ಶ್ರೀನಿವಾಸ ಕಲ್ಯಾಣ 🌷🙏

ರಾಧಾಕೃಷ್ಣ 🦚💙
842 views
16 days ago
#ದಿನಕ್ಕೊಂದು ಕಥೆ #🔱 ಭಕ್ತಿ ಲೋಕ #🙏ತಿರುಪತಿ ತಿಮ್ಮಪ್ಪ #ಶ್ರೀನಿವಾಸ ಕಲ್ಯಾಣ 🌷🙏 ಪದ್ಮಾವತಿಯೊಂದಿಗೆ ಶ್ರೀನಿವಾಸನ ಕಲ್ಯಾಣ ಮಾಡಿಸಿದ ಯಶೋಧ :- ದ್ವಾಪರ ಯುಗದ ಕೃಷ್ಣನ ತಾಯಿ ಯಶೋದೆಗೂ, ಕಲಿಯುಗದ ಶ್ರೀನಿವಾ ಸನಿಗೂ ಎತ್ತಣಿಂದ ಎತ್ತ ಸಂಬಂಧ ಎಂದು ಯೋಚಿಸ ಹೊರಟರೆ ಇದು ಭಗವಂತನ ಸಂಕಲ್ಪ. ಕೃಷ್ಣನ ವರದಿಂದ ಕಾರಣ ಜನ್ಮಳಾದಳು ಬಕುಳಾದೇವಿ. ಕಾರ್ಯಕಾರಣಕ್ಕಾಗಿ ಭೃಗು ಮಹರ್ಷಿಯ ನಿಮಿತ್ತ ಶಾಪದಿಂದ ಮಹಾ ವಿಷ್ಣು,ತನ್ನ ಪತ್ನಿ ಮಹಾಲಕ್ಷ್ಮಿಯನ್ನು ಹುಡುಕುವ ಸಲುವಾಗಿ ತನ್ನ ದಿವ್ಯ ರೂಪ ವನ್ನು ವೈಕುಂಠದಲ್ಲಿ ಬಿಟ್ಟು ಮಾನವ ಶರೀರದಿಂದ ಶ್ರೀನಿವಾಸನಾಗಿ ಧರೆಯಲ್ಲಿ ಅವತರಿಸಿದನು. ಧರೆಗಿಳಿದ ಕಾರಣ ಮಾನವ ಸಹಜ ವಾಗಿ ಹಸಿವು ನೀರಡಿ ಕೆ ಗಳಿಂದ ಬಳಲಿ ಒಂದು ಮರದ ಕೆಳಗಿನ ಹುತ್ತದಲ್ಲಿ ಸೇರಿದನು. ತ್ರಿಲೋಕ ಸಂಚಾರಿ ಆದ ನಾರದರು, ಶ್ರೀನಿವಾಸನ ಹಸಿವು- ಬಾಯಾರಿಕೆ- ಬಳಲಿಕೆ ಗಳನ್ನು ತಿಳಿಸುವ ಸಲುವಾಗಿ ಕೊಲ್ಲಾಪುರಕ್ಕೆ ನಡೆದರು. ಪತಿಯ ಮೇಲಿನ ಕೋಪದಿಂದ ವೈಕುಂಠವನ್ನು ತೊರೆದು ಭೂಲೋಕದ ಕೊಲ್ಲಾಪುರ ದಲ್ಲಿ ನೆಲೆಯಾಗಿದ್ದ ಮಹಾಲ ಕ್ಷ್ಮಿಗೆ ಶ್ರೀನಿವಾಸ ಪಡುತ್ತಿದ್ದ ಕಷ್ಟವನ್ನು ತಿಳಿಸಿದರು ತನ್ನ ಪತಿ ಹಸಿವು ಬಳಲಿಕೆಯಿಂದ ಇರುವುದನ್ನು ತಿಳಿದು ಲಕ್ಷ್ಮಿಗೆ ಸಹಿಸಲಾಗ ಲಿಲ್ಲ. ಆಕೆಯ ಸಿಟ್ಟು ಇನ್ನೂ ಹೋಗಿರದ ಕಾರಣ ಅವಳು ಶ್ರೀನಿವಾಸ ಇದ್ದಲ್ಲಿಗೆ ಬರಲಿಲ್ಲ. ಆದರೆ, ದೇವಲೋಕದ ಬ್ರಹ್ಮ ಮತ್ತು ಶಿವನಲ್ಲಿ ಮೊರೆ ಹೋದಳು. ಆಲಿಸಿದ ಬ್ರಹ್ಮನು ಧೇನುವಾಗಿ, ಶಿವನು ಕರುವಾಗಿ ಭೂಮಿಗೆ ಬಂದು ಚೋಳರಾಜನ ಗೋ ಶಾಲೆ ಸೇರಿದರು. ಆ ನಂತರ ಗೋಶಾಲೆಯ ಹಸುಗಳ ಗುಂಪಿನಲ್ಲಿ ಸೇರಿಕೊಂಡು ಶ್ರೀನಿವಾಸನ ಆಶ್ರಯ ತಾಣವಾದ ಹುತ್ತದ ಬಳಿಗೆ ಬಂದ ಕಾಮಧೇನು ಹಾಲು ತುಂಬಿದ ಕೆಚ್ಚಲಿನಿಂದ ಶ್ರೀನಿವಾಸನ ಬಾಯಿಗೆ ಬೀಳುವಂತೆ ಹಾಲು ಸುರಿಸಿ ಹಸಿವು ತಣಿಸಿತು. ಆದರೆ ಒಂದೆರಡು ದಿನದೊಳಗೆ ಈ ವಿಷಯ ಚೋಳ ರಾಜನಿಗೆ ತಿಳಿದು ಅವನು ಗೋ ಶಾಲೆಯ ಗೋಪಾಲಕನಿಗೆ ಪರೀಕ್ಷಿಸಲು ಹೇಳಿದನು. ಗೋಪಾಲಕನು ಹುತ್ತದೊಳಗೆ ಹಾಲು ಸುರಿಸುತ್ತಿದ್ದ ಕಾಮಧೇನುವನ್ನು ಕಂಡ ಸಿಟ್ಟಿನಿಂದ ಹಸುವಿಗೆ ಹೊಡೆಯಲು ಕೈಲಿದ್ದ ಕೋಲನ್ನು ಅದರ ಕಡೆಗೆ ಗುರಿ ಯಿಟ್ಟು ಬೀಸಿ ಒಗೆದನು ಬೀಸಿ ಬಂದ ಕೋಲಿನ ಪೆಟ್ಟು ಕಾಮಧೇನು ವಿಗೆ ಬೀಳದಂತೆ ಶ್ರೀನಿವಾಸ ತನ್ನ ತಲೆಯನ್ನು ಅಡ್ಡ ಹಿಡಿದನು. ಆ ದೊಣ್ಣೆ ಯ ಪ್ರಹಾರದ ಪೆಟ್ಟು ಅವನ ಹಣೆಗೆ ಬಡಿಯಿತು. ಶ್ರೀನಿವಾಸನ ಹಣೆಗೆ ಬಲ ವಾದ ಪೆಟ್ಟು ಬಿದ್ದು ರಕ್ತ ಸುರಿಯಿತು. ನೋವಿನಿಂದ ನರಳ ತೊಡಗಿದ. ಈ ವಿಚಾರ ದೇವಲೋಕದಲ್ಲಿ ತಿಳಿದು ಚರ್ಚೆಯಾಯಿತು. ಅಲ್ಲಿದ್ದ ಗುರು ಬೃಹಸ್ಪತಿ ಗಳು ತಾವೇ ಶ್ರೀನಿವಾಸನಿಗೆ ಆರೈಕೆ ಮಾಡುವುದಾಗಿ ಹೊರಟ ಸಮಯದಲ್ಲಿ ನಾರದರು ಆಗಮಿಸಿ ಅವರೊಂದು ಸಲಹೆ ಕೊಟ್ಟರು. ಬೃಹಸ್ಪತಿಗಳೇ ನೀವು ಹೋಗಿ ಔಷಧಿ ಕೊಡಿ ಆದರೆ ಶ್ರೀನಿವಾಸನಿಗೆ ಆರೈಕೆ ಮಾಡಲು ಅಲ್ಲೊಬ್ಬ ತಾಯಿ ಕಾದಿದ್ದಾಳೆ. ಅವಳು ಶ್ರೀನಿವಾಸನ ಆರೈಕೆ ಪ್ರೀತಿಯಿಂದ ಮಾಡುತ್ತಾಳೆ ಆ ಜವಾಬ್ದಾರಿಯನ್ನು ಅವಳಿಗೆ ಬಿಡಿ ಎಂದರು. ಅಲ್ಲಿದ್ದವರೆಲ್ಲ ಆಶ್ಚರ್ಯ ಚಕಿತರಾಗಿ ಇದೇನು ಶ್ರೀನಿವಾಸನಿಗೆ ತಾಯಿಯೇ ಯಾರು ಆಕೆ ?ಎಂದಾಗ, ನಾರದರು ದ್ವಾಪರ ಯುಗದ ನೆನಪು ಮಾಡಿ ದರು. ಮೂರು ಸಾವಿರ ವರ್ಷಗಳ ಹಿಂದೆ ಮಥುರಾ ನಗರದಲ್ಲಿ ವಸುದೇವ ದೇವಕಿಗೆ ಹುಟ್ಟಿದ ಮಗು ಕೃಷ್ಣನನ್ನು,‌ ಕಂಸನದೃಷ್ಟಿಯಿಂದ ತಪ್ಪಿಸಲು, ವಿಷ್ಣುವಿನ ಆದೇಶದಂತೆ, ವಸುದೇವನು ಆಗ ತಾನೇ ಹುಟ್ಟಿದ ಹಸು ಗೂಸನ್ನು ಬುಟ್ಟಿಯಲ್ಲಿ ಹೊತ್ತು ತಂದು ಗೋಕುಲದ ಯಶೋಧ -ನಂದರ ಮನೆಯಲ್ಲಿ ಬಿಡುತ್ತಾನೆ. ಮುಂದೆ ಕೃಷ್ಣನು, ತಾಯಿ ಯಶೋಧೆಯ ಮುದ್ದಿನ ಆರೈಕೆಯಲ್ಲಿ ಬೆಳೆಯುತ್ತಾನೆ. ಇತ್ತ ಮಧುರಾದಲ್ಲಿ ಕೃಷ್ಣನ ಸೋದರ ಮಾವ ಕಂಸನು ಕೃಷ್ಣನನ್ನು ಸಂಹರಿಸಲು ತಂತ್ರರೂಪಿಸಿ ಕೃಷ್ಣ - ಬಲರಾಮರನ್ನು ಮಥುರಾಕ್ಕೆ ಕರೆಸುವ ಸಲುವಾಗಿ ಕುಸ್ತಿ ಕಾಳಗ ಸ್ಪರ್ಧೆ ಏರ್ಪಡಿಸಿ ಅವರಿಗೆ ಬರಲು ಆಹ್ವಾನ ಕೊಟ್ಟು ಕರೆ ತರಲು ಅಕ್ರೂರನನ್ನು ಕಳಿಸಿದನು. ಕಂಸನ ಕುತಂತ್ರವನ್ನು ಬಲ್ಲ ಕೃಷ್ಣನು ಮಧುರಾಕ್ಕೆ ಬೇಕೆಂದೆ ಹೋಗಿ ಅಲ್ಲಿ ಕಂಸನ ಸಂಹಾರ ಮಾಡಿ ಹೆತ್ತವರಾದ ವಸುದೇವ - ದೇವಕಿಯರನ್ನು ಬಂಧಮುಕ್ತ ಗೊಳಿಸಿದನು. ಆನಂತರ ಮತ್ತೆ ಅವನೆಂದೂ ಗೋಕುಲಕ್ಕೆ ಬರಲೇ ಇಲ್ಲ. ದೇಶದ ಉದ್ದಗಲಕ್ಕೂ ಸಂಚರಿಸುವುದೇ ಆಯಿತು. ಎಷ್ಟೋ ವರ್ಷಗಳು ಕಳೆದ ಮೇಲೆ ಒಮ್ಮೆ ಯಶೋಧಾ ತಾಯಿ ಕೃಷ್ಣನ ಅರಮನೆಗೆ ಬಂದಾಗ ಅಷ್ಟಮಹಿಷಿಯರಲ್ಲದೆ ಅದರ ಮೇಲೆ ಮತ್ತೆ 16,000 ಕನ್ಯೆಯರನ್ನು ವಿವಾಹವಾದ ವಿಷಯ ತಿಳಿದು ಯಶೋಧ ತಾಯಿಗೆ ಬೇಸರವಾಯಿತು. ಕೃಷ್ಣನ ಮದುವೆಯನ್ನು ತಾನೇ ಮುಂದೆ ನಿಂತು ಮಾಡಿ ಆ ಸಂಭ್ರಮವನ್ನು ಕಣ್ತುಂಬಿ ಕೊಳ್ಳುವ ಕನಸನ್ನು ಕಂಡಿದ್ದಳು. ಬೇಸರದಿಂದ ನೀನು ನನಗೆ ತಿಳಿಸದೆ ಮದುವೆಯಾಗಿರುವೆ ನಿನ್ನ ವಿವಾಹ ನೋಡುವ ಭಾಗ್ಯವನ್ನು ನನಗೆ ಕರುಣಿಸಲಿಲ್ಲ ಎಂದು ಕೃಷ್ಣನಿಗೆ ಹೇಳಿದಾಗ ಕೃಷ್ಣನು ಬೇಸರ ಪಡಬೇಡ ಮುಂದಿನ ಕಲಿಯುಗದಲ್ಲಿ ನಿನ್ನ ಕೈಯಾರೆ ನನ್ನ ವಿವಾಹವನ್ನು ಸಂಭ್ರಮ ದಿಂದ ಮಾಡುವೆ ಎಂದು ತಾಯಿ ವರ ಕೊಟ್ಟಿದ್ದ. ಅದರಂತೆ ಕಲಿಯುಗ ಕಾಲಿಟ್ಟಾಗ ಯಶೋದೆ ಸಪ್ತಗಿರಿಯಲ್ಲಿ ಬಕುಳಾ ದೇವಿಯಾಗಿ ಅವತರಿಸಿ ವರಾಹನದಿ ತಟದ ಪುಷ್ಕರಣಿಯಲ್ಲಿ ಸ್ನಾನ ಮಾಡಿ ಬರುತ್ತಿರುವ ಆಕೆಯನ್ನು ನಾರದರು ದೇವಲೋಕದ ಸಭೆಯಲ್ಲಿದ್ದವರಿಗೆ ತೋರಿಸಿದರು. ಇತ್ತ ಪೆಟ್ಟು ತಿಂದು ರಕ್ತ ಸುರಿಯುತ್ತಿದ್ದ ಶ್ರೀನಿವಾಸ ಒಬ್ಬನೇ ಪುಷ್ಕರಣಿಯ ಮೆಟ್ಟಿಲ ಮೇಲೆ ಕುಳಿತಿದ್ದನು. ಆಗತಾನೆ ಸ್ನಾನ ಮುಗಿಸಿ ಬಂದ ಬಕುಳಾ ದೇವಿ ಆತನನ್ನು ನೋಡಿ ಯಾರಪ್ಪ ನೀನು? ಎಲ್ಲಿಂದ ಬಂದಿರುವೆ? ಏನಿ ದು ನಿನ್ನ ಗಾಯ? ಎಂದೆಲ್ಲಾ ಕೇಳಿದಾಗ ಶ್ರೀನಿವಾಸನು ಅಮ್ಮಾ ಎಂದು ಕರೆಯುತ್ತಿದ್ದಂತೆ, ಬಕುಳಾ ದೇವಿಗೆ ಅಮ್ಮಾ ಎಂಬ ಶಬ್ದ ಕಿವಿಗೆ ಬೀಳುತ್ತಿದ್ದ ಹಾಗೆ ತಾಯಿಯ ಕರುಳು ಚುರುಕ್ ಎಂದಿತು. ಅಮ್ಮಾ ನನ್ನ ಹೆಸರು ಶ್ರೀನಿ ವಾಸ ಸ್ವಲ್ಪ ಪೆಟ್ಟು ಬಿದ್ದಿದೆ ಎಂದನು ತಾಯಿ ಕರುಳು ಕೇಳಬೇಕಲ್ಲವೇ? ಇದೇನು ಸಣ್ಣ ಗಾಯವೇ? ಎಷ್ಟೊಂದು ರಕ್ತ ಸುರಿಯುತ್ತಿದೆ ಎಂದು ತನ್ನ ಸೀರೆಯ ಸೆರಗಿನ ಅಂಚನ್ನು ಹರಿದು ಹಣೆಗೆ ಕಟ್ಟಲು ಹೊರಟಾಗ ಅಮ್ಮ ತಡೆಯಿರಿ ಎಂದು ಧ್ವನಿ ಕೇಳಿದಾಗ ತಿರುಗಿ ನೋಡಿದಳು, ಕೈಯಲ್ಲಿ ಔಷಧಿ ಹಿಡಿದು ಧನ್ವಂತರಿಯಂತೆ ಒಬ್ಬ ವ್ಯಕ್ತಿ ನಿಂತಿದ್ದನು. ಆತ ಬೇರೆ ಯಾರೊ ಆಗಿರದೇ ದೇವಗುರು ಬೃಹಸ್ಪತಿ. ಆ ಔಷಧಿ ಯನ್ನು ಬಕುಳಾದೇವಿ ಕಟ್ಟಲು ಹಿಡಿದಿದ್ದ ಸೀರೆಯ ತುಂಡಿನೊಳಗೆ ಹಾಕಿ ಈಗ ಇದನ್ನು ಕಟ್ಟಿ ಎಂದನು. ಬಕುಳಾದೇವಿ ಔಷಧಿ ತುಂಬಿದ ಸೆರಗಿನ ಅಂಚನ್ನು ಶ್ರೀನಿವಾಸನ ಹಣೆಗೆ ಕಟ್ಟಿ, ಬಂದ ವ್ಯಕ್ತಿಯ ಕಡೆ ತಿರುಗಿ ಸಮಯಕ್ಕೆ ಸರಿಯಾಗಿ ಬಂದಿರುವೆಯಲ್ಲ ಇದು ಯಾವ ಜನ್ಮದ ಸಂಬಂಧವೂ ನಾಕಾಣೆ ಇವನು ಅಮ್ಮ ಎಂದು ಕರೆದಾಗಲೇ ನನಗೆ ನನ್ನ ಮಗ ಎಂದು ಅನಿಸುತ್ತಿದೆ. ಹೀಗೆ ಆರೈಕೆ ಮಾಡು ತ್ತಲೇ ಶ್ರೀನಿವಾಸನಿಗೆ ಯಾರಪ್ಪ ನೀನು ಎಲ್ಲಿಂದ ಬಂದಿರುವೆ ನಿನ್ನ ತಂದೆ ತಾಯಿ ಬಂಧು ಬಳಗ ಎಲ್ಲಿರುವರು ಎಂದು ಕೇಳಿದಾಗ ಅಮ್ಮ ನನಗೆ ಯಾರು ಇಲ್ಲ ನೀನೇ ನನ್ನ ತಾಯಿ ಎಂದನು. ಈ ಕಥೆಯನ್ನು ಬರಹ ರೂಪಕ್ಕೆ ತಂದವರು — ಆಶಾ ನಾಗಭೂಷಣ. ತಾಯಿಯ ಮಮತೆ ಉಕ್ಕಿಬಂದು ಈ ರೀತಿ ಪೆಟ್ಟು ಮಾಡಿದವರು ಯಾರು ಅಂತ ಹೇಳು ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದಳು. ಹೋಗಲಿ ಬಿಡಮ್ಮ ಕಳೆದು ಹೋದ ವಿಚಾರ ಬೇಡ ಈಗ ನನಗೆ ಹಸಿವಾಗುತ್ತಿದೆ ಅಮ್ಮ ಹೇಳು ಅಮ್ಮ ಹೇಳು ನಿನ್ನ ಮನೆ ಎಲ್ಲಿದೆ? ನೀನು ಯಾರ ಜೊತೆ ಇರುವೆ ಎಂದನು ಬಕುಳಾದೇವಿ ನನಗೂ ಯಾರು ಇಲ್ಲ ನಾನು ಒಬ್ಬಂಟಿಯಾಗಿರುವೆ ಎಂದಳು. ಶ್ರೀನಿವಾಸ ಹೇಳಿದ ಯಾರೂ ಇಲ್ಲ ಎಂದು ಏಕೆ ಹೇಳುವೆ, ಭಗವಂತ ನಿನ್ನ ಜೊತೆಗಿರುತ್ತಾನೆ. ಏಕಾಂಗಿ ಯಾಗಿ ಯಾರು ಇರುವು ದಿಲ್ಲ ಇನ್ನು ಮುಂದೆ ನಾನೇ ನಿನ್ನ ಮಗ ನೀನೇ ನನಗೆ ಅಮ್ಮ ಎಂದನು. ಈ ರೀತಿಯಾಗಿ ಅಮ್ಮ ಮಗನ ಬಾಂಧವ್ಯ ಮುಂದುವರೆಯಿತು. ತಾಯಿಯ ಆರೈಕೆಯಲ್ಲಿ ಶ್ರೀನಿವಾಸ ಚೇತರಿಸಿ ಕೊಂಡನು. ಮುಂದೆ ಆಕಾಶ ರಾಜನ ಮಗಳಾದ ಪದ್ಮಾವತಿ ಯೊಂದಿಗೆ ಮಗ ಶ್ರೀನಿವಾಸನ ಮದುವೆಯನ್ನು ಬಕುಳಾದೇವಿಯೇ ಮುಂದೆ ನಿಂತು, ಹಿಂದೆ ಅಂತ ಮದುವೆ ಯಾಗಿಲ್ಲ ಮುಂದೆ ಆಗುವುದಿಲ್ಲ ಅನ್ನುವ ಹಾಗೆ, ಶ್ರೀನಿವಾಸನು ತನ್ನ ಮದುವೆಗಾಗಿ ಕುಬೇರನ ಹತ್ತಿರ ಸಾಲ ಮಾಡಿ ಬಾರಿ ಮದುವೆಯನ್ನು ಸಂಭ್ರಮ ಸಡಗರದಿಂದ ಮಾಡಿ ಕೊಂಡನು. ಅಂತಹ ಶ್ರೀನಿವಾಸ ಪದ್ಮಾವತಿ ರ ಕಲ್ಯಾಣಕ್ಕೆ ಸಾಕ್ಷಿಯಾಗಿ ದ್ವಾಪರದ ಯಶೋದೆ ಕಲಿಯುಗದಲ್ಲಿ ಬಕುಳಾದೇವಿಯಾಗಿ ಆ ಸಂಭ್ರಮವನ್ನು ಕಣ್ತುಂಬಿ ಕೊಂಡಳು. ( ತ್ರೇತಾಯುಗದಲ್ಲಿ ರಾವಣ ಸೀತೆಯನ್ನು ಅಪಹರಿಸಿದಾಗ ಸೀತೆಯ ಬದಲಿಗೆ ಅಲ್ಲಿ ‘ವೇದವತಿ’ ಇದ್ದು, ರಾಮ ರಾವಣರ ಯುದ್ಧವೆಲ್ಲ ಮುಗಿದ ನಂತರ ರಾಮನು ವೇದವತಿಗೆ ಏನು ವರ ಬೇಕು ಎಂದು ಕೇಳಿದಾಗ ನೀನು ನನ್ನನ್ನು ವಿವಾಹ ಆಗಬೇಕು ಎಂದಳಂತೆ ರಾಮ ಆಗ ಏಕ ಪತ್ನಿ ವ್ರತಸ್ಥ ನಾದುದರಿಂದ ಮುಂದಿನ ಯುಗದಲ್ಲಿ ಶ್ರೀನಿವಾಸನಾಗಿ ಬಂದು ನಿನ್ನನ್ನು ವಿವಾಹ ಆಗಬೇಕು ಎಂದು ಮಾತು ಕೊಟ್ಟಿದ್ದನಂತೆ ಅದರಂತೆ ವೇದವತಿಯೇ ಪದ್ಮಾವತಿಯಾಗಿ ಜನಿಸಿ ರಾಮನೆ ಶ್ರೀನಿವಾಸನಾಗಿ ಅವಳ ಇಚ್ಛೆಯಂತೆ ವಿವಾಹವಾದನು. ಮುಂದೆ ಲಕ್ಷ್ಮಿಗೂ ಮತ್ತು ಪದ್ಮಾವತಿ ಸರಿ ಬರದೆ ಶ್ರೀನಿವಾಸ ತಿರುಪತಿಯಲ್ಲಿ ಕಲ್ಲಾದ ಎನ್ನುವ ಕಥೆಯು ಇದೆ.) ಕಲ್ಯಾಣಾದ್ಭುತಗಾತ್ರಾಯ ಕಾಮಿತಾರ್ಥ ಪ್ರದಾಯಿನೇ ! ಶ್ರೀಮದ್ವೇಂಕಟನಾಥಾಯ ಶ್ರೀನಿವಾಸಾಯ ಮಂಗಳಮ್ !! ವಂದನೆಗಳೊಂದಿಗೆ, ಬರಹ: ©ಆಶಾ ನಾಗಭೂಷಣ — ಹಕ್ಕುಗಳು ಸಂರಕ್ಷಿತ #ashanagabhushan #ಆಶಾನಾಗಭೂಷಣ
ರಾಧಾಕೃಷ್ಣ 🦚💙
822 views
25 days ago
#ಶ್ರೀನಿವಾಸ ಕಲ್ಯಾಣ 🌷🙏 #ವೈಶಾಖ ಮಾಸ #🔱 ಭಕ್ತಿ ಲೋಕ ಹೇ ರಾಜನ್!! ಕೇಳು! ಪೂರ್ವದಲ್ಲಿ ಸಕಲ ಮುನಿಶ್ರೇಷ್ಟರು ಗಂಗಾನದಿಯ ತಟದಲ್ಲಿ ಒಂದು ಶ್ರೇಷ್ಠವಾದ ಯಜ್ಞ ವನ್ನು ಆಚರಿಸಿದರು. ಆ ಯಾಗ ನಡೆಯುವ ಸುಸಂಧರ್ಭದಲ್ಲಿ ದೇವರ್ಷಿಯಾದ ನಾರದರು ಅಲ್ಲಿಗೆ ಆಗಮಿಸಿ ಕಶ್ಯಾಪಾದಿ ಋಷಿಗಳನ್ನು ನೋಡಿ ಈ ಉತ್ತಮವಾದ ಯಜ್ಞವನ್ನು ಯಾವ ಉದ್ದೇಶದಿಂದ ಮಾಡುವಿರಿ?? ಈ ಯಜ್ಞಕ್ಕೆ ದೇವತೆ ಯಾರು?? ಮತ್ತು ಈ ಯಜ್ಞದ ಫಲವನ್ನು ಯಾವ ಸರ್ವೋತ್ತಮ ದೇವತೆಗೆ ಅರ್ಪಿಸುವಿರಿ?? ಶ್ರೀಹರಿಗೋ??ವಾರಿಜೋದ್ಬವನಿಗೋ?? ಅಥವಾ ಶಂಕರನಿಗೋ?? ಅಂತ ಕೇಳಿದಾಗ ಸಕಲ ಮುನಿಗಳಲ್ಲಿ ಇದರ ಬಗ್ಗೆ ಚರ್ಚೆ ಯಾಗಿ ನಿಜ ಇದನ್ನು ಯಾರಿಗೆ ಅರ್ಪಿಸಬೇಕು ಎಂದು ಚರ್ಚಿಸಿ ಕೊನೆಗೆ ಸಾಧ್ಯವಾಗದೇ ಋಷಿಗಳ ಸಮೂಹದಲ್ಲಿ ಶ್ರೇಷ್ಠರಾದ ಭೃಗು ಮುನಿಗಳ ಹತ್ತಿರ ಬಂದು ಸ್ವಾಮಿ ಭೃಗುಮುನಿಗಳೇ!! ದೇವತೆಗಳಲ್ಲಿ ಉತ್ತಮನಾದ ಪರಮ ಪುರುಷನು ಯಾರೆಂದು ತಿಳಿದು ಬರಲು ದಯಮಾಡಿ ಹೊರಡಿರಿ ಎಂದು ಕೋರಿದರು. ಆಗ ಭೃಗು ಮುನಿಗಳು ಅವರ ಕೋರಿಕೆಯನ್ನು ಮನ್ನಿಸಿ ಸರ್ವೋತ್ತಮ ದೇವತೆ ಯಾರೆಂದು ತಿಳಿಯಲು ಕಮಲ ಮಂದಿರನಾದ ಸತ್ಯಲೋಕದಲ್ಲಿ ಸರಸ್ವತಿ ಸಮೇತನಾಗಿ ಇರುವ ಬ್ರಹ್ಮದೇವರ ಬಳಿ ಬಂದರು. ಆ ಸಮಯದಲ್ಲಿ ನಾಲ್ಕು ಮುಖಗಳಿಂದ ಬ್ರಹ್ಮ ದೇವರು ವೇದಘೋಷವನ್ನು ಮಾಡುತ್ತಾ ಇದ್ದರು. ಅವರಿಗೆ ಭಕ್ತಿ ಇಂದ ನಮಸ್ಕರಿಸಿದರು ಸಹ. ಬ್ರಹ್ಮ ದೇವರು ಭೃಗು ಋಷಿಗಳ ಕಡೆ ಗಮನ ಹರಿಸಲಿಲ್ಲ. ನೋಡಿದರು, ಮಾತನಾಡಿಸದೆ ಸುಮ್ಮನೆ ಮೌನ ವಹಿಸಿದರು. ಶ್ರೀ ಹರಿ ಸರ್ವೋತ್ತಮ ಸಿದ್ದಾಂತ ಸ್ಥಾಪಿಸಲೋಸುಗ ಅವರು ಸುಮ್ಮನೆ ಸರಸ್ವತಿ ದೇವಿಯರೊಡನೆ ಧ್ಯಾನಾಸಕ್ತರಾಗಿ ಕುಳಿತಿದ್ದರು. ಇದನ್ನು ಕಂಡ ಭೃಗು ಮುನಿಗಳು ಬ್ರಹ್ಮ ದೇವನು ಸ್ವಲ್ಪ ಅಜ್ಞಾನ ಉಳ್ಳವನಾಗಿದ್ದಾನೆ, ಆದ್ದರಿಂದ ಇವನು ಸರ್ವೋತ್ತಮ ದೇವತೆ ಅಲ್ಲವೆಂದು ತಿಳಿದು ಕಲಿಯುಗದಲ್ಲಿ ಇವರ ಪೂಜೆ ಆಗದಿರಲಿ ಎಂದು ಶಾಪವನ್ನು ಕೊಟ್ಟು ಮುಂದೆ ಕೈಲಾಸ ಪರ್ವತಕ್ಕೆ ಬರುವರು. ಭೃಗುಋಷಿಗಳು ಸತ್ಯಲೋಕದಿಂದ ಕೈಲಾಸ ಪರ್ವತಕ್ಕೆ ಹೋದಾಗ ಅಲ್ಲಿ ರುದ್ರದೇವರು ತಮ್ಮ ಪತ್ನಿಯಾದ ಪಾರ್ವತಿದೇವಿಯರೊಂದಿಗೆ ಏಕಾಂತದಲ್ಲಿದ್ದರು. ಅಲ್ಲಿಯು ಸಹ ರುದ್ರದೇವರು "ಶ್ರೀಹರಿಯೇ ಸರ್ವೋತ್ತಮ"ನೆಂದು ತಮ್ಮಿಂದಲೂ ಸ್ಥಾಪಿಸಬೇಕೆಂದು ಭೃಗುಋಷಿಗಳು ಬಂದದ್ದನ್ನು ನೋಡದಂತೆ ನಟಿಸಿ, ಅವರ ಯೋಗ-ಕ್ಷೇಮವನ್ನು ವಿಚಾರಿಸದೆ, ತಮ್ಮ ಪತ್ನಿಯೊಡನೆಯಿರುವ ಏಕಾಂತಕ್ಕೆ ಭಂಗ ತಂದಿರುವಿರೆಂದು ಋಷಿಗಳಿಗೆ ತಮ್ಮ ತ್ರಿಶೂಲದಿಂದ ಸಂಹರಿಸಲು ಹೋದಂತೆ ನಟಿಸಿದಾಗ, ಅಗ ಭೃಗು ಋಷಿಗಳು ಕೋಪದಿಂದ "ಭೋಗಾಸಕ್ತರಾದ ನಿಮಗೆ ಇನ್ನು ಮುಂದೆ ಭೂ-ಲೋಕದಲ್ಲಿ ನಿಮ್ಮ ಮೂರ್ತಿಯನ್ನು ಪೂಜಿಸದೆ ಲಿಂಗ ಪೂಜೆಯಾಗಲಿ"ಎಂದು ಶಾಪವನ್ನು ಕೊಡುತ್ತಾರೆ. ಅವರು ಕೊಟ್ಟು ಶಾಪವನ್ನು ತೆಗೆದುಕೊಂಡು ಪರಮ ವೈಷ್ಣವಾಗ್ರೇಸರಾದ ಹಾಗು ಮನೋನಿಯಾಮಕರಾದ ರುದ್ರದೇವರೆ ವೈಕುಂಠ ಲೋಕಕ್ಕೆ ಹೋಗುವಂತೆ ಭೃಗುಋಷಿಗಳಿಗೆ ಮನಃ ಪ್ರೇರಿಸಿದರು. ಆ ನಂತರ ವೈಕುಂಠಕ್ಕೆ ಬಂದರು. ಅಲ್ಲಿ ಶ್ರೀ ಮನ್ನಾರಾಯಣನು ಶೇಷಮಂಚದಲ್ಲಿ ಸುಪ್ಪತ್ತಿಗೆ ಮೇಲೆ ನಿದ್ರಾ ವಶದವನಂತೆ ನಟನೆ ಮಾಡುತ್ತಾ ಪವಡಿಸಿದ್ದನು. ಇದನ್ನು ಕಂಡ ಭೃಗು ಋಷಿಗಳು ಪರಮ ಕೋಪದಿಂದ ಶ್ರೀ ಹರಿಯ ವಕ್ಷಸ್ಥಳಕ್ಕೆ ತಮ್ಮ ಪಾದದಿಂದ ತಾಡನೆ ಮಾಡಿದರು. ತಕ್ಷಣ ರಮಾಪತಿಯು ಮೇಲೆದ್ದು ತಾನು ಅಪರಾಧ ಮಾಡಿದವನಂತೆ ಕ್ಷಮೆ ಯಾಚಿಸುತ್ತಾ “ಯಾಕೆನ್ನ ಮೇಲೆ ಇಷ್ಟು ಸಿಟ್ಟು?? ನೀ ಬೇಕಾದ್ದು ಕೇಳು ಕೊಡುವೆನು ಕಾಲಕಾಲಕ್ಕೆ... ಸುಮ್ಮನೆ ಯಾರಿಗು ತಿಳಿಸದೇ ನನ್ನ ಮನೆಗೆ ಬಂದು ಒದ್ದ ಕಾರಣವೇನು?? ನನ್ನ ವಜ್ರ ಕಠಿಣವಾದಂತಹ ಎದೆಗೆ ಒದ್ದು ನಿಮ್ಮ ಮೃದುವಾದ ಕೋಮಲವಾದ ಪಾದ ಎಷ್ಟು ನೊಂದಿತೋ ನಾನರಿಯೇ!! ಅಂತ ಹೇಳಿ ಭೃಗು ಋಷಿಗಳನ್ನು ಅರ್ಘ್ಯಪಾದಾದಿಗಳಿಂದ ಸತ್ಕರಿಸಿ ಆ ಪಾದೋದಕವನ್ನು ತಾನು ಶಿರಸ್ಸಿನಲ್ಲಿ ಧರಿಸಿ, ತನ್ನ ಪತ್ನಿಯಾದ ರಮಾದೇವಿಯರಿಗು ಪ್ರೋಕ್ಷಣೆ ಮಾಡಿ, ಎಲ್ಲಾ ಕಡೆಗೆ, ತನ್ನ ಸಕಲ ಪರಿವಾರದವರಿಗು ಪ್ರೋಕ್ಷಣೆಯನ್ನು ಶ್ರೀ ಹರಿಯು ಮಾಡುತ್ತಾನೆ. ಭೃಗು ಋಷಿಗಳು ಭೂಲೋಕಕ್ಕೆ ಬಂದು ಶ್ರೀ ಹರಿಯೇ ಸರ್ವೋತ್ತಮನೆಂದು ಎಲ್ಲರಿಗೂ ಉಪದೇಶ ಮಾಡಿದರು.ಸಕಲ ಋಷಿಗಳು ಪರಮ ಪುರುಷನಾದ ಆ ಶ್ರೀ ಹರಿಗೆ ಯಜ್ಞ ಫಲವನ್ನು ಸಮರ್ಪಣೆ ಮಾಡಿದರು. ******** ಇತ್ತ ಭೃಗು ಋಷಿಗಳು ವೈಕುಂಠದಿಂದ ಹೊರಟು ಹೋದ ಮೇಲೆ, ಏಕಾಂತದಲ್ಲಿ ರಮಾದೇವಿಯ ಜೊತೆಯಲ್ಲಿ ಭಗವಂತನು ಇರುವಾಗ ಮಹಾಲಕ್ಷ್ಮಿ ದೇವಿಯ "ಜಗನ್ನಿಯಾಮಕನಾದ, ದೇವೋತ್ತಮನಾದ ಪ್ರಭುವೇ, ನಾನು ನಿನ್ನನ್ನು ತೊರೆದು ಹೋಗುವೆನು. ನಿನ್ನ ಶ್ರೀವತ್ಸ ಸದಾ ಎನ್ನ ಆಲಿಂಗನವನ್ನು ಮಾಡಿಕೊಂಡಿರುವದು. ಅಂತಹ ಸ್ಥಳ ಭೂಸುರನಿಂದ ಪಾದದಿಂದ ಸ್ಪರ್ಶವಾಗಿದೆ. ಹಾಗಾಗಿ ನಾನು ಇಲ್ಲಿ ಇರುವುದಿಲ್ಲ. ಎಲ್ಲರಿಗಿಂತ ಉತ್ತಮನು ನೀನು ಎಂದು ಇಲ್ಲಿ ಇದ್ದೆ. ನಿನಗೆ ಭಕ್ತವತ್ಸಲ ಎಂಬ ಬಿರುದು ಬೇಕಾಗಿತ್ತು ಅಂದರೆ ಈ ತರ ಮಾನವ ಚರಣವನ್ನು ಎದೆಯಲ್ಲಿ ಧರಿಸುವದು ಸರಿಯೇ!! ಕರವೀರಪುರಕ್ಕೆ ಹೋಗುತ್ತೇನೆ ಅಂತ ಹೇಳಿ ಜಗನ್ಮಾತೆಯು ಪ್ರೇಮ ಕಲಹವನ್ನು ನಟಿಸಿ ವೈಕುಂಠ ಪುರವನ್ನು ಬಿಟ್ಟು ಕರವೀರಪುರಕ್ಕೆ ಬರುತ್ತಾಳೆ. ದ್ವಾಪರಯುಗದ ಕೊನೆಯ ಭಾಗದಲ್ಲಿ ಕಲಿಯುಗದಲ್ಲಿ ಮಹಾಲಕ್ಷ್ಮಿಯು ಕರವೀರಪುರಕ್ಕೆ ತೆರಳಿದ ಮೇಲೆ ಭಗವಂತನು ಸಿರಿ ಇಲ್ಲದ ವೈಕುಂಠ ಸರಿ ಬಾರದು ಎನಗೆ, ಏನು ಮಾಡಲಿ !! ನನ್ನ ಕಣ್ಣಿಗೆ ವೈಕುಂಠ ಅರಣ್ಯದಂತೆ ತೋರುತ್ತಿದೆ!!... ಎಲ್ಲಿ ಹೋಗಲಿ?? ಅಂತ ಚಿಂತೆ ಮಾಡುವರಂತೆ, ನಟಿಸುತ್ತಾ ಯಾವುದೇ ಚಿಂತೆ, ಸಂತಾಪ, ಮುಂತಾದ ದೋಷ ವಿದೂರನಾಗಿದ್ದರು, ಸ್ವರಮಣನಾದ ಶ್ರೀ ಹರಿಯು ರಮಾದೇವಿಯ ವಿರಹ ದುಃಖವನ್ನು ತಾಳದವನಂತೆ ನಟಿಸುತ್ತಾ ಆಜ್ಞ ಜನರನ್ನು ಮೋಹಗೊಳಿಸುತ್ತಾ , ವೈಕುಂಠ ವನ್ನು ಬಿಟ್ಟು ಸುವರ್ಣಮುಖಿ ನದಿಯ ತಟದಲ್ಲಿ ಹಿಂದೆ ವಾಯುದೇವರು ಶೇಷದೇವನ ಗರ್ವಭಂಗವನ್ನು ಮಾಡಿದ ಶೇಷಾಚಲಕ್ಕೆ ಬಂದು ಸ್ವಾಮಿ ಪುಷ್ಕರಣಿ ತೀರದಲ್ಲಿ ಹುಣಿಸೇ ಮರದ ಬುಡದಲ್ಲಿ ಇರುವ ವಲ್ಮೀಕದಲ್ಲಿ ಅವಿತುಕೊಂಡು ರಹಸ್ಯವಾಗಿ ವಾಸಮಾಡತೊಡಗಿದನು. ಶೇಷಾಚಲವೂ ಅನೇಕ ಜಾತಿಯ ಗಿಡ ಮರಗಳಿಂದ, ಫಲ ಪುಷ್ಪಗಳಿಂದ, ವೃಕ್ಷಭರಿತವಾದ ಪರ್ವತ.ಅನೇಕ ಜಾತಿಯ ಪಕ್ಷಿಗಳು, ಮೃಗಗಳು ಮತ್ತು ಅನೇಕ ಬಗೆಯ ಹೂ ಬಳ್ಳಿ ಗಳು ಹೀಗೆ ಅದರಲ್ಲಿ ಅಲಂಕೃತವಾಗಿದೆ. ಇಂತಹ ಮನೋಹರವಾದ ನಯನಾನಂದವಾದ ಸಕಲ ವೃಕ್ಷ, ಸಂಪತ್ತನ್ನು ಹೊಂದಿದ ವೆಂಕಟಾಚಲಕ್ಕೆ ಸ್ವಾಮಿ ಆಗಮಿಸಿ ಹುತ್ತದಲ್ಲಿ ವಾಸ ಮಾಡಿದನು.. ಇಂತು ಭವಿಷ್ಯೊತ್ತರ ಪುರಾಣ ಅಂತರ್ಗತವಾದ ಶ್ರೀ ವೆಂಕಟೇಶ ಮಹಾತ್ಮೆಯ ಶೇಷಗಿರಿ ಪರ್ವತದ ವರ್ಣನೆ ಎಂಬ ಎರಡನೆಯ ಅಧ್ಯಾಯ ಮುಗಿಯಿತು ಶುಭವಾಗಲಿ ಶ್ರೀಮತಿ ನಿರ್ಮಲರಾಜೇಶ್