ಶ್ರೀ ಗುರುಬಸವ ಲಿಂಗಾಯ ನಮಃ.. "ಅಯ್ಯಾ, ನಾನು ಹುಟ್ಟಿದಂದಿಂದ ಲಿಂಗವನಲ್ಲದೆ ಆರಾಧಿಸೆ. ಜಂಗಮಕ್ಕಲ್ಲದೆ ನೀಡೆ, ಶರಣಸಂಗವಲ್ಲದೆ ಮಾಡೆ. ಕಲ್ಯಾಣದ ಮಹಾಗಣಂಗಳೊಂದು ಹೊಳೆಯ ಮಾಡಿಕೊಟ್ಟರು. ಆ ಹೊಳೆಯಲ್ಲಿ ಹೆಣ್ಣು ಗಂಡು ಸುಳಿಯಲೀಯೆನು. ಚಿಕ್ಕವರು ಹಿರಿಯರ ಸುಳಿಯಲೀಯೆನು. ಎಲ್ಲಾ ಮಹಾಗಣಂಗಳು ಎನ್ನ ಹೊಳೆಯಲೆ ಹಾಯುವರು. ಲಿಂಗದ ವಸ್ತ್ರವನೊಗೆದು ಕಾಯಕದಲ್ಲಿ ಶುದ್ಧನಾದೆನು. ಎನ್ನ ಕಾಯಕವನವಧರಿಸು ಕಲಿದೇವಯ್ಯಾ.. ✍️ ಮಡಿವಾಳ ಮಾಚಿದೇವರ ವಚನ..
ಸಮಸ್ತ ಶರಣ ಬಾಂಧವರಿಗೆ ವೀರ ಗಣಾಚಾರಿ ಮಡಿವಾಳ ಮಾಚಿದೇವರ ಜಯಂತಿಯ ಹಾರ್ದಿಕ ಶುಭಾಶಯಗಳು.. #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು


