"ಎನ್ನ ತನುಮನವೆರಡನೂ ಗುರು ಕಳೆದು ಲಿಂಗದಲಿ ಏಕವ ಮಾಡಿದನಾಗಿ, ಎನ್ನ ಅಂತರಂಗ ಬಹಿರಂಗವೆರಡೂ ನಿಮ್ಮವು ನೋಡಾ! ನಿಮ್ಮ ಅಂತರಂಗದೊಳಗೆ ನಿಮ್ಮನೆ ಇಂಬಿಟ್ಟುಕೊಂಬೆ, ನಿಮ್ಮ ಬಹಿರಂಗದೊಳಗೆ ನಿಮ್ಮನೆ ನೀವಾಗಿ ಪೂಜಿಸುವೆ, ನಿಮ್ಮ ಅರಿವಿಂದ ನಿಮ್ಮನೆ ಅರಿವೆ ಕಾಣಾ, ಕೂಡಲಸಂಗಮದೇವಾ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು


