ಬಸವೇಶ್ವರ ವಚನಗಳು

ಕಾಯಕವೇ ಕೈಲಾಸ..
793 views
18 days ago
"ನಡೆಯಲರಿಯದೆ, ನುಡಿಯಲರಿಯದೆ ಲಿಂಗವ ಪೂಜಿಸಿ ಫಲವೇನು??? ಅವರ ಸುಖವೆನ್ನ ಸುಖ. ಅವರ ದುಃಖವೆನ್ನ ದುಃಖ! ಕೂಡಲಸಂಗನ ಶರಣರ ಮನನೊಂದರೆ ಆನು ಬೆಂದೆನಯ್ಯಾ! ✍️ ವಿಶ್ವಗುರು ಬಸವಣ್ಣ ನವರ ವಚನ.. ಶರಣು ಶರಣಾರ್ಥಿಗಳು 🙏 #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
ಕಾಯಕವೇ ಕೈಲಾಸ..
1.3K views
27 days ago
ಅಣ್ಣ ಬಸವಣ್ಣನವರು ಅನುಭವ ಮಂಟಪ ಕಟ್ಟಿದ ಉಲ್ಲೇಖ ಈ ವಚನದಲ್ಲಿದೆ.. "ಪ್ರಣವದ ಬೀಜವ ಬಿತ್ತಿ, ಪಂಚಾಕ್ಷರಿಯ ಬೆಳೆಯ ಬೆಳೆದು, ಪರಮ ಪ್ರಸಾದವನೊಂದು ರೂಪಮಾಡಿ ಮೆರೆದು, ಭಕ್ತಿಫಲವನುಂಡಾತ ನಮ್ಮ ಬಸವಯ್ಯನು. ಚೆನ್ನಬಸವನೆಂಬ ಪ್ರಸಾದಿಯ ಪಡೆದು, ಅನುಭವಮಂಟಪವನನುಮಾಡಿ, ಅನುಭವಮೂರ್ತಿಯಾದ ನಮ್ಮ ಬಸವಯ್ಯನು. ಅರಿವ ಸಂಪಾದಿಸಿ ಆಚಾರವನಂಗಂಗೊಳಿಸಿ, ಏಳುನೂರೆಪ್ಪತ್ತು ಅಮರಗಣಂಗಳ ಅನುಭವಮೂರ್ತಿಗಳ ಮಾಡಿದಾತ ನಮ್ಮ ಬಸವಯ್ಯನು. ಆ ಅನುಭವದಲ್ಲಿ ಐಕ್ಯಪ್ರಸಾದವನಂಗಂಗೊಂಡು, ಮಂತ್ರ ನಿರ್ಮಂತ್ರವಾದಾತ ನಮ್ಮ ಬಸವಯ್ಯನು. ಭಕ್ತಿಸ್ಥಲವನಳಿದು ಭಾವವಡಗಿ ಬಟ್ಟಬಯಲ ಕೂಡಿ, ಸಂಗಯ್ಯನಲ್ಲಿ ಸ್ವಯಲಿಂಗಿಯಾದ ನಮ್ಮ ಬಸವಯ್ಯನು.. ✍️ ನೀಲಾಂಬಿಕೆ ತಾಯಿ ಯವರ ವಚನ.. (ಬಸವಣ್ಣನವರ ಧರ್ಮಪತ್ನಿ) ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ