ಶರಣ ಸಾಹಿತ್ಯ

ಕಾಯಕವೇ ಕೈಲಾಸ..
634 views
2 days ago
"ಒಲೆ ಹತ್ತಿಯುರಿದೊಡೆ ನಿಲಬಹುದಲ್ಲದೆ, ಧರೆ ಹತ್ತಿಯುರಿದೊಡೆ ನಿಲಬಾರದು. ಏರಿ ನೀರುಂಬೊಡೆ, ಬೇಲಿ ಕೆಯ್ಮ ಮೇವೊಡೆ, ನಾರಿ ತನ್ನ ಮನೆಯಲ್ಲಿ ಕಳುವೊಡೆ, ತಾಯ ಮೊಲೆವಾಲು ನಂಜಾಗಿ ಕೊಲುವೊಡೆ, ಇನ್ನಾರಿಗೆ ದೂರುವೆ, ಕೂಡಲ ಸಂಗಮದೇವಾ??? ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
ಕಾಯಕವೇ ಕೈಲಾಸ..
904 views
1 months ago
ಶ್ರೀ ಗುರು ಬಸವ ಲಿಂಗಾಯ ನಮಃ.. "ಅಂಜಬೇಡ ಅಳುಕಬೇಡ; ಹೋದವರಾರು ಇದ್ದವರಾರು??? ಎಲೆ ಮರುಳೆ ! ಒಂದು ಮುಖದಲ್ಲಿಪ್ಪ ದೇವನೊಬ್ಬನೆ. ಹಲವು ಮುಖದಲ್ಲಿಪ್ಪ ದೇವನೊಬ್ಬನೆ. ನಾಮ ಹಲವಲ್ಲದೆ ಕಾರ್ಯ ಒಂದೇ ನೋಡಾ ! ಮನದೊಳಗಣ ಘನವು ತನುವನಗಲುವುದೆ??? ಗುಹೇಶ್ವರ ಲಿಂಗದಲ್ಲಿ ವಿಯೋಗಕ್ಕೆ ತೆರಹಿಲ್ಲ ಕೇಳಾ, ಸಂಗನಬಸವಣ್ಣ.. ✍🏻 ಶೂನ್ಯ ಪೀಠ ಧೀಶ ಅಲ್ಲಮಪ್ರಭುದೇವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು