ShareChat
click to see wallet page
search
#😮ದಲಿತ ಯುವಕನ ಪ್ರೀತಿಸಿ ಮದುವೆ; ಗರ್ಭಿಣಿ ಮಗಳನ್ನೇ ಕೊಚ್ಚಿ ಕೊಂ* ತಂದೆ😱 ಹುಬ್ಬಳ್ಳಿ: ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಮಗಳನ್ನು ಸ್ವಂತ ತಂದೆ ಹಾಗೂ ಆತನ ಕುಟುಂಬದ ಸದಸ್ಯರು ಸೇರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದ ಹೃದಯ ವಿದ್ರಾವಕ ಘಟನೆ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ ರವಿವಾರ ನಡೆದಿದೆ.ಇನಾಂ ವೀರಾಪೂರ ಗ್ರಾಮದ ಮಾನ್ಯಾ ಎಂಬ ಯುವತಿ ಅದೇ ಗ್ರಾಮದ ವಿವೇಕಾನಂದ ದೊಡ್ಡಮನಿ ಎಂಬ ದಲಿತ ಯುವಕನನ್ನು ಕುಟುಂಬದ ವಿರೋಧದ ನಡುವೆಯೂ ಮೇ ತಿಂಗಳಲ್ಲಿ ಮದುವೆಯಾಗಿದ್ದರು.ಮದುವೆಯ ನಂತರ ಪ್ರಾಣಭಯದಿಂದ ಹಾವೇರಿಯಲ್ಲಿ ನೆಲೆಸಿದ್ದ ದಂಪತಿ, ಇತ್ತೀಚೆಗೆ ತಮ್ಮ ಸ್ವಗ್ರಾಮಕ್ಕೆ ಮರಳಿ ವೈವಾಹಿಕ ಜೀವನ ನಡೆಸುತ್ತಿದ್ದರು ಎನ್ನಲಾಗಿದೆ. ಭಾನುವಾರ ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವಿವೇಕಾನಂದ ಹಾಗೂ ಅವರ ತಂದೆಯ ಮೇಲೆ ಮಾನ್ಯಾಳ ಕುಟುಂಬದವರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಬಳಿಕ ಯುವಕನ ಮನೆಗೆ ತೆರಳಿ ಮಾನ್ಯಾ, ವಿವೇಕಾನಂದನ ತಾಯಿ ರೇಣವ್ವ ಸೇರಿದಂತೆ ಕುಟುಂಬದ ಇತರ ಸದಸ್ಯರ ಮೇಲೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ. #😞 ಮೂಡ್ ಆಫ್ ಸ್ಟೇಟಸ್ #🆕ಲೇಟೆಸ್ಟ್ ಅಪ್ಡೇಟ್ಸ್ 📰 #📰ಇಂದಿನ ಅಪ್ಡೇಟ್ಸ್ 📲
😮ದಲಿತ ಯುವಕನ ಪ್ರೀತಿಸಿ ಮದುವೆ; ಗರ್ಭಿಣಿ ಮಗಳನ್ನೇ ಕೊಚ್ಚಿ ಕೊಂ* ತಂದೆ😱 - ShareChat
00:07