ವಚನಗಳು

ಕಾಯಕವೇ ಕೈಲಾಸ..
726 views
17 days ago
ಶ್ರೀ ಗುರು ಬಸವ ಲಿಂಗಾಯ ನಮಃ.. "ಕಬ್ಬು ಬೆಳೆವುದಯ್ಯ ಕರಿಯ ಭೂಮಿಯಿದ್ದಲ್ಲಿ, ಉಬ್ಬುಬ್ಬಿ ಬೆಳೆವುದಯ್ಯ ಜಲ ಪ್ರಮಾಣವಿರ್ದಲ್ಲಿ, ದಾರಿದ್ರ್ಯವಿದ್ದಲ್ಲಿ ನಿದ್ರೆ ಬೆಳೆವುದಯ್ಯ, ನಮ್ಮ ಶಿವನ ಸಲೆ ಸಂದ ಶರಣರಾದ ಹಿರಿಯರಿದ್ದಲ್ಲಿ ಬುದ್ಧಿ ಬೆಳವುದಯ್ಯ, ಜಟ್ಟಿ ಮಾಸಾಳರಿರ್ದಲ್ಲಿ ಕಾಳಗ ಘನವನಪ್ಪುದಯ್ಯ, ಇಷ್ಟ ಕಂಡು ಬೆರಗಾದ ನಮ್ಮ ಗುಹೇಶ್ವರ.. ✍🏻 ಶೂನ್ಯ ಪೀಠ ಧೀಶ ಅಲ್ಲಮಪ್ರಭುದೇವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು
ಕಾಯಕವೇ ಕೈಲಾಸ..
979 views
22 days ago
"ನಾದಪ್ರಿಯ ಶಿವನೆಂಬರು, ನಾದಪ್ರಿಯ ಶಿವನಲ್ಲವಯ್ಯಾ.. ವೇದಪ್ರಿಯ ಶಿವನೆಂಬರು, ವೇದಪ್ರಿಯ ಶಿವನಲ್ಲವಯ್ಯಾ.. ನಾದವ ಮಾಡಿದ ರಾವಳಂಗೆ ಅರೆ ಆಯುಷ್ಯವಾಯಿತ್ತು.. ವೇದವನೋದಿದ ಬ್ರಹ್ಮನ ಶಿರ ಹೋಯಿತ್ತು.. ನಾದಪ್ರಿಯನೂ ಅಲ್ಲ, ವೇದಪ್ರಿಯನೂ ಅಲ್ಲ, ಭಕ್ತಿ ಪ್ರಿಯ ನಮ್ಮ ಕೂಡಲಸಂಗಮದೇವ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ