"ಕಲ್ಯಾಣವೆಂಬ ಪ್ರಣತೆಯಲ್ಲಿ,
ಭಕ್ತಿರಸವೆಂಬ ತೈಲವನೆರೆದು, ಆಚಾರವೆಂಬ ಬತ್ತಿಗೆ, ಬಸವಣ್ಣನೆಂಬ ಜ್ಯೋತಿಯ ಮುಟ್ಟಿಸಲು, ತೊಳಗಿ ಬೆಳಗುತ್ತಿದ್ದಿತ್ತಯ್ಯಾ ಶಿವನ ಪ್ರಕಾಶ! ಆ ಬೆಳಗಿನೊಳಗೆ ಒಪ್ಪುತ್ತಿದ್ದರಯ್ಯಾ ಅಸಂಖ್ಯಾತ ಭಕ್ತಗಣಂಗಳು. ಶಿವಭಕ್ತರಿರ್ದ ಕ್ಷೇತ್ರವೆ ಅವಿಮುಕ್ತ ಕ್ಷೇತ್ರವೆಂಬುದು ಹುಸಿಯೆ? ಶಿವಭಕ್ತರಿರ್ದ ದೇಶ ಪಾವನವೆಂಬುದು ಹುಸಿಯೆ??? ಗುಹೇಶ್ವರ ಲಿಂಗದಲ್ಲಿ ಎನ್ನ ಪರಮಾರಾಧ್ಯ ಸಂಗನಬಸವಣ್ಣನ ಮಹಿಮೆಯ ನೋಡಾ ಸಿದ್ಧರಾಮಯ್ಯಾ.. ✍ ಅಲ್ಲಮಪ್ರಭು ದೇವರ ವಚನ.. ಸ.ವ.ಸಂ:೨ ವ.ಸಂ:೧೦೫೯.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು


