ಸಿದ್ದರಾಮಯ್ಯರ ಈ ಬಜೆಟ್ ಗೆ ಚಪ್ಪಾಳೆ ಸಿಕ್ಕಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ
ಮುಖ್ಯಮಂತ್ರಿ ಸಿದ್ದರಾಮಯ್ಯನವರು (Cmsiddaramaiah) ಮಂಡಿಸಿದ ಬಜೆಟ್ ರಾಜ್ಯದ ಜನರನ್ನು ಸಾಲದ ಸುಳಿಯಲ್ಲಿ ಸಿಲುಕಿಸಿದೆ. ಹಿಂದುಳಿದ ವರ್ಗ, ಪರಿಶಿಷ್ಟ ವರ್ಗ ಹಾಗೂ ಎಲ್ಲ ವರ್ಗದ ಜನರಿಗೆ ಈ ಬಜೆಟ್ ತೀವ್ರ ಅನ್ಯಾಯ ಮಾಡಿದೆ. ವಿತ್ತೀಯ ಕೊರತೆ ಹಾಗೂ ಸಾಲದ ಪ್ರಮಾಣ ಮಿತಿ ಮೀರಿ ಹೋಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ದೂರಿದರು.