಾದಾರ್ಪಣೆ ಮಾಡುತ್ತಿದೆ. ನಿರ್ಮಾಪಕ ವೆಂಕಟ್ ಕೆ. ನಾರಾಯಣ್ ಅತ್ಯಂತ ಅದ್ಧೂರಿ ಬಜೆಟ್‌ನಲ್ಲಿ, ಯಾವುದೇ ರಾಜಿ ಇಲ್ಲದೆ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಹೈ-ವೋಲ್ಟೇಜ್ ಆ್ಯಕ್ಷನ್ ಸಿನಿಮಾದಲ್ಲಿ ಮಲಯಾಳಂ ನಟಿ ಅನಸ್ವರ ರಾಜನ್ ಹಾಗೂ ನಿವೇದಾ ಪೇತುರಾಜ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಎಸ್. ಥಮನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. #movies #2026
𝗗𝗶𝗚𝗶𝗧𝗮𝗟 𝗠𝗘𝗗𝗜𝗔 🌍 ಸುದ್ದಿ ಪ್ರಪಂಚ
4.5K views
14 days ago
ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು ✨ #2026
𝗗𝗶𝗚𝗶𝗧𝗮𝗟 𝗠𝗘𝗗𝗜𝗔 🌍 ಸುದ್ದಿ ಪ್ರಪಂಚ
2K views
20 days ago
ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು 🇮🇳✨ #2026
𝗗𝗶𝗚𝗶𝗧𝗮𝗟 𝗠𝗘𝗗𝗜𝗔 🌍 ಸುದ್ದಿ ಪ್ರಪಂಚ
601 views
24 days ago
*ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !* ಕನ್ನಡ ಚಿತ್ರರಂಗದ ಖ್ಯಾತ ನಟ, ‘ನಟರಾಕ್ಷಸ’ ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ‘ಅಣ್ಣ ಫ್ರಮ್‌ ಮೆಕ್ಸಿಕೋ’ (Anna From Mexico) ಸಿನಿಮಾದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ. ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಾಲು ಸಾಲು ರಜಾದಿನಗಳ ಸಂಭ್ರಮವನ್ನು ದುಪ್ಪಟ್ಟು ಮಾಡಲು, ಈ ಸಿನಿಮಾ ಮುಂಬರುವ ಡಿಸೆಂಬರ್ 24ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ವರ್ಷಾಂತ್ಯಕ್ಕೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ಮನರಂಜನೆ ನೀಡಲು ಸಜ್ಜಾಗಿರುವ ಈ ಸುದ್ದಿ ಡಾಲಿ ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಹಾಗೂ ಸಂತಸ ಮೂಡಿಸಿದೆ. ಈ ಚಿತ್ರದ ವಿಶೇಷವೆಂದರೆ, 2021ರ ಡಿಸೆಂಬರ್‌ ತಿಂಗಳಲ್ಲಿ ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ನಲ್ಲಿ ಸೂಪರ್ ಡೂಪರ್ ಹಿಟ್ ಆಗಿದ್ದ 'ಬಡವ ರಾಸ್ಕಲ್' ಸಿನಿಮಾದ ಜೋಡಿ ಈಗ ಬರೋಬ್ಬರಿ ಐದು ವರ್ಷಗಳ ಬಳಿಕ ಮತ್ತೆ ಒಂದಾಗಿದೆ. 'ಬಡವ ರಾಸ್ಕಲ್' ಚಿತ್ರದ ಮೂಲಕವೇ ಧನಂಜಯ್ ತಮ್ಮ 'ಡಾಲಿ ಪಿಕ್ಚರ್ಸ್' ಬ್ಯಾನರ್ ಅಡಿಯಲ್ಲಿ ನಿರ್ಮಾಪಕರಾಗಿ ಬಡ್ತಿ ಪಡೆದು ಯಶಸ್ಸು ಕಂಡಿದ್ದರು. ಆ ಚಿತ್ರವನ್ನು ಯಶಸ್ವಿಯಾಗಿ ನಿರ್ದೇಶಿಸಿದ್ದ ಶಂಕರ್ ಗುರು, ಈಗ ಎರಡನೇ ಬಾರಿಗೆ ಧನಂಜಯ್ ಅವರಿಗೆ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ಮೂಲಕ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಹಿಟ್ ಜೋಡಿ ಮತ್ತೆ ಅದೇ ಡಿಸೆಂಬರ್ ತಿಂಗಳಲ್ಲೇ ಒಂದಾಗಿ ಚಿತ್ರಮಂದಿರಕ್ಕೆ ಎಂಟ್ರಿ ನೀಡುತ್ತಿರುವುದು ಸಿನಿಪ್ರಿಯರಲ್ಲಿ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ಪಕ್ಕಾ ಆಕ್ಷನ್ ಜೊತೆಗೆ ಫ್ಯಾಮಿಲಿ ಎಂಟರ್‌ಟೇನರ್ ಎಲಿಮೆಂಟ್ಸ್‌ ಹೊಂದಿರುವ ಈ ಸಿನಿಮಾದಲ್ಲಿ ಧನಂಜಯ್‌ಗೆ ನಾಯಕಿಯಾಗಿ ಸ್ಯಾಂಡಲ್‌ವುಡ್‌ನ ಉದಯೋನ್ಮುಖ ನಟಿ ರೀಷ್ಮಾ ನಾಣಯ್ಯ ಜೋಡಿಯಾಗಿದ್ದಾರೆ. ಉಳಿದಂತೆ ರಂಗಾಯಣ ರಘು, ನಾಗಭೂಷಣ ಹಾಗೂ ಪೂರ್ಣಚಂದ್ರ ಮೈಸೂರು ಸೇರಿದಂತೆ ಬಲವಾದ ತಾರಾಗಣವೇ ಚಿತ್ರದಲ್ಲಿದ್ದು, ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ವಿಶೇಷವೆಂದರೆ, ನಟ ಲೂಸ್ ಮಾದ ಯೋಗಿ ಅವರು ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಐರಾ ಫಿಲ್ಮ್ಸ್ ಹಾಗೂ ರಾಯಲ ಸ್ಟುಡಿಯೋಸ್ ಜಂಟಿ ಬ್ಯಾನರ್‌ನಡಿ ಅದ್ಧೂರಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಚಿತ್ರಕ್ಕೆ ವಾಸುಕಿ ವೈಭವ್‌ ಅವರ ಸಂಗೀತ ನಿರ್ದೇಶನವಿದ್ದು, ಹಿನ್ನೆಲೆ ಸಂಗೀತ ಹಾಗೂ ಹಾಡುಗಳ ಮೇಲೆ ಅಪಾರ ನಿರೀಕ್ಷೆಯಿದೆ. ತಾಂತ್ರಿಕ ಬಳಗದಲ್ಲಿ ಅಜಯ್ ಅವರ ಸಂಕಲನ ಹಾಗೂ ಗುಣ ಅವರ ಕಲಾ ನಿರ್ದೇಶನವಿದ್ದು, ಅದ್ಧೂರಿ ಮೇಕಿಂಗ್‌ನೊಂದಿಗೆ ಸಿನಿಮಾ ಡಿಸೆಂಬರ್ 24ಕ್ಕೆ ಪ್ರೇಕ್ಷಕರ ಮುಂದೆ ಬರಲು ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ. #movies #2026
𝗗𝗶𝗚𝗶𝗧𝗮𝗟 𝗠𝗘𝗗𝗜𝗔 🌍 ಸುದ್ದಿ ಪ್ರಪಂಚ
665 views
28 days ago
*'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ 'ದಿ ಪ್ಯಾರಡೈಸ್' ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!* ಹೈದರಾಬಾದ್: 'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ ಬಹುನಿರೀಕ್ಷಿತ ಪ್ಯಾನ್-ವರ್ಲ್ಡ್ ಸಿನಿಮಾ 'ದಿ ಪ್ಯಾರಡೈಸ್' (The Paradise) ಮಾಸ್ ಹಾಗೂ ಸ್ಫೋಟಕ ಟೀಸರ್ ಅನ್ನು ಚಿತ್ರತಂಡ ಇತ್ತೀಚೆಗಷ್ಟೇ ಅನಾವರಣಗೊಳಿಸಿದೆ. 'ದಸರಾ' ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ಶ್ರೀಕಾಂತ್ ಒಡೆಲ ಹಾಗೂ ನಾನಿ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಈ ಸಿನಿಮಾ, ಟೀಸರ್ ಮೂಲಕ ಪ್ರೇಕ್ಷಕರಲ್ಲಿ ತೀವ್ರ ಕೌತುಕವನ್ನು ಹೆಚ್ಚಿಸಿದೆ. ಎಸ್‌ಎಲ್‌ವಿ ಸಿನೆಮಾಸ್ ಬ್ಯಾನರ್ ಅಡಿಯಲ್ಲಿ ಸುಧಾಕರ್ ಚೆರುಕೂರಿ ಈ ಚಿತ್ರವನ್ನು ಅತ್ಯಂತ ಬೃಹತ್ ವೆಚ್ಚದಲ್ಲಿ ನಿರ್ಮಿಸುತ್ತಿದ್ದಾರೆ. ದೌರ್ಜನ್ಯದ ವಿರುದ್ಧ ಧ್ವನಿಯೆತ್ತುವ 'ಜಡಾಲ್' ಈ ಟೀಸರ್ ಪ್ರೇಕ್ಷಕರನ್ನು ಕತ್ತಲೆ, ದೌರ್ಜನ್ಯ ಮತ್ತು ಹಿಂಸೆಯಿಂದ ಕೂಡಿದ ಕಠೋರ ಜಗತ್ತಿಗೆ ಕರೆದೊಯ್ಯುತ್ತದೆ. ಈ ಶೋಷಿತರ ಪರವಾಗಿ ಮತ್ತು ಶಕ್ತಿಶಾಲಿಗಳ ಪಾಲಿನ ಸಿಂಹಸ್ವಪ್ನವಾಗಿ 'ಜಡಾಲ್' ಎಂಬ ಕ್ರಾಂತಿಕಾರಿ ಪಾತ್ರದಲ್ಲಿ ನಾನಿ ಕಾಣಿಸಿಕೊಂಡಿದ್ದಾರೆ. ಚಿತ್ರದ ದೃಶ್ಯ ಕಥನದಲ್ಲಿ ಪದೇಪದೇ ಕಾಣಿಸಿಕೊಳ್ಳುವ ಕಾಗೆಯ ಸಂಕೇತವು ತಲೆಮಾರುಗಳಿಂದ ಮೂಲೆಗುಂಪಾದ ಜನರ ಆಕ್ರೋಶವನ್ನು ಬಿಂಬಿಸುತ್ತದೆ. ಕೊಡಲಿ ಕಾಳಗ, ತೀವ್ರ ಸ್ವರೂಪದ ಜೈಲು ಫೈಟ್, ಭೀಕರ ಖಡ್ಗಕಾಳಗ, ಮುಷ್ಟಿಕಾಳಗ ಹಾಗೂ ಸರಣಿ ಸ್ಫೋಟಗಳ ದೃಶ್ಯಗಳು ಹೈಲೈಟ್ ಆಗಿವೆ. ಗುರುತಿಸಲಾಗದ ಗೆಟಪ್‌ನಲ್ಲಿ ನಾನಿ! ಈ ಚಿತ್ರದಲ್ಲಿ ನಟ ನಾನಿ ಸಂಪೂರ್ಣ ವಿಭಿನ್ನ ಹಾಗೂ ಭಯ ಹುಟ್ಟಿಸುವ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದು, ಅವರ ಶಕ್ತಿಯುತ ಸಂಭಾಷಣೆ ಮತ್ತು ಆಕ್ರೋಶದ ನಟನೆ ಪ್ರೇಕ್ಷಕರನ್ನು ರಂಜಿಸಿದೆ. ಈ ಚಿತ್ರದಲ್ಲಿ ನಟ ಮೋಹನ್ ಬಾಬು ಅವರ ಎಂಟ್ರಿ ಖಡಕ್‌ ಆಗಿದ್ದು, ರಾಘವ್ ಜುಯಲ್, ಕಾಯಾದು ಲೋಹರ್, ಸೊನಾಲಿ ಕುಲಕರ್ಣಿ ಮತ್ತು ಸಂಪೂರ್ಣೇಶ್ ಬಾಬು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅನಿರುದ್ಧ್ ರವಿಚಂದರ್ ಅವರ ಸಂಗೀತ ಸಖತ್‌ ಹೈಲೈಟ್‌ ಆಗಿದೆ. ಶ್ರೀಕಾಂತ್ ಒಡೆಲ ನಿರ್ದೇಶನದ ಈ ಸಿನಿಮಾವನ್ನು ಸುಧಾಕರ್ ಚೆರುಕೂರಿ ನಿರ್ಮಾಣ ಮಾಡಿದ್ದಾರೆ. ಛಾಯಾಗ್ರಹಣವನ್ನು ಸಿ.ಹೆಚ್. ಸಾಯಿ ಮಾಡಿದ್ದು, ಅವಿನಾಶ್ ಕೊಲ್ಲಾ ಅವರು ಪ್ರೊಡಕ್ಷನ್ ಡಿಸೈನರ್‌ ಆಗಿ ಕೆಲಸ ಮಾಡಿದ್ದಾರೆ. ಬೃಹತ್ ದೃಶ್ಯ ವೈಭವದೊಂದಿಗೆ ಮೂಡಿಬರುತ್ತಿರುವ 'ದಿ ಪ್ಯಾರಡೈಸ್' ಸಿನಿಮಾವು ಬರುವ ಸೆಪ್ಟೆಂಬರ್ 24 ರಂದು ಪ್ರಪಂಚದಾದ್ಯಂತ ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. #movies #2026
𝗗𝗶𝗚𝗶𝗧𝗮𝗟 𝗠𝗘𝗗𝗜𝗔 🌍 ಸುದ್ದಿ ಪ್ರಪಂಚ
675 views
1 months ago
*ಸೆಪ್ಟೆಂಬರ್ 12, 13ಕ್ಕೆ ಸೈಮಾ (SIIMA) ಹಬ್ಬ: ಬೆಂಗಳೂರಿನಲ್ಲಿ ಅದ್ಧೂರಿ ಪತ್ರಿಕಾಗೋಷ್ಠಿ!* *ಬೆಂಗಳೂರು:* ದಕ್ಷಿಣ ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಷ್ಠಿತ ಹಾಗೂ ಜನಪ್ರಿಯ ಪ್ರಶಸ್ತಿ ಸಮಾರಂಭವಾದ *'ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್' (SIIMA 2026)* ಮತ್ತೆ ಬಂದಿದೆ. ಈ ಬಾರಿಯ 14ನೇ ಆವೃತ್ತಿಯ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭವು ಬರುವ *ಸೆಪ್ಟೆಂಬರ್ 12 ಮತ್ತು 13 ರಂದು* ವೈಭವಯುತವಾಗಿ ನಡೆಯಲಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಅದ್ಧೂರಿ ಪತ್ರಿಕಾಗೋಷ್ಠಿಯಲ್ಲಿ ಸೈಮಾ ಅಧ್ಯಕ್ಷೆ *ಬೃಂದಾ ಪ್ರಸಾದ್*, ನಟ *ಶ್ರೀಮುರಳಿ*, ನಟಿಯರಾದ *ಪ್ರಣೀತಾ ಸುಭಾಷ್*, *ಶಾನ್ವಿ ಶ್ರೀವಾಸ್ತವ* ಹಾಗೂ *ಫಾರಿಯಾ ಅಬ್ದುಲ್ಲಾ* ಉಪಸ್ಥಿತರಿದ್ದು ಕಾರ್ಯಕ್ರಮದ ಮಾಹಿತಿಯನ್ನು ಹಂಚಿಕೊಂಡರು. *ಕನ್ನಡ ಚಿತ್ರರಂಗ ಪ್ರತಿನಿಧಿಸುತ್ತಿರುವುದಕ್ಕೆ ಹೆಮ್ಮೆಯಿದೆ: ರೋರಿಂಗ್ ಸ್ಟಾರ್ ಶ್ರೀಮುರಳಿ* ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ನಟ ಶ್ರೀಮುರಳಿ, "ಈ ಬಾರಿ ಸೈಮಾ ಕಡೆಯಿಂದ ನನಗೆ ಒಂದು ಮುಖ್ಯ ಜವಾಬ್ದಾರಿ ಸಿಕ್ಕಿದ್ದು, ನಮ್ಮ ಕನ್ನಡ ಚಿತ್ರರಂಗವನ್ನು ಪ್ರತಿನಿಧಿಸುತ್ತಿರುವುದಕ್ಕೆ ತುಂಬಾ ಸಂತೋಷವಾಗುತ್ತಿದೆ. ಈ ಆವೃತ್ತಿಯು ಅತ್ಯಂತ ವೈಭವಯುತವಾಗಿ ಮೂಡಿಬರಲಿದೆ ಎಂಬ ಭರವಸೆ ನನಗಿದೆ" ಎಂದರು. ತಮ್ಮ ಕುಟುಂಬ ಹಾಗೂ ಸೈಮಾ ನಡುವಿನ ಸುದೀರ್ಘ ಬಾಂಧವ್ಯವನ್ನು ಸ್ಮರಿಸಿದ ಅವರು, "ಸೈಮಾ ನಮಗೆ ಹೊಸದೇನಲ್ಲ; ಕಳೆದ 14 ವರ್ಷಗಳಿಂದ ಸೈಮಾ ಜೊತೆ ನಮಗೆ ಸುದೀರ್ಘ ಹಾಗೂ ಆತ್ಮೀಯ ನಂಟಿದೆ. ಅದರಲ್ಲೂ ನಮ್ಮ ಕುಟುಂಬಕ್ಕೂ ಸೈಮಾಗೂ ವಿಶೇಷವಾದ ಬಾಂಧವ್ಯವಿದೆ. ನನ್ನ ಕಸಿನ್ ಅಪ್ಪು ಮಾಮ ಅವರು ನಾಲ್ಕು ಬಾರಿ, ಶಿವಣ್ಣ ಮಾಮ ಅವರು ಮೂರು ಬಾರಿ ಇಲ್ಲಿ ಪ್ರಶಸ್ತಿ ಪಡೆದಿದ್ದಾರೆ. ಹಾಗೆಯೇ ನಮ್ಮ ಅಣ್ಣ (ವಿಜಯ್ ರಾಘವೇಂದ್ರ) ಎರಡು ಬಾರಿ ಕಾರ್ಯಕ್ರಮದ ನಿರೂಪಣೆ ಮಾಡಿದ್ದಾರೆ. ನನಗೂ 'ಮಫ್ತಿ' ಚಿತ್ರದ ನಟನೆಗಾಗಿ 'ಬೆಸ್ಟ್ ಲೀಡ್ (ಕ್ರಿಟಿಕ್)' ಪ್ರಶಸ್ತಿ ಲಭಿಸಿತ್ತು" ಎಂದು ನೆನಪಿಸಿಕೊಂಡರು. "ಸಾಮಾನ್ಯವಾಗಿ ನಾವು ಚಿತ್ರತಾರೆಯರನ್ನು ಕೇವಲ ಬೆಳ್ಳಿಪರದೆಯ ಮೇಲೆ ನೋಡುತ್ತೇವೆ. ಆದರೆ ಸೈಮಾ ಎಲ್ಲಾ ಭಾಷೆಯ ಸ್ಟಾರ್‌ಗಳನ್ನು ಒಂದೇ ವೇದಿಕೆಯಡಿ ತಂದು ಅದ್ಭುತ ಕಾರ್ಯಕ್ರಮವನ್ನು ರೂಪಿಸುತ್ತದೆ. ಇದನ್ನು ಪ್ರತಿಯೊಂದು ರಾಜ್ಯದ ಹಾಗೂ ಪ್ರಾದೇಶಿಕ ರಂಗದ ಪ್ರೇಕ್ಷಕರೂ ಸಂಭ್ರಮಿಸುತ್ತಾರೆ. ಒಬ್ಬ ಕಲಾವಿದನಿಗೆ ಪ್ರಶಸ್ತಿ ಎನ್ನುವುದು ಆತನ ಶ್ರಮಕ್ಕೆ ಸಿಗುವ ದೊಡ್ಡ ಗೌರವ ಹಾಗೂ ಗುರುತಿಸುವಿಕೆ. ಈ 14ನೇ ಆವೃತ್ತಿಯ ಸೈಮಾ ಸಮಾರಂಭವೂ ಸಹ ಅಷ್ಟೇ ಅಚ್ಚುಕಟ್ಟಾಗಿ ಮತ್ತು ವೈಭವವಾಗಿ ನಡೆಯಲಿದೆ" ಎಂದು ಶುಭ ಹಾರೈಸಿದರು. *ಸೈಮಾ ಜಾಗತಿಕ ಮಟ್ಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲಿದೆ: ಅಧ್ಯಕ್ಷೆ ಬೃಂದಾ ಪ್ರಸಾದ್* ಸೈಮಾ ಅಧ್ಯಕ್ಷೆ ಬೃಂದಾ ಪ್ರಸಾದ್ ಮಾತನಾಡಿ, "ಸೈಮಾ ಸಂಸ್ಥೆಯು ಮುಖ್ಯವಾಗಿ ನಂಬಿಕೆ, ಬದ್ಧತೆ ಮತ್ತು ನಿರಂತರತೆಯ ಭದ್ರ ಬುನಾದಿಯ ಮೇಲೆ ನಿರ್ಮಾಣವಾಗಿದೆ. ಇಂದು ಸೈಮಾ ಕೇವಲ ದಕ್ಷಿಣ ಭಾರತಕ್ಕೆ ಮಾತ್ರ ಸೀಮಿತವಾಗದೆ, ಇಡೀ ದೇಶದಲ್ಲೇ ಅತ್ಯಂತ ಜನಪ್ರಿಯ ಹಾಗೂ ಗೌರವಾನ್ವಿತ ಪ್ರಶಸ್ತಿ ಸಮಾರಂಭವಾಗಿ ಬೆಳೆದು ನಿಂತಿದೆ" ಎಂದು ಹರ್ಷ ವ್ಯಕ್ತಪಡಿಸಿದರು. "ನಮ್ಮ ಈ ಸುದೀರ್ಘ ಪಯಣದಲ್ಲಿ ಸಾಥ್ ನೀಡಿರುವ ಪಾಲುದಾರರು, ಚಲನಚಿತ್ರರಂಗದ ಗಣ್ಯರು, ಮಾಧ್ಯಮ ಮಿತ್ರರು ಹಾಗೂ ಪ್ರತಿಯೊಬ್ಬ ಸಹಯೋಗಿಗಳ ಬೆಂಬಲಕ್ಕೆ ನಾವು ಸದಾ ಆಭಾರಿಯಾಗಿದ್ದೇವೆ. ನಿಮ್ಮ ಸಹಕಾರವಿಲ್ಲದೆ ಇಂತಹ ಬೃಹತ್ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲು ಸಾಧ್ಯವಾಗುತ್ತಿರಲಿಲ್ಲ. ಈ ವರ್ಷವೂ ನಾವು 'Maruthi Suzuki NEXA' ಜೊತೆ ಸತತ 4ನೇ ವರ್ಷದ ಸಹಯೋಗವನ್ನು ಹೊಂದಿದ್ದು, ಪಾರ್ಥೋ ಬ್ಯಾನರ್ಜಿ ಸರ್ ಅವರಿಗೆ ನಮ್ಮ ವಿಶೇಷ ಧನ್ಯವಾದಗಳನ್ನು ಅರ್ಪಿಸುತ್ತೇನೆ" ಎಂದರು. "ನಮ್ಮ ಮಾಧ್ಯಮ ಮಿತ್ರರಿಗೆ ಹಾಗೂ ಚಿತ್ರರಂಗದ ಪ್ರಮುಖ ಗಣ್ಯರಾದ ಶ್ರೀಮುರಳಿ ಸರ್, ಪ್ರಣೀತಾ, ಶಾನ್ವಿ ಮತ್ತು ಫಾರಿಯಾ ಅವರಿಗೆ ಹೃದಯಪೂರ್ವಕ ಕೃತಜ್ಞತೆಗಳು. ಈ ವರ್ಷವೂ ಸಹ ದಕ್ಷಿಣ ಭಾರತೀಯ ಚಿತ್ರರಂಗದ ವೈವಿಧ್ಯತೆ ಹಾಗೂ ಒಗ್ಗಟ್ಟನ್ನು ಜಾಗತಿಕ ಮಟ್ಟದ ಅಭಿಮಾನಿಗಳಿಗೆ ತಲುಪಿಸಲು ಮತ್ತು ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸಲು ಸೈಮಾ ಸಂಪೂರ್ಣವಾಗಿ ಸಜ್ಜಾಗಿದೆ" ಎಂದು ತಿಳಿಸಿದರು. #movies #2026
𝗗𝗶𝗚𝗶𝗧𝗮𝗟 𝗠𝗘𝗗𝗜𝗔 🌍 ಸುದ್ದಿ ಪ್ರಪಂಚ
2.9K views
1 months ago
Sri Venkateswara Swamy Temple ✨ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ✨ #sri #venkateswara #swamy #temple #mavahalli #village #bangarapet #taluk #kolar #district #karnataka #digitalmedia #suddhiprapancha #Kannada #youtubeshorts #viralshorts #shortsfeed #shorts #reels #vairal #video #bangalore #karnataka #india #Viralvideo #2026 #ಶ್ರೀ #ವೆಂಕಟೇಶ್ವರ #ಸ್ವಾಮಿ #ದೇವಸ್ಥಾನ #ಮಾವಹಳ್ಳಿ #ಗ್ರಾಮ #ಬಂಗಾರಪೇಟೆ #ತಾಲ್ಲೂಕು #ಕೋಲಾರ #ಜಿಲ್ಲೆ #ಕರ್ನಾಟಕ #ಡಿಜಿಟಲ್‌ಮೀಡಿಯಾ #ಸುದ್ಧಿಪ್ರಪಂಚ #ಕನ್ನಡ #ಯೂಟ್ಯೂಬ್‌ಶಾರ್ಟ್ಸ್ #ಶಾರ್ಟ್‌ಫೀಡ್ #ವೈರಲ್‌ಶಾರ್ಟ್ಸ್ #ಶಾರ್ಟ್ಸ್ #ರೀಲ್ಸ್ #ವೈರಲ್ #ವೀಡಿಯೋ #ಬೆಂಗಳೂರು #ಕರ್ನಾಟಕ #ಭಾರತ #ವೈರಲ್ವೀಡಿಯೋ #2026 ABOUT US 🙏 @DIGITAL MEDIA SUDDHI PRAPANCHA KANNADA ENTRTANMENT & NEWS ✨🌎🇮🇳📡📺🎬🎥🎙️⚽🥅☺️✨ KINDLY FOLLOW & LIKE US ON SOCIAL MEDIA PLATFORMS Subscribe our channel for the latest news updates : https://youtube.com/@digital.media.suddhi.prapancha #2026 Disclaime ~ digitalmedia suddhiprapancha is committed to remaining unbiased and focused on serving the public. As a news channel, our primary goal is to deliver news that informs and engages our audience. The content presented on digitalmedia suddhiprapancha is intended for entertainment and educational purposes only. Occasionally, we may incorporate content from other creators solely for educational and informational use under fair use policy guidelines. Our intentions are transparent and are never meant to harm anyone's beliefs or values ☺️🙏 ಹಕ್ಕು ನಿರಾಕರಣೆ ~ ಡಿಜಿಟಲ್ ಮೀಡಿಯಾ ಸುದ್ಧಿಪ್ರಪಂಚವು ಪಕ್ಷಪಾತವಿಲ್ಲದೆ ಉಳಿಯಲು ಮತ್ತು ಸಾರ್ವಜನಿಕರಿಗೆ ಸೇವೆ ಸಲ್ಲಿಸುವತ್ತ ಗಮನಹರಿಸುತ್ತದೆ. ಸುದ್ದಿ ವಾಹಿನಿಯಾಗಿ, ನಮ್ಮ ಪ್ರಾಥಮಿಕ ಗುರಿ ಪ್ರೇಕ್ಷಕರಿಗೆ ಮಾಹಿತಿ ನೀಡುವ ಮತ್ತು ತೊಡಗಿಸಿಕೊಳ್ಳುವ ಸುದ್ದಿಗಳನ್ನು ತಲುಪಿಸುವುದು. ಡಿಜಿಟಲ್ ಮೀಡಿಯಾ ಸುದ್ಧಿಪ್ರಪಂಚದಲ್ಲಿ ಪ್ರಸ್ತುತಪಡಿಸಲಾದ ವಿಷಯವು ಮನರಂಜನೆ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ ಉದ್ದೇಶಿಸಲಾಗಿದೆ. ಸಾಂದರ್ಭಿಕವಾಗಿ, ನ್ಯಾಯಯುತ ಬಳಕೆಯ ನೀತಿ ಮಾರ್ಗಸೂಚಿಗಳ ಅಡಿಯಲ್ಲಿ ಶೈಕ್ಷಣಿಕ ಮತ್ತು ಮಾಹಿತಿ ಬಳಕೆಗಾಗಿ ಮಾತ್ರ ನಾವು ಇತರ ಸೃಷ್ಟಿಕರ್ತರಿಂದ ವಿಷಯವನ್ನು ಸೇರಿಸಿಕೊಳ್ಳಬಹುದು. ನಮ್ಮ ಉದ್ದೇಶಗಳು ಪಾರದರ್ಶಕವಾಗಿರುತ್ತವೆ ಮತ್ತು ಯಾರ ನಂಬಿಕೆಗಳು ಅಥವಾ ಮೌಲ್ಯಗಳಿಗೆ ಎಂದಿಗೂ ಹಾನಿ ಮಾಡುವ ಉದ್ದೇಶವನ್ನು ಹೊಂದಿಲ್ಲ ☺️🙏 🔔 Subscribe Our YouTube Channel : @ Digital Media Suddhiprapancha Kannada #2026
𝗗𝗶𝗚𝗶𝗧𝗮𝗟 𝗠𝗘𝗗𝗜𝗔 🌍 ಸುದ್ದಿ ಪ್ರಪಂಚ
1.9K views
3 months ago
*ಜೂನ್ 5ಕ್ಕೆ Zee5 ಕನ್ನಡದಲ್ಲಿ KD-ದಿ ಡೆವಿಲ್ ಸಿನಿಮಾ ಸ್ಟ್ರೀಮಿಂಗ್* *KD-ದಿ ಡೆವಿಲ್ ಒಟಿಟಿ ಎಂಟ್ರಿಗೆ ರೆಡಿ..ಎಲ್ಲಿ..ಯಾವಾಗ ಸ್ಟ್ರೀಮಿಂಗ್ ಆಗಲಿದೆ ಧ್ರುವ ಸಿನಿಮಾ* ಆಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಪ್ರೇಮ್‌ ನಿರ್ದೇಶನದ KD-ದಿ ಡೆವಿಲ್ ಸಿನಿಮಾ ಒಟಿಟಿ ಎಂಟ್ರಿಗೆ ಸಜ್ಜಾಗಿದೆ. ಜೂನ್ 5ರಂದು zee5ನಲ್ಲಿ ಸ್ಟ್ರೀಮಿಂಗ್ ಆಗಲಿದೆ. ಕನ್ನಡದ ಜೊತೆಗೆ ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಚಿತ್ರ ವೀಕ್ಷಣೆಗೆ ಲಭ್ಯವಿರಲಿದೆ. ಕೆಡಿ ಸಿನಿಮಾದಲ್ಲಿ ದೊಡ್ಡ ತಾರಾಬಳಗವಿದೆ. ಬಾಲಿವುಡ್‌ ನಟ ಸಂಜಯ್ ದತ್, ಶಿಲ್ಪಾ ಶೆಟ್ಟಿ, ಡಾ.ವಿ. ರವಿಚಂದ್ರನ್, ರಮೇಶ್ ಅರವಿಂದ್, ರೀಷ್ಮಾ ನಾಣಯ್ಯ, ಜಿಶು ಸೇನ್‌ಗುಪ್ತಾ, ನೋರಾ ಫತೇಹಿ ಮತ್ತು ಅತಿಥಿ ಪಾತ್ರಕ್ಕೆ ಬಣ್ಣ ಹಚ್ಚಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸೇರಿದಂತೆ ಅನೇಕರು ನಟಿಸಿದ್ದಾರೆ. 70ರ ದಶಕದ ಕಾಲಘಟ್ಟದ ಕಥೆಯನ್ನು ಕೆಡಿಯಲ್ಲಿ ಪ್ರೇಮ್ ಕಟ್ಟಿಕೊಟ್ಟಿದ್ದಾರೆ. ಅಣ್ಣ-ತಮ್ಮನ ಭಾವನಾತ್ಮಕ ಬಾಂಧವ್ಯ, ರಾಜಕೀಯ ಪೈಪೋಟಿ ಚಿತ್ರದಲ್ಲಿದೆ.ಅಣ್ಣನೇ ಸರ್ವಸ್ವ ಎಂದುಕೊಂಡು ಬದುಕುತ್ತಿರುವ ಕಾಳಿದಾಸ ಅಲಿಯಾಸ್ ಕೆಡಿ ಎಂಬಾತನ ಕಥೆ ಈ ಸಿನಿಮಾದಲ್ಲಿದೆ. ಧ್ರುವ ಸರ್ಜಾ ಅವರ ಪಾತ್ರದ ಸುತ್ತ ಆ ಕಾಲ ಘಟ್ಟದ ಕಥೆಗಳು ತೆರೆದುಕೊಳ್ಳುತ್ತಾ ಸಾಗುತ್ತೆ. ಇದರ ಜೊತೆಗೆ ಆಕ್ಷನ್‌ ಮತ್ತು ಎಮೋಷನ್‌ ಎರಡನ್ನು ಬ್ಲೆಂಡ್‌ ಮಾಡಿ, ವೀಕ್ಷಕರಿಗೆ ಭರ್ಜರಿ ಮನರಂಜನೆಯ ಭೋಜನ ಪ್ರೇಮ್‌ ಬಡಿಸಿದ್ದಾರೆ. ಸಂಗೀತ ಸಂಯೋಜಕ ಅರ್ಜುನ್ ಜನ್ಯ ಮ್ಯೂಸಿಕ್‌, ವಿಲಿಯಂ ಡೇವಿಡ್ ಛಾಯಾಗ್ರಹಣ ಚಿತ್ರಕ್ಕಿದೆ. ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಕೆಡಿ ಸಿನಿಮಾ ನಿರ್ಮಾಣ ಮಾಡಿದೆ. #2026 #movies
𝗗𝗶𝗚𝗶𝗧𝗮𝗟 𝗠𝗘𝗗𝗜𝗔 🌍 ಸುದ್ದಿ ಪ್ರಪಂಚ
1.2K views
3 months ago
*ಬೇಲ್ ಫಸ್ಟ್ ಲುಕ್ ರಿಲೀಸ್...ಸಾಲ್ಟ್ ಅಂಡ್‌ ಪೆಪ್ಪರ್ ಲುಕ್ ಶಿವಣ್ಣ..ವರಮಹಾಲಕ್ಷ್ಮಿ ಹಬ್ಬ ಸಿನಿಮಾ ರಿಲೀಸ್* *'ಬೇಲ್'ಗಾಗಿ ಹೊಸ ಅವತಾರ ತಾಳಿದ ಕರುನಾಡ ಚಕ್ರವರ್ತಿ... ಶಿವಣ್ಣ-ಕೆವಿಎನ್-ಪವನ್ ಒಡೆಯರ್ ಸಿನಿಮಾ ವರಮಹಾಲಕ್ಷ್ಮಿ ಹಬ್ಬಕ್ಕೆ ಬಿಡುಗಡೆ* ಕೆವಿಎನ್ ನಿರ್ಮಾಣ ಮಾಡುತ್ತಿರುವ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು ಬೇಲ್. ಸ್ಟಾರ್ ಡೈರೆಕ್ಟರ್ ಪವನ್ ಒಡೆಯರ್ ಆಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸದ್ಯ ಕೊನೆಯ ಹಂತದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ಇದೀಗ ಬೇಲ್ ಸಿನಿಮಾದ ಫಸ್ಟ್ ಲುಕ್ ನ್ನು‌ ಅನಾವರಣ ಮಾಡಿದೆ. ಬೇಲ್ ಸಿನಿಮಾದಲ್ಲಿ ಶಿವಣ್ಣ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸಾಲ್ಟ್ ಅಂಡ್ ಪೆಪ್ಪರ್ ಲುಕ್ ನಲ್ಲಿ ದರ್ಶನ ಕೊಟ್ಟಿರುವ ಕರುನಾಡ ಚಕ್ರವರ್ತಿ, ವಿಜಿ ಎಂಬ ಪಾತ್ರವನ್ನು ಪ್ಲೇ ಮಾಡುತ್ತಿದ್ದಾರೆ. ಕೊಡೆ ಹಿಡಿದು ಸಾಕು ನಾಯಿಯ ಜೊತೆ ಶಿವಣ್ಣ ನಡೆದು ಬರುವ ಸ್ಟೈಲ್ ಸಖತ್ ಕಿಕ್ ಕೊಡ್ತಿದೆ. ಶಿವಣ್ಣ ಹಾಗೂ ಸಾಯಿ ಕುಮಾರ್ ಡೈಲಾಗ್ ಜುಗಲ್ ಬಂದಿಯಂತೂ ಸಿನಿಮಾ ಮೇಲಿನ ಥ್ರಿಲ್ ಹೆಚ್ಚು ಮಾಡಿದೆ. ರಾತ್ರಿ ಜೋರು ಮಳೆಯಲ್ಲಿ ಬೆಂಗಳೂರು ಚಿತ್ರಣ.. ನಿಧಾನವಾಗಿ ನಾಯಿಗೆ ಬಿಸ್ಕೆಟ್ ತಿನ್ನುಸುತ್ತಿರುವ ವಿಜಿ‌ ಪರಿಚಯ ಮಾಡಿಸುತ್ತಾರೆ. ಫೋನ್ ಕರೆ ಸ್ವೀಕರಿಸುವ ವಿಜಿಗೆ ಅತ್ತ ಕಡೆಯಿಂದ ಬಹುಪರಾಕ್ ಶುರುವಾಗುತ್ತದೆ. ನೀನು ಹಚ್ಚಿರುವ ಬೆಂಕಿ ಬರೀ ಊರನ್ನು ಅಲ್ಲ, ದೇಶವನ್ನು ಸುಡುತ್ತಿದೆ ಎಂದು ಅತ್ತ ಕಡೆಯಿಂದ ಧ್ವನಿ ಕೇಳುತ್ತದೆ. ಇದನ್ನೆಲ್ಲಾ ಮಾಡಿ ಹೇಗೆ ಸೈಲೆಂಟ್ ಇದ್ದೀಯಾ ಎಂದಾಗ "ಕೆಲವು ಸ್ವಭಾವಕ್ಕೆ ಧೈರ್ಯದ ಅಭಾವ ಯಾವಾಗ್ಲೂ ಆಗಲ್ಲ" ಎಂದು ಖಡಕ್ ಡೈಲಾಗ್ ಹೊಡೆದಿದ್ದಾರೆ ಶಿವಣ್ಣ. ಪವನ್ ಒಡೆಯರ್ ಸತ್ಯಘಟನೆಗಳನ್ನು ಆಧರಿಸಿ ಬೇಲ್ ಸಿನಿಮಾವನ್ನು ಕಟ್ಟಿಕೊಡುತ್ತಿದ್ದಾರೆ. ಇನ್ನು, ಚಿತ್ರದಲ್ಲಿ ಅನುಭವಿ ತಾಂತ್ರಿಕ ವರ್ಗ ಕೆಲಸ ಮಾಡ್ತಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ವೈದ್ಯ ಛಾಯಾಗ್ರಹಣ ಹಾಗೂ ಗುಣ ಪ್ರೊಡಕ್ಷನ್ ಡಿಸೈನ್ ಹಾಗೂ ಶಶಾಂಕ್ ನಾರಾಯಣ್ ಸಂಕಲನ ಬೇಲ್ ಗಿದೆ. ಸ್ಟಾರ್ ಹೀರೋಗಳಿಗೆ ವಿಭಿನ್ನ ಬಗೆಯ ಸಿನಿಮಾ ಮಾಡಿರುವ ಪವನ್ ಒಡೆಯರ್ ಈಗ ಶಿವಣ್ಣನಿಗೆ ಒಂದೊಳ್ಳೆ ಕಥೆ ಹೆಣೆದಿದ್ದಾರೆ. ಅದಕ್ಕೆ ಕೆವಿಎನ್ ಸಂಸ್ಥೆಯ ವೆಂಕಟ್ ನಾರಾಯಣ್ ಬಂಡವಾಳ ಹಾಕ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬಕ್ಕೆ ಬೇಲ್ ಸಿನಿಮಾ ಪ್ರೇಕ್ಷಕರ ಎದುರು ಬರಲಿದೆ. #2026