"ಅಯ್ಯಾ, ಎಳಗರು ತಾಯನರಸಿ ಬಳಲುವಂತೆ ನಾ ನಿಮ್ಮನರಸಿ ಬಳಲುತ್ತಿದ್ದೇನೆ. ಅಯ್ಯಾ, ನೀವೆನ್ನ ಮನಕ್ಕೆ ಪ್ರಸನ್ನವಾಗಿ ಕಾರುಣ್ಯವ ಮಾಡು. ಅಯ್ಯಾ, ನೀವೆನ್ನ ಮನಕ್ಕೆ ನೆಲೆವನೆಯಾಗಿ ಕಾರುಣ್ಯವ ಮಾಡು, ಕಾರುಣ್ಯವ ಮಾಡು. ನೀನಿನಿತು ಲೇಸನೀಯಯ್ಯಾ, ಅಂಬೇ ಅಂಬೇ ಕೂಡಲಸಂಗಮದೇವಾ.. ✍🏻 ವಿಶ್ವ ಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು


