ಮಹಾರಕ್ಷಕ್

Shiva Bennoli YB
1.4K views
1 months ago
ಯಶಸ್ಸಿನೊಂದಿಗೆ ಎಲ್ಲ ಮುಗಿಯುವುದಿಲ್ಲ, ಸೋಲಿನೊಂದಿಗೂ ಕೂಡ. ಬದುಕು ಬಲು ದೊಡ್ಡದ್ದು, ಮುಂದಡಿ ಇಡಬೇಕಷ್ಟೆ.. #ಮಹಾರಕ್ಷಕ್ Maharakshak🇮🇳🇮🇳🇮🇳 #KohiNoor #ಕೊಹಿನೂರ್ #ಮಹಾರಕ್ಷಕ್ ##ಕೊಹಿನೂರ್
Shiva Bennoli YB
3.7K views
1 months ago
ಬದುಕು ಅಂದರೇನು? ಸಿಂಪಲ್. ದಿನದಿಂದ ದಿನಕ್ಕೆ ಉತ್ತಮನಾಗೋದು ಅಷ್ಟೇ. ಈಗ ಉತ್ತಮ ಆಗೋದು ಯಾವುದರಲ್ಲಿ? ಅದು ನಿನಗೆ ಬಿಟ್ಟಿದ್ದು! #ಮಹಾರಕ್ಷಕ್ ##ಕೊಹಿನೂರ್ #ಮಹಾರಕ್ಷಕ್ Maharakshak🇮🇳🇮🇳🇮🇳 #ಕೊಹಿನೂರ್ #KohiNoor
Shiva Bennoli YB
800 views
6 months ago
#ಕಾಲರಾತ್ರಿ ನವದುರ್ಗೆಯ #ಏಳನೆಯ ಸ್ವರೂಪವೇ ಕಾಲರಾತ್ರಿ. ಸಪ್ತಮಿಯಂದು ಈ ದೇವಿಯ ರೂಪವನ್ನು ಆರಾಧಿಸುತ್ತಾರೆ. ಏಕವೇಣೀ ಜಪಾಕರ್ಣಾಪೂರಾ ನಗ್ನಾ ಖರಸ್ಥಿತಾ ಲಂಬೋಷ್ಟೀ ಕರ್ಣಿಕಾಕರ್ಣೇ ತೈಲಾಭ್ಯಕ್ತಶರೀರಿಣೀ | ವಾಮಪಾದೋಲ್ಲಸಲ್ಲೋಹಲತಾ ಕಂಟಕಭೂಷಣಾ ವರ್ಧನಮೂರ್ಧಧ್ವಜಾ ಕೃಷ್ಣಾ ಕಾಲರಾತ್ರಿರ್ಭಯಂಕರೀ || “ಈ ದೇವಿಯ ಶರೀರವು ದಟ್ಟವಾದ ಕಪ್ಪು ಬಣ್ಣದಿಂದ ಕೂಡಿರುವುದು. ಆಕೆಯ ತಲೆಕೂದಲು ಹರಡಿಕೊಂಡಿದೆ. ಕತ್ತಿನಲ್ಲಿ ಮಿಂಚಿನAತೆ ಹೊಳೆಯುವ ಮಾಲೆಯಿದೆ. ಮೂರು ಕಣ್ಣುಗಳನ್ನು ಹೊಂದಿರುವ ಈ ದೇವಿಯ ಉಚ್ಛಾ÷್ವಸ ನಿಃಶ್ವಾಸದಿಂದ ಅಗ್ನಿಯ ಭಯಂಕರ ಜ್ವಾಲೆಗಳು ಹೊರಸೂಸುತ್ತಿವೆ. ಈಕೆಯ ವಾಹನ ಕತ್ತೆ. ನಾಲ್ಕು ಭುಜಗಳಿರುವ ದೇವಿಯು ಮೇಲಕ್ಕೆ ಎತ್ತಿರುವ ಬಲಗೈಯಿಂದ ಅಭಯಮುದ್ರೆಯನ್ನು ತೋರುತ್ತಿದ್ದಾಳೆ. ಮೇಲಕ್ಕೆ ಎತ್ತಿರುವ ಎಡಗೈಯಲ್ಲಿ ಕಬ್ಬಿಣದ ಮುಳ್ಳು ಹಾಗೂ ಕೆಳ ಎಡಗೈಯಲ್ಲಿ ಖಡ್ಗವನ್ನು ಹಿಡಿದಿದ್ದಾಳೆ. ಕೆಳಗಿನ ಬಲಗೈಯಲ್ಲಿ ವರಮುದ್ರೆಯ ಮೂಲಕ ಭಕ್ತರಿಗೆ ಆಶೀರ್ವದಿಸುತ್ತಿದ್ದಾಳೆ.” ಕಾಲರಾತ್ರಿಯ ಸ್ವರೂಪದ ಕುರಿತು ತಿಳಿದಾಗ ಅವಳ ಉಗ್ರರೂಪವನ್ನು ಕಂಡು ನಮಗೆ ಭಯವಾಗಬಹುದು, ವಿಚಿತ್ರವೆನಿಸಬಹುದು. ಆದರೆ ಇವಳು ಶುಭಫಲವನ್ನು ನೀಡುವವಳಾದ್ದರಿಂದ “ಶುಭಂಕರೀ” ಎಂದೂ ಕರೆಯುತ್ತಾರೆ. ಭಕ್ತರಿಗೆ, ಸಜ್ಜನರಿಗೆ ಸದಾ ಒಳ್ಳೆಯದನ್ನು ಮಾಡುತ್ತಾ, ದುಷ್ಟ ಜನರನ್ನು ಈ ದೇವಿ ಶಿಕ್ಷಿಸುತ್ತಾಳೆ. ದೇವಿ ಕಾಲರಾತ್ರಿಯನ್ನು ಆರಾಧಿಸಿದರೆ, ಅಗ್ನಿಭಯ, ಶತ್ರುಭಯ, ಜಲಭಯ, ಗ್ರಹಗಳ ಬಾಧೆಗಳಿಂದ ಮುಕ್ತರಾಗುತ್ತಾರೆ. ಸಪ್ತಮೀ ತಿಥಿಯ ರಾತ್ರಿಯನ್ನು ಕಾಳರಾತ್ರೀ ಎಂದೂ ಕರೆಯುತ್ತಾರೆ. ಮೈಸೂರಿನ ಅರಮನೆಯಲ್ಲಿ ಹಾಗೂ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಅಂದು ರಾತ್ರಿ ವಿಶೇಷವಾಗಿ ದೇವಿಯನ್ನು ಪೂಜಿಸುವ ಸಂಪ್ರದಾಯ ಇಂದಿಗೂ ನಡೆದುಕೊಂಡು ಬರುತ್ತಿದೆ. ಸಪ್ತಮೀ ತಿಥಿಯಂದು ನವರಾತ್ರಿಯ ಏಳನೇ ದಿವಸದಿಂದ ಈ ದೇವಿಯನ್ನು ಆರಾಧಿಸಲಾಗುತ್ತದೆ. ಅಂದು ಸಾಧಕನ ಮನಸ್ಸು ಸಹಸ್ರಾರ ಚಕ್ರದಲ್ಲಿ ಪ್ರತಿಷ್ಠಿತಗೊಳ್ಳುತ್ತದೆ. ಬ್ರಹ್ಮಾಂಡದ ಸಕಲ ಸಿದ್ಧಿಗಳೂ ಅವನಿಗೆ ದೊರೆಯುತ್ತವೆ. ಸಾಧಕನ ಮನಸ್ಸು ಮಾತೆಯ ಸ್ವರೂಪದಲ್ಲಿ ಸ್ಥಿರವಾಗುತ್ತದೆ. #ನವರಾತ್ರಿ2025 #ವಿಶ್ವಗುರು_ಭಾರತ 🚩🙏 #ಮಹಾರಕ್ಷಕ್ #ಮಹಾರಕ್ಷಕ್ Maharakshak🇮🇳🇮🇳🇮🇳 #ಕೊಹಿನೂರ್ #KohiNoor ##ಕೊಹಿನೂರ್
Shiva Bennoli YB
738 views
6 months ago
ನವರಾತ್ರಿಯ #ಎರಡನೆಯ_ದಿನ #ಬ್ರಹ್ಮಚಾರಿಣಿಯನ್ನು ಪೂಜಿಸಲಾಗುತ್ತದೆ. ನವದುರ್ಗೆಯರಲ್ಲಿ ಬ್ರಹ್ಮಚಾರಿಣಿಯದ್ದು ಎರಡನೇ ರೂಪವಾಗಿದೆ. ಶಿವನನ್ನು ಪಡೆಯಲು ಕಠಿಣ ತಪಸ್ಸು ಮಾಡಿ ಬ್ರಹ್ಮಚಾರಿಣಿಯಾದಳು. ಇವಳಿಗೆ #ತಪಶ್ವಾರಿಣಿ ಎಂಬ ಹೆಸರೂ ಕೂಡ ಇದೆ. ಇವಳ ರೂಪ ಪೂರ್ಣ ಜ್ಯೋತಿರ್ಮಯ ಮತ್ತು ಭವ್ಯವಾಗಿದೆ. ಬಿಳಿಸೀರೆ ಧರಿಸಿ, ಕೈಯಲ್ಲಿ ಜಪಮಾಲೆ, ಕಮಂಡಲ, ಮತ್ತೊಂದು ಕೈಯಲ್ಲಿ ಜಪಮಾಲೆಯನ್ನು ಧರಿಸಿ, ಬ್ರಹ್ಮಚಾರಿಣಿ ರೂಪದಲ್ಲಿ ಇರುತ್ತಾಳೆ. ಇವಳ ಉಪಾಸನೆಯಿಂದ ತ್ಯಾಗ, ವೈರಾಗ್ಯ, ಸಂಯಮ ವೃದ್ಧಿಯಾಗುತ್ತದೆ. ಇಂದು #ಯೋಗಿಗಳ ಮನಸ್ಸು ಸ್ವಾದಿಷ್ಟಾನ ಚಕ್ರದಲ್ಲಿ ಸ್ಥಿತವಾಗುತ್ತೆ.ಈ ದೇವಿಯನ್ನು ಪೂಜೆ ಮಾಡಿದರೆ ಸ್ವಚರಿತ್ರೆಯ ಪ್ರೇರಣೆ ಮತ್ತು ಬ್ರಹ್ಮಜ್ಞಾನ ಸಿಗುತ್ತದೆ. ಶಿವನನ್ನು ಮದುವೆಯಾಗಬೇಕೆಂದು ಬಯಸಿದ ಬ್ರಹ್ಮಚಾರಿಣಿ ದೇವಿಯು ಹಲವಾರು ವರ್ಷಗಳ ಕಾಲ ತಪಸ್ಸನ್ನು ಆಚರಿಸುತ್ತಾಳೆ. ಮೊದಲು ಆಕೆ ಕೇವಲ ಹಣ್ಣುಗಳನ್ನು ಮಾತ್ರ ತಿಂದರೆ ಬಳಿಕ ಒಣಗಿದ ಬಿಲ್ವಪತ್ರೆಯ ಎಲೆಗಳನ್ನು ಸೇವಿಸುತ್ತಾಳೆ. ಅಂತಿಮವಾಗಿ ಸಂಪೂರ್ಣ ಆಹಾರವನ್ನು ತ್ಯಜಿಸಿ ತಪಸ್ಸಿನಲ್ಲಿ ಧಾನ್ಯಳಾದ ಬ್ರಹ್ಮಚಾರಿಣಿ ದೇವಿಯ ತಪಸ್ಸಿಗೆ ಒಲಿದ ಬ್ರಹ್ಮನು ಪ್ರತ್ಯಕ್ಷನಾಗಿ ಶಿವನನ್ನು ಮದುವೆಯಾಗು ಎಂದು ವರ ನೀಡುತ್ತಾನೆ. ನವರಾತ್ರಿ ದಿನದ ಬಣ್ಣ ಕಿತ್ತಳೆಯಾಗಿದೆ. ಕಿತ್ತಳೆ ಬಣ್ಣದ ದಿರಿಸನ್ನು ನೀವು ಈ ದಿನ ತೊಟ್ಟುಕೊಳ್ಳಬಹುದಾಗಿದೆ. ಬ್ರಹ್ಮಚಾರಿಣಿ ದೇವಿಯನ್ನು ಪೂಜಿಸಿ ನಿಮ್ಮ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳಿ. ಬ್ರಹ್ಮಚಾರಿಣಿ ದೇವಿ ಮಂತ್ರ : ದಾದಹಾನ ಕರ್ಪದಮಅಭಯಾಮಸ್ಕಮಲ ಕಾಮದಲು ದೇವಿ ಪ್ರಸಿದತು ಮಯಿ ಬ್ರಹ್ಮಚಾರಿಣಿಯಂತಮ.! 🚩🙏. #ನವರಾತ್ರಿ2025 #ವಿಶ್ವಗುರು_ಭಾರತ 🙏🚩 #ಮಹಾರಕ್ಷಕ್ Maharakshak🇮🇳🇮🇳🇮🇳 ##ಕೊಹಿನೂರ್ #ಮಹಾರಕ್ಷಕ್ #ಕೊಹಿನೂರ್ #KohiNoor