ShareChat
click to see wallet page
search
#💐ಬುಧವಾರದ ಶುಭಾಶಯ ಕನ್ನಡ ಸಾಹಿತ್ಯಲೋಕದ ಪ್ರಮುಖರು, ಸ್ವಾತಂತ್ರ್ಯ ಹೋರಾಟಗಾರ, ಕರ್ನಾಟಕ ರಾಜ್ಯ ಏಕೀಕರಣಕ್ಕೆ ಶ್ರಮಿಸಿದ ಮಹಾನ್ ಚೇತನ, ಕನ್ನಡ ಕುಲಪುರೋಹಿತರು ಎಂದೇ ಖ್ಯಾತರಾದ ಶ್ರೀ ಆಲೂರು ವೆಂಕಟರಾಯರು ಅವರ ಪುಣ್ಯಸ್ಮರಣೆಯಂದು ಅನಂತ ನಮನಗಳು.ಜಯ ಕರ್ನಾಟಕದ ಲೇಖನ ಕರ್ನಾಟಕ ಕುಲಪುರೋಹಿತರಾದ ಇವರು ಉಜ್ವಲ ದೇಶಭಕ್ತರು. ತಮ್ಮ ಬದುಕನ್ನೇ ದೇಶಸೇವೆಗೆ ಮುಡುಪಾಗಿಟ್ಟವರು. ಕರ್ನಾಟಕದಲ್ಲಿ ಭಾರತವಿದೆ ಎನ್ನುವ ವಿಶಿಷ್ಟ ತತ್ವದ ಮೂಲಕ ನಾಡಿಗೆ ಕರ್ನಾಟಕತ್ವದ ಬೀಜಮಂತ್ರ ಕೊಟ್ಟ ಇವರ ಕೊಡುಗೆ ಅಪಾರ.ಆಲೂರು ವೆಂಕಟರಾಯರು ಕನ್ನಡ ಸಾಹಿತ್ಯಲೋಕದ ಪ್ರಮುಖರಲ್ಲೊಬ್ಬರು. ಕನ್ನಡ ಸಾಹಿತ್ಯ, ಪತ್ರಿಕೋದ್ಯಮ, ಸಾಂಸ್ಕೃತಿಕ ವಲಯದಲ್ಲಿ ನೀಡಿರುವ ಕಾಯಕಲ್ಪದಿಂದಾಗಿ ಕನ್ನಡ ಕುಲಪುರೋಹಿತರು ಎಂದು ಗೌರವಾನ್ವಿತ ಸ್ಥಾನ ಪಡೆದವರಾಗಿದ್ದಾರೆ.ಆಲೂರು ವೆಂಕಟರಾಯರು೧೮೮೦ ,ಜುಲೈ ೧೨ರಂದು ವಿಜಯಪುರದಲ್ಲಿ ಜನಿಸಿದರು. ಇವರ ವಂಶಜರು ಧಾರವಾಡದ ಬಳಿಯ ಆಲೂರ ಈಗಿನ ಗದಗ ಜಿಲ್ಲೆ, ರೋಣ ತಾಲ್ಲೂಕಿನ ಹೊಳೆ-ಆಲೂರ ಗೆ ಬಂದು ನೆಲೆಸಿದ್ದರಿಂದ ಆಲೂರು ಇವರ ಮನೆತನದ ಹೆಸರಾಯಿತು. ತಂದೆ ಭೀಮರಾಯರು, ತಾಯಿ ಭಾಗೀರಥಮ್ಮ.ಧಾರವಾಡದಲ್ಲಿ ಆರಂಭದ ಶಿಕ್ಷಣ ಮುಗಿಸಿದ ವೆಂಕಟರಾಯರು ಪುಣೆಯ ಫರ್ಗ್ಯೂಸನ್ ಕಾಲೇಜಿನಿಂದ ೧೯೦೩ರಲ್ಲಿ ಬಿ.ಎ. ಪದವಿ ಪಡೆದರು. ೧೯೦೫ರಲ್ಲಿ ಮುಂಬಯಿಯಲ್ಲಿ ಎಲ್.ಎಲ್.ಬಿ. ಪದವಿಯನ್ನು ಗಳಿಸಿ, ಧಾರವಾಡಕ್ಕೆ ಮರಳಿದರು. ಸೇನಾಪತಿ ಬಾಪಟ್ ರವರು ಮತ್ತು ವೀರ್ ಸಾವರ್ಕರ್ ರವರು ಇವರ ಸಹಾಧ್ಯಾಯಿಗಳು.ಒಮ್ಮೆ ಬೇಸಿಗೆ ರಜೆಯಲ್ಲಿ, ನವ ವೃಂದಾವನ, ಆನೆಗೊಂದಿಗಳನ್ನು ಸಂದರ್ಶಿಸಿ ಅಲ್ಲಿಂದ ಹಂಪಿಗೆ ಹೋದರು. ಹಂಪಿಯ ಅವಶೇಷಗಳು ಅವರ ಮನಸ್ಸಿನ ಮೇಲೆ ಅಪೂರ್ವ ಪರಿಣಾಮ ಉಂಟುಮಾಡಿದವು. ಅವರ ಮಾತಿನಲ್ಲೇ ಹೇಳುವುದಾದರೆ: "ನಮ್ಮ ವಿಜಯನಗರವು ಅಲ್ಲಿ ಪ್ರತ್ಯಕ್ಷವಾಗಿಯೂ ವಿಸ್ತಾರವಾಗಿಯೂ ನನ್ನ ಮುಂದೆ ಬಿದ್ದಿದೆ. ಆ ದರ್ಶನವು ನನ್ನ ಮನದಲ್ಲಿ ವಿದ್ಯುತ್ತಿನ ಸಂಚಾರವನ್ನು ಮೂಡಿಸಿತು. ಚಲನಚಿತ್ರ ಪಟದಲ್ಲಿ ವಿದ್ಯುದ್ದೀಪದ ಬಲದಿಂದ ಮೂರ್ತಿಗಳು ಮೂಡುವಂತೆ ನನ್ನ ಹೃದಯದಲ್ಲಿ ಕರ್ನಾಟಕ ದೇವಿಯ ಸುಂದರ ಮೂರ್ತಿಯು ಒಡಮೂಡಹತ್ತಿತು. ಆ ದರ್ಶನವು ನನ್ನ ತಲೆಯಲ್ಲಿ ನಾನಾ ವಿದ ತರಂಗಗಳಿಗೆ ಇಂಬುಗೊಟ್ಟಿತು. ಹೃದಯ ಸಮುದ್ರವು ಅಲ್ಲೋಲ ಕಲ್ಲೋಲವಾಯಿತು. ಆ ದಿವಸವು ನನ್ನ ಜೀವನದ ಕ್ರಮದಲ್ಲಿ ಕ್ರಾಂತಿಯನ್ನು ಮಾಡಲಿಕ್ಕೆ ಕಾರಣವಾಯಿತು." ಇದರಿಂದಾಗಿ ಆಲೂರರು ಕರ್ನಾಟಕದ ಇತಿಹಾಸ, ಸಾಹಿತ್ಯಗಳ ವ್ಯಾಸಂಗಕ್ಕೆ ತೊಡಗಿದರು.ಆ ಕಾಲದಲ್ಲಿ ಮುಂಬಯಿ ಪ್ರಾಂತದಲ್ಲಿದ್ದ ಕನ್ನಡ ಪ್ರದೇಶಗಳಲ್ಲಿ ಮರಾಠಿಯದೆ ಪ್ರಾಬಲ್ಯ. ಕರ್ನಾಟಕ ವಿದ್ಯಾವರ್ಧಕ ಸಂಘವನ್ನು ಪ್ರವೇಶಿಸಿದರು. ಸಂಘದ ಸ್ಥಿತಿ ಅಷ್ಟೊಂದು ಸಮರ್ಪಕವಾಗಿಲ್ಲದ ಕಾರಣ, ಅದರ ಕಾರ್ಯಭಾರವನ್ನು ಹೊತ್ತುಕೊಂಡರು. ಕನ್ನಡಿಗರನ್ನು ಜಾಗೃತಗೊಳಿಸಲು ವೆಂಕಟರಾಯರು ೧೯೦೬ರಲ್ಲಿ ವಾಗ್ಭೂಷಣ ಎಂಬ ಪತ್ರಿಕೆ ಆರಂಭಿಸಿದರು. ತಮ್ಮ ಸಾಮರ್ಥ್ಯದಿಂದ ಆ ಪತ್ರಿಕೆಗೆ ಹೊಸ ರೂಪವನ್ನು ಕೊಟ್ಟರು. ವಕೀಲಿ ವೃತ್ತಿಯನ್ನು ತೊರೆದು ಸ್ವದೇಶಿ ಚಳುವಳಿಯಲ್ಲಿ ಭಾಗವಹಿಸಿದರು. ೧೯೨೨ ನವೆಂಬರ್ ೪ರಂದು ಜಯಕರ್ನಾಟಕ ಪತ್ರಿಕೆಯನ್ನು ಪ್ರಾರಂಭಿಸಿದರು. ಈ ಪತ್ರಿಕೆ ಆರು ವರ್ಷಗಳವರೆಗೆ ನಡೆಯಿತು. ಈ ಪತ್ರಿಕೆಗೆ ಬೆಟಗೇರಿ ಕೃಷ್ಣಶರ್ಮ, ದ.ರಾ.ಬೇಂದ್ರೆ ಮೊದಲಾದ ಶ್ರೇಷ್ಠ ಸಾಹಿತಿಗಳು ಸಹಸಂಸ್ಥಾಪಕ ಸಂಪಾದಕರಾಗಿ ಕೆಲಸ ಮಾಡಿದ್ದಾರೆ. ಇದರಂತೆಯೆ ಕನ್ನಡಿಗ, ಕರ್ಮವೀರ ಮೊದಲಾದ ಪತ್ರಿಕೆಗಳ ಸಂಪಾದಕತ್ವವನ್ನು ಸಹ ವಹಿಸಿಕೊಂಡಿದ್ದರು. ಅಂದಿನ ದಿನಗಳಲ್ಲಿ ಕನ್ನಡದಲ್ಲಿ ಪುಸ್ತಕಗಳ ಕೊರತೆಯನ್ನು ನೀಗಿಸಲು ಕರ್ನಾಟಕದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಎರಡು ಬಾರಿ ಗ್ರಂಥಕರ್ತರ ಸಮಾವೇಶವನ್ನು ಕರೆದರು. ಮೂರನೆಯ ಅಧಿವೇಶನ ಬೆಂಗಳೂರಿನಲ್ಲಿ ನಡೆಸಬೇಕೆಂಬ ಆಶಯ ರೂಪುಗೊಂಡಿದ್ದು ಆರು ವರ್ಷಗಳ ನಂತರ. ೧೯೧೫ರಲ್ಲಿ ನಡೆದ ಆ ಘಟನೆ ಕರ್ನಾಟಕ ಸಾಹಿತ್ಯ ಪರಿಷತ್ತಿಗೆ ನಾಂದಿಹಾಡಿತು. ಧಾರವಾಡದಲ್ಲಿದ್ದುಕೊಂಡೆ ಆಲೂರರು ಈ ಕಾರ್ಯವನ್ನು ಆಗು ಮಾಡಿದರು.ಆಲೂರರ 'ಗತವೈಭವ'ದಲ್ಲಿನ ಈ ಕೆಳಗಿನ ಮಾತುಗಳಲ್ಲಿನ ವೀರ್ಯವತ್ತಾದ ಶೈಲಿ ಇಂತಿದೆ... "ನಾನು ಕನ್ನಡಿಗನು, ಕರ್ನಾಟಕವು ನನ್ನದು ಎಂಬ ಸದ್ವಿಚಾರ ತರಂಗಗಳಿಂದ ಯಾವನ ಹೃದಯವು ಆತ್ಮಾನಂದದಿಂದ ಪುಳಕಿತಗೊಳ್ಳುವುವುದಿಲ್ಲವೋ ಕನ್ನಡ ತಾಯಿಗೆ ಈಗ ಬಂದೊದಗಿರುವ ವಿಷಮ ಸ್ಥಿತಿಯಲ್ಲಿ ಯಾವಾತನ ಹೃದಯವು ತಲ್ಲಣಿಸುವುದಿಲ್ಲವೋ ಅದು ಹೃದಯವಲ್ಲ, ಕಲ್ಲಿನ ಬಂಡೆ; ದೇಹವಲ್ಲ, ಮೋಟು ಮರ". ಈ ಮಾತುಗಳು ಅಲೂರರು ಕಂಡ ಅಂದಿನ ಕನ್ನಡದ ದುರ್ಗತಿ, ಅದಕ್ಕಾಗಿ ಅವರು ರೂಢಿಸಿಕೊಂಡ ಮನೋಧರ್ಮ ತೋರುತ್ತವೆ. ಅವರು ಮಾಡಿದ ಕೆಲಸಗಳಾದರೋ ಅವರು ಮುಂದೆ ಕನ್ನಡಕ್ಕೆ ನೀಡಿದ ಕಾಯಕಲ್ಪವನ್ನು ಸಾರಿ ಹೇಳುತ್ತವೆ. ಕನ್ನಡದಲ್ಲಿ ಮುಂದೆ ಆದ ಕೆಲಸಗಳು, ಪಡೆದ ಕೀರ್ತಿ ಇವೆಲ್ಲಕ್ಕೂ ಆಲೂರು ವೆಂಕಟರಾಯರು ಮಾಡಿದ ಕಾರ್ಯಗಳು ಬುನಾದಿ ಒದಗಿಸಿವೆ.ಆಲೂರರು ಪ್ರಸಿದ್ಧ 'ಜಯಕರ್ನಾಟಕ' ಪತ್ರಿಕೆಯನ್ನು ೧೯೨೨ರಲ್ಲಿ ಸ್ಥಾಪಿಸಿದರು. ಆಲೂರರು ತಮ್ಮನ್ನು ತಾವು ಒಬ್ಬ ಸಾಹಿತಿಯೆಂದು ಎಲ್ಲಿಯೂ ಬಣ್ಣಿಸಿಕೊಂಡೇ ಇಲ್ಲ. ಆದರೆ, ದ.ರಾ ಬೇಂದ್ರೆ, ಬೆಟಗೇರಿ ಕೃಷ್ಣಶರ್ಮ, ಶ್ರೀರಂಗ, ಶಂ.ಭಾ ಜೋಷಿ, ರಂಗರಾವ್ ದಿವಕಾರ ಮುಂತಾದ ಹಲವು ಜನಪ್ರಿಯ ಸಾಹಿತಿ ಶ್ರೇಷ್ಠರಿಗೆ ಪೋಷಣೆ, ಪ್ರೋತ್ಸಾಹಗಳನ್ನು ನೀಡಿದರು. ಜಯಕರ್ನಾಟಕದ ಸಂಪಾದಕೀಯದಲ್ಲಿನ ಅವರು ಮಾತುಗಳು ಇಲ್ಲಿ ಉಲ್ಲೇಖನೀಯ. "ಕಚ್ಚಾ ಲೇಖಕರಿಗೂ, ಕಚ್ಚಾ ಕವಿಗಳಿಗೂ, ಅಶುದ್ಧ ಬರಹಗಳಿಗೂ ಆಸ್ಪದ ಕೊಟ್ಟಿರುವೆ. ಕರ್ನಾಟಕದ ಸಕಲಭಾಗಗಳಲ್ಲಿಯೂ ಲೇಖಕರು ಕವಿಗಳೂ ಹುಟ್ಟಬೇಕೆಂಬುದೇ ನನ್ನ ಉದ್ದೇಶ."ವರಕವಿ ದ.ರಾ. ಬೇಂದ್ರೆಯವರು ಅಲೂರರನ್ನು 'ಕರ್ನಾಟಕದ ಪ್ರಾಣೋಪಾಸಕರು' ಎಂದು ಕರೆದದ್ದು ಅರ್ಥಪೂರ್ಣವಾಗಿದೆ. ಬೇಂದ್ರೆಯವರು ಆಲೂರರ ವೈಶಿಷ್ಟ್ಯವನ್ನು ಹೀಗೆ ಗುರುತಿಸಿದ್ದಾರೆ: "ಬಹುಮುಖವಾಗಿಯೂ, ಏಕನಿಷ್ಠೆಯಿಂದಲೂ, ಅನನ್ಯ ಬುದ್ಧಿಯಿಂದಲೂ, ಸತತ ಅನುಸಂಧಾನದಿಂದಲೂ, ಕರ್ನಾಟಕದ ಸಲುವಾಗಿ ವಿಚಾರ ಮಾಡುವವರೂ, ತದನುಸಾರವಾಗಿಯೇ ಆಚರಿಸಲು ಪ್ರಯತ್ನಿಸುವವರೂ ಹಿರಿಯರಾದ ಕನ್ನಡಿಗರಲ್ಲಿ ಇನ್ನೂ ಇವರೊಬ್ಬರೇ! ಅದೇ ಇವರ ತಪಸ್ಸು. ಇವರ ಅದ್ವಿತೀಯವಾದ ಹೆಸರು ಅದರ ಫಲವು. ಇವರಲ್ಲಿ ಬುದ್ದಿಯ ಏಕಾಗ್ರ ವೃತ್ತಿಗಿಂತ ವ್ಯಾಪಕವೃತ್ತಿಯು ಹೆಚ್ಚು, ಮೂರ್ತಿಪೂಜೆಗಿಂತ ತತ್ವಪೂಜೆಯು ಅಧಿಕ. ಆಚಾರ ನಿಷ್ಠೆಗಿಂತ ವಿಚಾರ ನಿಷ್ಠೆ ಬಹಳ. ರಾಷ್ಟ್ರೀಯ ದೃಷ್ಠಿ ಹೆಚ್ಚು; ರಾಷ್ಟ್ರದರ್ಶನ ಕಡಿಮೆ. ಜನೋದ್ದೀಪನ ಹೆಚ್ಚು, ಜನ ನಿರ್ವಹಣ ಶಕ್ತಿ ಕಡಿಮೆ... ಇವರು ಜನನಾಯಕರಾಗದೆ ನೇತ್ರವಾಗಿದ್ದಾರೆ; ಮುಂದಾಳುಗಳಾಗದೆ ಪ್ರತಿನಿಧಿಗಳಾಗಿದ್ದಾರೆ.ಏಕೀಕರಣ ಹೋರಾಟದ ಮೂಲಕ ಕರ್ನಾಟಕ ರಾಜ್ಯವನ್ನು ಒಂದುಗೂಡಿಸಲು ಮುಂಚೂಣಿಯಲ್ಲಿದ್ದು ಶ್ರಮಿಸಿದ "ಕನ್ನಡದ ಕುಲ ಪುರೋಹಿತ" ಆಲೂರು ವೆಂಕಟರಾಯರ ದೇಶಾಭಿಮಾನ ಕುರಿತ ಅವರ ವಿಚಾರಗಳು ದೇಶದ ಯುವ ಜನತೆಗೆ ಸದಾ ಆದರ್ಶವಾಗಲಿ ಅವರ ಈ ಪುಣ್ಯಸ್ಮರಣೆಯ ದಿನದಂದು ನಾವು ಅವರಿಗೆ ಭಕ್ತಿಪೂರ್ವಕ ನಮನಗಳನ್ನು ಸಲ್ಲಿಸೋಣ #ನಿಮ್ಮ ಸ್ನೇಹಿತ ಅನಿಲ್ ಮಲ್ನಾಡ್
💐ಬುಧವಾರದ ಶುಭಾಶಯ - D 9 ಕರ್ನಾಟಕ  ಏಕೀಕರಣ   ಪಿತಾಮಹ ಆಲೂರು ವೆಂಕಟರಾಯರ್ ಪುಣ್ಯಸ್ಮರಣೆ " ಟುಲೈ 1880 ವಐ್ವರಿ 1964 12 2 D 9 ಕರ್ನಾಟಕ  ಏಕೀಕರಣ   ಪಿತಾಮಹ ಆಲೂರು ವೆಂಕಟರಾಯರ್ ಪುಣ್ಯಸ್ಮರಣೆ " ಟುಲೈ 1880 ವಐ್ವರಿ 1964 12 2 - ShareChat