ಬೆಂಗಳೂರಿನಲ್ಲಿ ಹದಗೆಟ್ಟ ರಸ್ತೆಯಿಂದ ಭೀಕರ ಅಪಘಾತ: 2 ವರ್ಷದ ಮಗುವಿನ ಮೇಲೆ ಹರಿದ ಕಾರು! - AIN Kannada
ಬೆಂಗಳೂರು: ಮಹದೇವಪುರ ಕ್ಷೇತ್ರದ ಕಿತ್ತಗನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳೆಹಳ್ಳಿ ರಸ್ತೆಯಲ್ಲಿ ಅಪಘಾತ ಸಂಭವಿಸಿ ಎರಡು ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ದೇವರ ದರ್ಶನ ಮುಗಿಸಿಕೊಂಡು ಬೈಕ್ನಲ್ಲಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ, ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮವಾಗಿ ಕೆಳಗೆ ಬಿದ್ದ ಎರಡು ವರ್ಷದ ತ್ರಿಶೂಲ್ ಎಂಬ ಕಂದಮ್ಮನ ತಲೆಯ ಮೇಲೆ ಕಾರು ಹರಿದಿದ್ದು, ಸ್ಥಳದಲ್ಲೇ ಮಗು ಮೃತಪಟ್ಟಿದೆ. https://ainkannada.com/follow-this-dinner-routine-weight-loss-is-guaranteed-in-just-one-month/ ಸ್ಥಳೀಯರ ಆರೋಪದಂತೆ, ಹದಗೆಟ್ಟ ರಸ್ತೆ ಹಾಗೂ ಅಪೂರ್ಣ ದುರಸ್ತಿ