ಬಿಕ್ಲು ಶಿವ ಕೊಲೆ ಪ್ರಕರಣ: ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಬಳಿಕ ಕೋರ್ಟ್ʼಗೆ ಹಾಜರ್! - AIN Kannada
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಬೈರತಿ ಬಸವರಾಜ್ ಅವರನ್ನು ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲು ಸಿಐಡಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಪ್ರಕರಣದ ತನಿಖೆಗಾಗಿ ಕನಿಷ್ಠ ಐದು ದಿನಗಳ ಪೊಲೀಸ್ ಕಸ್ಟಡಿಗೆ ಮನವಿ ಮಾಡುವ ಸಾಧ್ಯತೆ ಇದೆ. ಕೊಲೆಯಾದ ಬಿಕ್ಲು ಶಿವ ಮತ್ತು ಆರೋಪಿಗಳಾದ ಅಜಿತ್ ಹಾಗೂ ಬೈರತಿ ಬಸವರಾಜ್ ನಡುವಿನ ವ್ಯವಹಾರ ಸಂಬಂಧಿತ ಮಾಹಿತಿ ಕುರಿತು ವಿಚಾರಣೆ ನಡೆಸಲು ಅಧಿಕಾರಿಗಳು ಕಸ್ಟಡಿ ಕೇಳಲು ಮುಂದಾಗಿದ್ದಾರೆ. https://ainkannada.com/if-you-make-these-mistakes-regarding-money-you-will-definitely-face-difficulties/