"ಅಯ್ಯಾ, ಸಜ್ಜನ ಸದ್ಭಕ್ತರ ಸಂಗದಿಂದ ಮಹಾನುಭಾವರ ಕಾಣಬಹುದು. ಮಹಾನುಭಾವರ ಸಂಗದಿಂದ ಶ್ರಿಗುರುವನರಿಯಬಹುದು. ಲಿಂಗವನರಿಯಬಹುದು ಜಂಗಮವನರಿಯಬಹುದು. ಪ್ರಸಾದವನರಿಯಬಹುದು. ತನ್ನ ತಾನರಿಯಬಹುದು. ಇದು ಕಾರಣ ಸದ್ಭಕ್ತರ ಸಂಗವ ಕರುಣಿಸು ಕೂಡಲಸಂಗಮದೇವಾ ನಿಮ್ಮ ಧರ್ಮ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು


