ShareChat
click to see wallet page
search
"ಬಸವಣ್ಣ ಮರ್ತ್ಯಲೋಕಕ್ಕೆ ಬಂದು ಮಹಾಮನೆಯ ಕಟ್ಟಿ, ಭಕ್ತಿಜ್ಞಾನವೆಂಬ ಜ್ಯೋತಿಯನೆತ್ತಿ ತೋರಲು ಸುಜ್ಞಾನವೆಂಬ ಪ್ರಭೆ ಪಸರಿಸಿತಯ್ಯಾ ಜಗದೊಳಗೆ. ಬೆಳಗಿನೊಳು ತಿಳಿದು ನೋಡಿ ಹರೆದಿದ್ದ ಶಿವಗಣಂಗಳೆಲ್ಲ ನೆರೆದು ಕೂಡಿತಯ್ಯಾ. ಕೂಡಲಚೆನ್ನಸಂಗಮದೇವಾ ನಿಮ್ಮ ಶರಣ ಬಸವಣ್ಣನ ಕೃಪೆಯಿಂದ ಪ್ರಭುದೇವರ ನಿಜವನರಿದು ನಿಶ್ಚಿಂತರಾದರಯ್ಯಾ ಶಿವಗಣಂಗಳೆಲ್ಲರು".. ✍️ ಚಿನ್ಮಯ ಜ್ಞಾನಿ ಚೆನ್ನಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು
ಬಸವಣ್ಣನವರ ವಚನಗಳು - ShareChat