"ಗುರುಸಾಹಿತ್ಯ ಚೆನ್ನಬಸವಂಗಾಯಿತ್ತು ;
"ಲಿಂಗಸಾಹಿತ್ಯ ಬಸವಂಗಾಯಿತ್ತು ;
"ಜಂಗಮಸಾಹಿತ್ಯ ಅಲ್ಲಮದೇವಂಗಾಯಿತ್ತು ;
"ಪ್ರಸಾದಸಾಹಿತ್ಯ ಬಿಬ್ಬಿಬಾಚರಸಂಗಾಯಿತ್ತು ;
"ಪಾದೋದಕಸಾಹಿತ್ಯ ಹೊಡೆಹುಲ್ಲ ಬಂಕಯ್ಯಂಗಾಯಿತ್ತು ;
"ಭಸ್ಮಸಾಹಿತ್ಯ ಅಕ್ಕನಾಗಮ್ಮಂಗಾಯಿತ್ತು ;
"ರುದ್ರಾಕ್ಷಿಸಾಹಿತ್ಯ ಸರ್ವಪ್ರಮಥರಿಗಾಯಿತ್ತು.
"ಮಂತ್ರಸಾಹಿತ್ಯದವರ ಕಂಡಡೆ, ಕಪಿಲಸಿದ್ಧಮಲ್ಲಿಕಾರ್ಜುನಯ್ಯನಿವರೆ ಎಂದು ಎನ್ನ ಮನ ನಂಬಿತ್ತು ನೋಡಾ, ಮಡಿವಾಳ ಮಾಚಯ್ಯ.. ✍ ಸಿದ್ದರಾಮೇಶ್ವರರ ವಚನ.. ಸ.ವ.ಸಂ:೪ ವ.ಸಂ:೧೯೪೧ #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳//


