"ಅಂಗದ ಮೇಲಣ ಲಿಂಗವ ಹಿಂಗಿದಾತನ ಭವಿಯೆಂಬರು, ಅಂಗದ ಮೇಲಣ ಲಿಂಗವು ಇಪ್ಪಾತನ ಭಕ್ತನೆಂಬರು, ಅಂಗದೊಳಗೆ ಬೆರಸಿಪ್ಪ ಲಿಂಗದ ಹೊಲಬನರಿಯದೆ. ಲಿಂಗವಿಲ್ಲದೆ ಒಂದು ಕ್ಷಣ ಒಂದಂಗ ಸುಳಿದುದುಂಟೆ ಜಗದೊಳಗೆ??? ಅಂಗದೊಳಗಣ ಲಿಂಗವನು ಹಿಂಗಿದವರಿಗೆ ಭವಮಾಲೆಯುಂಟು, ಹಿಂಗದವರಿಗೆ ಭವಮಾಲೆಯಿಲ್ಲ ಗುಹೇಶ್ವರಾ.. ✍️ ಅಲ್ಲಮಪ್ರಭುದೇವರ ವಚನ.. ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು


