ShareChat
click to see wallet page
search
ಅಣ್ಣ ಬಸವಣ್ಣನವರು ಅನುಭವ ಮಂಟಪ ಕಟ್ಟಿದ ಉಲ್ಲೇಖ ಈ ವಚನದಲ್ಲಿದೆ.. "ಪ್ರಣವದ ಬೀಜವ ಬಿತ್ತಿ, ಪಂಚಾಕ್ಷರಿಯ ಬೆಳೆಯ ಬೆಳೆದು, ಪರಮ ಪ್ರಸಾದವನೊಂದು ರೂಪಮಾಡಿ ಮೆರೆದು, ಭಕ್ತಿಫಲವನುಂಡಾತ ನಮ್ಮ ಬಸವಯ್ಯನು. ಚೆನ್ನಬಸವನೆಂಬ ಪ್ರಸಾದಿಯ ಪಡೆದು, ಅನುಭವಮಂಟಪವನನುಮಾಡಿ, ಅನುಭವಮೂರ್ತಿಯಾದ ನಮ್ಮ ಬಸವಯ್ಯನು. ಅರಿವ ಸಂಪಾದಿಸಿ ಆಚಾರವನಂಗಂಗೊಳಿಸಿ, ಏಳುನೂರೆಪ್ಪತ್ತು ಅಮರಗಣಂಗಳ ಅನುಭವಮೂರ್ತಿಗಳ ಮಾಡಿದಾತ ನಮ್ಮ ಬಸವಯ್ಯನು. ಆ ಅನುಭವದಲ್ಲಿ ಐಕ್ಯಪ್ರಸಾದವನಂಗಂಗೊಂಡು, ಮಂತ್ರ ನಿರ್ಮಂತ್ರವಾದಾತ ನಮ್ಮ ಬಸವಯ್ಯನು. ಭಕ್ತಿಸ್ಥಲವನಳಿದು ಭಾವವಡಗಿ ಬಟ್ಟಬಯಲ ಕೂಡಿ, ಸಂಗಯ್ಯನಲ್ಲಿ ಸ್ವಯಲಿಂಗಿಯಾದ ನಮ್ಮ ಬಸವಯ್ಯನು.. ✍️ ನೀಲಾಂಬಿಕೆ ತಾಯಿ ಯವರ ವಚನ.. (ಬಸವಣ್ಣನವರ ಧರ್ಮಪತ್ನಿ) ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ
ಬಸವಣ್ಣನವರ ವಚನಗಳು - ShareChat